ಸಂಸದ ಡಾ.ಉಮೇಶ ಜಾಧವ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಕೇಂದ್ರ ಜವಳಿ ಸಚಿವೆ ಸ್ಮೃತಿ ಇರಾಣಿ ಅವರು, ‘ಜವಳಿ ಪಾರ್ಕ್ ಸ್ಥಾಪನೆಗೆ ಎಸ್ಪಿವಿ ಸದಸ್ಯರು ವಂತಿಗೆ ಪಾವತಿಸಲು ನಿರಾಸಕ್ತಿ ತೋರಿದ್ದಾರೆ. ಪಾರ್ಕ್ ಸ್ಥಾಪನೆಗೆ ಬೇಕಾದ ಮೂಲಸೌಕರ್ಯಗಳು ಕೊರತೆ ಕಾರಣ ಇದನ್ನು ಕೈಬಿಡಲಾಗಿದೆ’ ಎಂದು ತಿಳಿಸಿದ್ದಾರೆ.