ನೇಮಕ ಕುರಿತು ‘ಪ್ರಜಾವಾಣಿ’ಯೊಂದಿಗೆ ಮಾತನಾಡಿದ ಚಂದು ಪಾಟೀಲ, ‘ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಉತ್ತಮ ಅವಕಾಶ ನೀಡಿದ್ದಾರೆ. ಇದನ್ನು ಸಮರ್ಥವಾಗಿ ಬಳಸಿಕೊಳ್ಳುವೆ. ಸಾಂಪ್ರದಾಯಿಕ ಇಂಧನದ ಜೊತೆಗೆ ನವೀಕರಿಸಬಹುದಾದ ಇಂಧನ ಮೂಲಗಳನ್ನು ಬಳಸಿಕೊಳ್ಳುವಂತೆ ರೈತರ ಮಧ್ಯೆ ಜಾಗೃತಿ ಮಾಡುವೆ. ಈ ಕ್ಷೇತ್ರದಲ್ಲಿನ ಸಂಶೋಧನೆಗಳ ಬಗ್ಗೆ ಮಾಹಿತಿ ಪಡೆದು ಅವುಗಳ ಅನುಷ್ಠಾನಕ್ಕೆ ಶ್ರಮಿಸುವೆ’ ಎಂದರು.