ಪ್ರೊ.ಬಟ್ಟು ಸತ್ಯನಾರಾಯಣ ಮಾತನಾಡಿ, ‘ಈ ಕಾರ್ಯಕ್ರಮವು ನಾನು ಮಾಡಿದ ಕೆಲಸ ಮತ್ತು ಭವಿಷ್ಯದಲ್ಲಿ ಏನು ಮಾಡಬೇಕು ಎಂಬುದರ ಕುರಿತು ಒಳನೋಟ ನೀಡಿದೆ. ಎಲ್ಲಾ ಬೋಧಕ ಮತ್ತು ಬೋಧಕೇತರರಿಗೆ ಅಗತ್ಯ ಸೌಲಭ್ಯ ನೀಡಲಾಗುವುದು. ನಿಮ್ಮ ಕರ್ತವ್ಯ ಗಳನ್ನು ಪ್ರಾಮಾಣಿಕವಾಗಿ ನಿರ್ವಹಿಸಬೇಕು. ನಿಮ್ಮ ಆಯಾ ಕ್ಷೇತ್ರಗಳಲ್ಲಿ ಉತ್ತಮ ಸಾಧನೆ ಮಾಡ ಬೇಕು ಎಂಬುದು ವಿಶ್ವವಿದ್ಯಾಲಯವು ನಿರೀಕ್ಷಿಸುತ್ತದೆ’ ಎಂದು ಹೇಳಿದರು. ಕರ್ನಾಟಕ ಕೇಂದ್ರೀಯ ವಿಶ್ವ ವಿದ್ಯಾಲಯದ ಕುಲಸಚಿವ ಪ್ರೊ.ಬಸವರಾಜ ಪಿ.ಡೋಣೂರ, ವಿವಿಧ ವಿಭಾಗಗಳ ಮುಖ್ಯಸ್ಥರು, ಸಂಯೋಜಕರು, ಅಧಿಕಾರಿಗಳು ಹಾಗೂ ಸಿಬ್ಬಂದಿ ಇದ್ದರು.