ಏ. 11ರಂದು ಬೆಳಿಗ್ಗೆ ಕಾಲಭೈರವೇಶ್ವರ ಮತ್ತು ರಾಮಲಿಂಗೇಶ್ವರ ಕರ್ತೃ ಗದ್ದುಗೆಗೆ ಮಹಾ ರುದ್ರಾಭೀಷೇಕ, ಪುರವಂತರಿಂದ ಅಗ್ಗಿ ಪ್ರವೇಶ ಜರುಗುವುದು. ಬೆಳಿಗ್ಗೆ 11ರಿಂದ ಗ್ರಾಮದ ಮಹಾಂತೇಶ್ವರ ವಿರಕ್ತ ಮಠದಿಂದ ಪಲ್ಲಕ್ಕಿ ಕಳಸ, ನಂದಿಕೋಲ, ಕುಂಭ ಸಕಲ ವಾದ್ಯ ವೈಭವದೊಂದಿಗೆ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಹೊರಟು ಸಂಜೆ ಮಂದಿರಕ್ಕೆ ತಲುಪುವುದು. ಸಂಜೆ 6ಕ್ಕೆ ರಥೋತ್ಸವ ಜರುಗಲಿದೆ. ಸಂಜೆ 7ಕ್ಕೆ ಸಂಗೀತ ಮತ್ತು ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ಕಾಲಭೈರವ ಸದ್ಭಕ್ತ ಮಂಡಳಿ ತಿಳಿಸಿದೆ.