<p><strong>ಕಲಬುರಗಿ</strong>: ‘ವಿಶ್ವದ ಬಲಾಢ್ಯ ಆರ್ಥಿಕ ರಾಷ್ಟ್ರಗಳ ಪಟ್ಟಿಯಲ್ಲಿ ಭಾರತವು ಪ್ರಸ್ತುತ ಐದನೇ ಸ್ಥಾನದಲ್ಲಿದೆ. ಮೂರನೇ ಸ್ಥಾನಕ್ಕೆ ಏರುವ ಗುರಿಯನ್ನು ಹೊಂದಿದ್ದೇವೆ. ಇದಕ್ಕೆ ದೇಶದ ಪ್ರತಿಯೊಬ್ಬ ಪ್ರಜೆ ತಮ್ಮ ಕೊಡುಗೆ ನೀಡಬೇಕು’ ಎಂದು ಗುಲಬರ್ಗಾ ವಿಶ್ವವಿದ್ಯಾಲಯದ ಕುಲಾಧಿಪತಿಯೂ ಆಗಿರುವ ರಾಜ್ಯಪಾಲ ಥಾವರಚಂದ್ ಗೆಹಲೋತ್ ಹೇಳಿದರು.</p>.<p>ಗುಲಬರ್ಗಾ ವಿಶ್ವವಿದ್ಯಾಲಯದ ಡಾ. ಬಿ.ಆರ್.ಅಂಬೇಡ್ಕರ್ ಸಭಾಂಗಣದಲ್ಲಿ ನಡೆದ 41ನೇ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಸೋಮವಾರ ಸಾಧಕರಿಗೆ ಗೌರವ ಡಾಕ್ಟರೇಟ್ ಮತ್ತು ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಿ ಅವರು ಮಾತನಾಡಿದರು.</p>.<p>‘ಭಾರತವು ಸ್ವಾತಂತ್ರ್ಯದ ಅಮೃತ ಮಹೋತ್ಸವ ಈಚೆಗೆ ಆಚರಿಸಿಕೊಂಡಿದೆ. ಕಳೆದ 75 ವರ್ಷದ ಅವಧಿಯಲ್ಲಿ ಅನೇಕ ಕ್ಷೇತ್ರದಲ್ಲಿ ಭಾರತ ಅನನ್ಯ ಪ್ರಗತಿ ಕಂಡಿದೆ. ಮುಂದಿನ 25 ವರ್ಷ ನಮಗೆಲ್ಲ ಕರ್ತವ್ಯದ ಕಾಲವಾಗಿದ್ದು, ಸ್ವಾತಂತ್ರ್ಯದ ಶತಮಾನೋತ್ಸವ ಸಂದರ್ಭದಲ್ಲಿ ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವನ್ನಾಗಿಸಲು ಪ್ರತಿಯೊಬ್ಬರೂ ಶ್ರಮಿಸಬೇಕು’ ಎಂದು ಹೇಳಿದರು.</p>.<p>‘ಭಾರತವು ವಿಶ್ವ ಗುರುವಿನತ್ತ ಹೆಜ್ಜೆ ಇಟ್ಟಿದೆ. ಇಂದಿನ ವಿದ್ಯಾರ್ಥಿಗಳೇ ಮುಂದಿನ ಭವಿಷ್ಯವಾಗಿದ್ದಾರೆ. ಅಧುನಿಕ ತಂತ್ರಜ್ಞಾನ ಬಳಸಿಕೊಂಡು ಮಾನವ ಅಭಿವೃದ್ಧಿ ಹೊಂದಬೇಕಿದೆ. ನಮ್ಮ ದೇಶ ಸಭ್ಯ, ಸಂಸ್ಕೃತಿಗೆ ಹೆಸರುವಾಸಿ. ಇಡೀ ವಿಶ್ವವನ್ನು ‘ವಸುದೈವ ಕುಟುಂಬ’ ಪರಿಕಲ್ಪನೆಯಲ್ಲಿ ನೋಡುತ್ತದೆ. ಭಾರತ ಸೇರಿದಂತೆ ವಿಶ್ವ ಕಲ್ಯಾಣವೇ ನಮ್ಮ ಆಶಯವಾಗಿದೆ’ ಎಂದರು.</p>.<p>ಪರಿಸರ ಸಂರಕ್ಷಿಸಿ: ಇತ್ತೀಚೆಗೆ ಪರಿಸರ ಮಾಲಿನ್ಯ ಹೆಚ್ಚಾಗಿ ಕಾಣುತ್ತಿದೆ. ಇದನ್ನು ತಡೆಗಟ್ಟಲು ಪರಿಸರ ಸಂರಕ್ಷಣೆಗೆ ಎಲ್ಲರೂ ಕೈಜೋಡಿಸಬೇಕು. ಜೂನ್ 21ಕ್ಕೆ ವಿಶ್ವ ಯೋಗ ದಿನ ಆಚರಿಸಲಾಗುತ್ತಿದ್ದು, ಇದರಲ್ಲಿ ಭಾಗವಹಿಸುವ ಮೂಲಕ ನಿಮ್ಮ ಆರೋಗ್ಯದ ಜೊತೆಗೆ ಪರಿವಾರ, ಸಮಾಜದ ಸ್ವಾಸ್ಥ ಮತ್ತು ಆರೋಗ್ಯವಂತ ದೇಶ ನಿರ್ಮಿಸುವ ಅಗತ್ಯತೆ ಇದೆ ಎಂದು ಪ್ರತಿಪಾದಿಸಿದರು.</p>.<p>ವಿಶ್ವವಿದ್ಯಾಲಯದ ಸಮ ಕುಲಾಧಿಪತಿಯೂ ಆದ ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ.ಸುಧಾಕರ್ ಮಾತನಾಡಿ, ‘ಕಲ್ಯಾಣ ಕರ್ನಾಟಕ ಭಾಗದ ಶೈಕ್ಷಣಿಕ ಪ್ರಗತಿಗೆ ನಾನು ಬದ್ಧನಾಗಿದ್ದು, ಎಲ್ಲಾ ರೀತಿಯ ಸಹಕಾರ ನೀಡಲಾಗುವುದು. ಸಚಿವರಾದ ನಂತರ ಪ್ರಥಮ ಬಾರಿಗೆ ವಿ.ವಿ.ಘಟಿಕೋತ್ಸವದಲ್ಲಿ ಭಾಗವಹಿಸುವುತ್ತಿರುವುದು ಹೆಮ್ಮೆ ಎನಿಸುತ್ತಿದೆ. ಈ ಭಾಗದ ಶಿಕ್ಷಣ ಪ್ರಗತಿಗೆ 371 (ಜೆ) ಮೀಸಲಾತಿ ಪೂರಕವಾಗಿದೆ’ ಎಂದರು.</p>.<p>‘ಗುಲಬರ್ಗಾ ವಿ.ವಿ. ಶೈಕ್ಷಣಿಕ ಪ್ರಗತಿಯಲ್ಲಿ ಉತ್ತಮ ಹೆಜ್ಜೆ ಇಡುತ್ತಿದೆ. ಇತ್ತೀಚೆಗೆ ಖಾಸಗಿ ವಿ.ವಿ ಗಳು ಶಿಕ್ಷಣದಲ್ಲಿ ಸ್ಪರ್ಧೆ ನೀಡುತ್ತಿದ್ದು, ಅದನ್ನು ನಮ್ಮ ವಿಶ್ವವಿದ್ಯಾಲಯಗಳು ಸವಾಲಾಗಿ ಸ್ವೀಕರಿಸಿ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡಬೇಕು’ ಎಂದು ಸಲಹೆ ನೀಡಿದರು.</p>.<p>ಮೂವರಿಗೆ ಗೌರವ ಡಾಕ್ಟರೇಟ್ ಪ್ರದಾನ: ಶಿಲ್ಪಕಲಾ ಕ್ಷೇತ್ರದಲ್ಲಿ ಗಣನೀಯ ಸೇವೆಗೆ ಕಲಬುರಗಿ ಜಿಲ್ಲೆಯ ನಾಡೋಜ ಮಾನಯ್ಯ ಬಡಿಗೇರ್, ಶಿಕ್ಷಣ ಮತ್ತು ಸಾಮಾಜಿಕ ಕ್ಷೇತ್ರದಲ್ಲಿನ ಸಾಧನೆಗೆ ತಾತ್ಯಾರಾವ ಕಾಂಬ್ಳೆ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿನ ಸಾಧನೆಗೆ ಬೆಂಗಳೂರು ಮೂಲದ ಎನ್.ಎಸ್.ಶ್ರೀನಾಥ ಅವರಿಗೆ ರಾಜ್ಯಪಾಲರು ಮತ್ತು ಮುಖ್ಯ ಅತಿಥಿಗಳು ಗೌರವ ಡಾಕ್ಟರೇಟ್ ಪ್ರದಾನ ಮಾಡಿದರು.</p>.<p>ಇದೇ ಸಂದರ್ಭದಲ್ಲಿ 26,590 ಸ್ನಾತಕ ಪದವಿ, 4,171 ಸ್ನಾತಕೋತ್ತರ ಪದವಿ ಸೇರಿ 30,761 ಅಭ್ಯರ್ಥಿಗಳಿಗೆ ಪದವಿ ಘೋಷಿಸಲಾಯಿತು. 129 ಅಭ್ಯರ್ಥಿಗಳಿಗೆ ಪಿ.ಎಚ್.ಡಿ. ಹಾಗೂ 72 ವಿದ್ಯಾರ್ಥಿಗಳಿಗೆ 165 ಚಿನ್ನದ ಪದಕ ಪ್ರದಾನ ಮಾಡಿದರೆ, 23 ವಿದ್ಯಾರ್ಥಿಗಳಿಗೆ 15 ಚಿನ್ನದ ಪದಕವನ್ನು ನಗದು ಬಹುಮಾನಕ್ಕೆ ಪರಿವರ್ತಿಸಿ ವಿತರಿಸಲಾಯಿತು.</p>.<p>ಗುಲಬರ್ಗಾ ವಿ.ವಿ ಕುಲಪತಿ ಪ್ರೊ. ದಯಾನಂದ ಅಗಸರ್, ಕುಲಸಚಿವ ಡಾ. ಬಿ.ಶರಣಪ್ಪ, ಮೌಲ್ಯಮಾಪನ ಕುಲಸಚಿವ ಪ್ರೊ. ಜ್ಯೋತಿ ಧಮ್ಮಪ್ರಕಾಶ ಸೇರಿದಂತೆ ಅಕಾಡೆಮಿಕ್, ಸಿಂಡಿಕೇಟ್ ಸದಸ್ಯರು, ವಿವಿಧ ನಿಕಾಯದ ಡೀನ್, ಅಧಿಕಾರಿಗಳು, ಬೋಧಕ-ಬೋಧಕೇತರ ವೃಂದ, ಪದವಿ ಪಡೆದ ವಿದ್ಯಾರ್ಥಿಗಳು ಅವರ ಕುಟುಂಬ ವರ್ಗದವರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ</strong>: ‘ವಿಶ್ವದ ಬಲಾಢ್ಯ ಆರ್ಥಿಕ ರಾಷ್ಟ್ರಗಳ ಪಟ್ಟಿಯಲ್ಲಿ ಭಾರತವು ಪ್ರಸ್ತುತ ಐದನೇ ಸ್ಥಾನದಲ್ಲಿದೆ. ಮೂರನೇ ಸ್ಥಾನಕ್ಕೆ ಏರುವ ಗುರಿಯನ್ನು ಹೊಂದಿದ್ದೇವೆ. ಇದಕ್ಕೆ ದೇಶದ ಪ್ರತಿಯೊಬ್ಬ ಪ್ರಜೆ ತಮ್ಮ ಕೊಡುಗೆ ನೀಡಬೇಕು’ ಎಂದು ಗುಲಬರ್ಗಾ ವಿಶ್ವವಿದ್ಯಾಲಯದ ಕುಲಾಧಿಪತಿಯೂ ಆಗಿರುವ ರಾಜ್ಯಪಾಲ ಥಾವರಚಂದ್ ಗೆಹಲೋತ್ ಹೇಳಿದರು.</p>.<p>ಗುಲಬರ್ಗಾ ವಿಶ್ವವಿದ್ಯಾಲಯದ ಡಾ. ಬಿ.ಆರ್.ಅಂಬೇಡ್ಕರ್ ಸಭಾಂಗಣದಲ್ಲಿ ನಡೆದ 41ನೇ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಸೋಮವಾರ ಸಾಧಕರಿಗೆ ಗೌರವ ಡಾಕ್ಟರೇಟ್ ಮತ್ತು ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಿ ಅವರು ಮಾತನಾಡಿದರು.</p>.<p>‘ಭಾರತವು ಸ್ವಾತಂತ್ರ್ಯದ ಅಮೃತ ಮಹೋತ್ಸವ ಈಚೆಗೆ ಆಚರಿಸಿಕೊಂಡಿದೆ. ಕಳೆದ 75 ವರ್ಷದ ಅವಧಿಯಲ್ಲಿ ಅನೇಕ ಕ್ಷೇತ್ರದಲ್ಲಿ ಭಾರತ ಅನನ್ಯ ಪ್ರಗತಿ ಕಂಡಿದೆ. ಮುಂದಿನ 25 ವರ್ಷ ನಮಗೆಲ್ಲ ಕರ್ತವ್ಯದ ಕಾಲವಾಗಿದ್ದು, ಸ್ವಾತಂತ್ರ್ಯದ ಶತಮಾನೋತ್ಸವ ಸಂದರ್ಭದಲ್ಲಿ ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವನ್ನಾಗಿಸಲು ಪ್ರತಿಯೊಬ್ಬರೂ ಶ್ರಮಿಸಬೇಕು’ ಎಂದು ಹೇಳಿದರು.</p>.<p>‘ಭಾರತವು ವಿಶ್ವ ಗುರುವಿನತ್ತ ಹೆಜ್ಜೆ ಇಟ್ಟಿದೆ. ಇಂದಿನ ವಿದ್ಯಾರ್ಥಿಗಳೇ ಮುಂದಿನ ಭವಿಷ್ಯವಾಗಿದ್ದಾರೆ. ಅಧುನಿಕ ತಂತ್ರಜ್ಞಾನ ಬಳಸಿಕೊಂಡು ಮಾನವ ಅಭಿವೃದ್ಧಿ ಹೊಂದಬೇಕಿದೆ. ನಮ್ಮ ದೇಶ ಸಭ್ಯ, ಸಂಸ್ಕೃತಿಗೆ ಹೆಸರುವಾಸಿ. ಇಡೀ ವಿಶ್ವವನ್ನು ‘ವಸುದೈವ ಕುಟುಂಬ’ ಪರಿಕಲ್ಪನೆಯಲ್ಲಿ ನೋಡುತ್ತದೆ. ಭಾರತ ಸೇರಿದಂತೆ ವಿಶ್ವ ಕಲ್ಯಾಣವೇ ನಮ್ಮ ಆಶಯವಾಗಿದೆ’ ಎಂದರು.</p>.<p>ಪರಿಸರ ಸಂರಕ್ಷಿಸಿ: ಇತ್ತೀಚೆಗೆ ಪರಿಸರ ಮಾಲಿನ್ಯ ಹೆಚ್ಚಾಗಿ ಕಾಣುತ್ತಿದೆ. ಇದನ್ನು ತಡೆಗಟ್ಟಲು ಪರಿಸರ ಸಂರಕ್ಷಣೆಗೆ ಎಲ್ಲರೂ ಕೈಜೋಡಿಸಬೇಕು. ಜೂನ್ 21ಕ್ಕೆ ವಿಶ್ವ ಯೋಗ ದಿನ ಆಚರಿಸಲಾಗುತ್ತಿದ್ದು, ಇದರಲ್ಲಿ ಭಾಗವಹಿಸುವ ಮೂಲಕ ನಿಮ್ಮ ಆರೋಗ್ಯದ ಜೊತೆಗೆ ಪರಿವಾರ, ಸಮಾಜದ ಸ್ವಾಸ್ಥ ಮತ್ತು ಆರೋಗ್ಯವಂತ ದೇಶ ನಿರ್ಮಿಸುವ ಅಗತ್ಯತೆ ಇದೆ ಎಂದು ಪ್ರತಿಪಾದಿಸಿದರು.</p>.<p>ವಿಶ್ವವಿದ್ಯಾಲಯದ ಸಮ ಕುಲಾಧಿಪತಿಯೂ ಆದ ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ.ಸುಧಾಕರ್ ಮಾತನಾಡಿ, ‘ಕಲ್ಯಾಣ ಕರ್ನಾಟಕ ಭಾಗದ ಶೈಕ್ಷಣಿಕ ಪ್ರಗತಿಗೆ ನಾನು ಬದ್ಧನಾಗಿದ್ದು, ಎಲ್ಲಾ ರೀತಿಯ ಸಹಕಾರ ನೀಡಲಾಗುವುದು. ಸಚಿವರಾದ ನಂತರ ಪ್ರಥಮ ಬಾರಿಗೆ ವಿ.ವಿ.ಘಟಿಕೋತ್ಸವದಲ್ಲಿ ಭಾಗವಹಿಸುವುತ್ತಿರುವುದು ಹೆಮ್ಮೆ ಎನಿಸುತ್ತಿದೆ. ಈ ಭಾಗದ ಶಿಕ್ಷಣ ಪ್ರಗತಿಗೆ 371 (ಜೆ) ಮೀಸಲಾತಿ ಪೂರಕವಾಗಿದೆ’ ಎಂದರು.</p>.<p>‘ಗುಲಬರ್ಗಾ ವಿ.ವಿ. ಶೈಕ್ಷಣಿಕ ಪ್ರಗತಿಯಲ್ಲಿ ಉತ್ತಮ ಹೆಜ್ಜೆ ಇಡುತ್ತಿದೆ. ಇತ್ತೀಚೆಗೆ ಖಾಸಗಿ ವಿ.ವಿ ಗಳು ಶಿಕ್ಷಣದಲ್ಲಿ ಸ್ಪರ್ಧೆ ನೀಡುತ್ತಿದ್ದು, ಅದನ್ನು ನಮ್ಮ ವಿಶ್ವವಿದ್ಯಾಲಯಗಳು ಸವಾಲಾಗಿ ಸ್ವೀಕರಿಸಿ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡಬೇಕು’ ಎಂದು ಸಲಹೆ ನೀಡಿದರು.</p>.<p>ಮೂವರಿಗೆ ಗೌರವ ಡಾಕ್ಟರೇಟ್ ಪ್ರದಾನ: ಶಿಲ್ಪಕಲಾ ಕ್ಷೇತ್ರದಲ್ಲಿ ಗಣನೀಯ ಸೇವೆಗೆ ಕಲಬುರಗಿ ಜಿಲ್ಲೆಯ ನಾಡೋಜ ಮಾನಯ್ಯ ಬಡಿಗೇರ್, ಶಿಕ್ಷಣ ಮತ್ತು ಸಾಮಾಜಿಕ ಕ್ಷೇತ್ರದಲ್ಲಿನ ಸಾಧನೆಗೆ ತಾತ್ಯಾರಾವ ಕಾಂಬ್ಳೆ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿನ ಸಾಧನೆಗೆ ಬೆಂಗಳೂರು ಮೂಲದ ಎನ್.ಎಸ್.ಶ್ರೀನಾಥ ಅವರಿಗೆ ರಾಜ್ಯಪಾಲರು ಮತ್ತು ಮುಖ್ಯ ಅತಿಥಿಗಳು ಗೌರವ ಡಾಕ್ಟರೇಟ್ ಪ್ರದಾನ ಮಾಡಿದರು.</p>.<p>ಇದೇ ಸಂದರ್ಭದಲ್ಲಿ 26,590 ಸ್ನಾತಕ ಪದವಿ, 4,171 ಸ್ನಾತಕೋತ್ತರ ಪದವಿ ಸೇರಿ 30,761 ಅಭ್ಯರ್ಥಿಗಳಿಗೆ ಪದವಿ ಘೋಷಿಸಲಾಯಿತು. 129 ಅಭ್ಯರ್ಥಿಗಳಿಗೆ ಪಿ.ಎಚ್.ಡಿ. ಹಾಗೂ 72 ವಿದ್ಯಾರ್ಥಿಗಳಿಗೆ 165 ಚಿನ್ನದ ಪದಕ ಪ್ರದಾನ ಮಾಡಿದರೆ, 23 ವಿದ್ಯಾರ್ಥಿಗಳಿಗೆ 15 ಚಿನ್ನದ ಪದಕವನ್ನು ನಗದು ಬಹುಮಾನಕ್ಕೆ ಪರಿವರ್ತಿಸಿ ವಿತರಿಸಲಾಯಿತು.</p>.<p>ಗುಲಬರ್ಗಾ ವಿ.ವಿ ಕುಲಪತಿ ಪ್ರೊ. ದಯಾನಂದ ಅಗಸರ್, ಕುಲಸಚಿವ ಡಾ. ಬಿ.ಶರಣಪ್ಪ, ಮೌಲ್ಯಮಾಪನ ಕುಲಸಚಿವ ಪ್ರೊ. ಜ್ಯೋತಿ ಧಮ್ಮಪ್ರಕಾಶ ಸೇರಿದಂತೆ ಅಕಾಡೆಮಿಕ್, ಸಿಂಡಿಕೇಟ್ ಸದಸ್ಯರು, ವಿವಿಧ ನಿಕಾಯದ ಡೀನ್, ಅಧಿಕಾರಿಗಳು, ಬೋಧಕ-ಬೋಧಕೇತರ ವೃಂದ, ಪದವಿ ಪಡೆದ ವಿದ್ಯಾರ್ಥಿಗಳು ಅವರ ಕುಟುಂಬ ವರ್ಗದವರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>