ನಗರದ ಕೇಂದ್ರ ಬಸ್ ನಿಲ್ದಾಣದಿಂದಲೇ ಖಾಸಗಿ ವಾಹನಗಳ ಸಂಚಾರಕ್ಕೆ ಅವಕಾಶ ನೀಡಿರುವುದನ್ನು ದುರ್ಬಳಕೆ ಮಾಡಿಕೊಂಡ ಕೆಲ ವಾಹನಗಳವರು ಜೇವರ್ಗಿ, ಅಫಜಲಪುರ, ಆಳಂದ, ಕಾಳಗಿ, ಚಿಂಚೋಳಿ, ಚಿತ್ತಾಪುರ ಹಾಗೂ ಪಕ್ಕದ ಜಿಲ್ಲೆಗಳಿಗೆ ತೆರಳುವ ಪ್ರಯಾಣಿಕರಿಂದ ವಿಪರೀತ ಹಣವನ್ನು ವಸೂಲಿ ಮಾಡುತ್ತಿರುವುದಾಗಿ ಹಲವು ಪ್ರಯಾಣಿಕರು ಆರೋಪಿಸಿ ವಾಹನಗಳ ಚಾಲಕರೊಂದಿಗೆ ವಾಗ್ವಾದ ನಡೆಸಿದರು.