<p><strong>ಕಲಬುರಗಿ:</strong> ನೀರಾವರಿ ಇಲಾಖೆಯಲ್ಲಿ ‘ಡಿ’ ಗ್ರೂಪ್ ನೌಕರಿ ಕೊಡಿಸುವುದಾಗಿ ನಂಬಿಸಿ ಹಣ ಪಡೆದು ವಂಚಿಸಿದ ಆರೋಪದಲ್ಲಿ ಅಶೋಕ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ಆಳಂದ ತಾಲ್ಲೂಕಿನ ಇಕ್ಕಳಕಿ ಗ್ರಾಮದ ನಿವಾಸಿ, ಪೆಟ್ರೋಲ್ ಪಂಪ್ನಲ್ಲಿ ಕೆಲಸ ಮಾಡಿತ್ತಿದ್ದ ಅಶೋಕ ಹಣಮಂತರಾಯ ನೀಡಿದ ದೂರಿನ ಅನ್ವಯ ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲ್ಲೂಕಿನ ನಾಗರಾಳ ನಿವಾಸಿ ಸಿಕಂದರ್ ಬಾಸಗಿ ವಿರುದ್ಧ ಐಪಿಸಿ ಸೆಕ್ಷನ್ 420, 406 ಅಡಿ ಪ್ರಕರಣ ದಾಖಲಾಗಿದೆ.</p>.<p>ಪೆಟ್ರೋಲ್ ಪಂಪ್ನಲ್ಲಿ ಕೆಲಸ ಮಾಡುತ್ತಿದ್ದ ಅಶೋಕ ಅವರಿಗೆ ಸಿಕಂದರ್ ಪರಿಚಯವಾಗಿದ್ದು, ಆಗಾಗ ಚಹಾ ಕುಡಿದು ಮಾತಾಡುತ್ತಿದ್ದರು. ಅಶೋಕನ ವಿದ್ಯಾಭ್ಯಾಸ ವಿಚಾರಿಸಿದ ಸಿಕಂದರ್, ನೀರಾವರಿ ಇಲಾಖೆಯಲ್ಲಿ ಗುತ್ತಿಗೆ ಆಧಾರದ ಮೇಲೆ ‘ಡಿ’ ಗ್ರೂಪ್ ನೌಕರಿ ಕೊಡಿಸುವುದಾಗಿ ನಂಬಿಸಿದ. ನೌಕರಿಗಾಗಿ ₹ 8 ಲಕ್ಷಕ್ಕೆ ಒಪ್ಪಂದ ಮಾಡಿಕೊಂಡು, ₹ 6 ಲಕ್ಷ ಮುಂಗಡವಾಗಿ ಪಡೆದಿದ್ದ. ಎರಡು ವರ್ಷಗಳಾದರೂ ನೌಕರಿ ಕೊಡಿಸದೆ, ಹಣವೂ ಮರಳಿಸದೆ ವಂಚಿಸಿದ್ದಾನೆ ಎಂದು ಆರೋಪಿಸಿ ಅಶೋಕ ದೂರು ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ:</strong> ನೀರಾವರಿ ಇಲಾಖೆಯಲ್ಲಿ ‘ಡಿ’ ಗ್ರೂಪ್ ನೌಕರಿ ಕೊಡಿಸುವುದಾಗಿ ನಂಬಿಸಿ ಹಣ ಪಡೆದು ವಂಚಿಸಿದ ಆರೋಪದಲ್ಲಿ ಅಶೋಕ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ಆಳಂದ ತಾಲ್ಲೂಕಿನ ಇಕ್ಕಳಕಿ ಗ್ರಾಮದ ನಿವಾಸಿ, ಪೆಟ್ರೋಲ್ ಪಂಪ್ನಲ್ಲಿ ಕೆಲಸ ಮಾಡಿತ್ತಿದ್ದ ಅಶೋಕ ಹಣಮಂತರಾಯ ನೀಡಿದ ದೂರಿನ ಅನ್ವಯ ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲ್ಲೂಕಿನ ನಾಗರಾಳ ನಿವಾಸಿ ಸಿಕಂದರ್ ಬಾಸಗಿ ವಿರುದ್ಧ ಐಪಿಸಿ ಸೆಕ್ಷನ್ 420, 406 ಅಡಿ ಪ್ರಕರಣ ದಾಖಲಾಗಿದೆ.</p>.<p>ಪೆಟ್ರೋಲ್ ಪಂಪ್ನಲ್ಲಿ ಕೆಲಸ ಮಾಡುತ್ತಿದ್ದ ಅಶೋಕ ಅವರಿಗೆ ಸಿಕಂದರ್ ಪರಿಚಯವಾಗಿದ್ದು, ಆಗಾಗ ಚಹಾ ಕುಡಿದು ಮಾತಾಡುತ್ತಿದ್ದರು. ಅಶೋಕನ ವಿದ್ಯಾಭ್ಯಾಸ ವಿಚಾರಿಸಿದ ಸಿಕಂದರ್, ನೀರಾವರಿ ಇಲಾಖೆಯಲ್ಲಿ ಗುತ್ತಿಗೆ ಆಧಾರದ ಮೇಲೆ ‘ಡಿ’ ಗ್ರೂಪ್ ನೌಕರಿ ಕೊಡಿಸುವುದಾಗಿ ನಂಬಿಸಿದ. ನೌಕರಿಗಾಗಿ ₹ 8 ಲಕ್ಷಕ್ಕೆ ಒಪ್ಪಂದ ಮಾಡಿಕೊಂಡು, ₹ 6 ಲಕ್ಷ ಮುಂಗಡವಾಗಿ ಪಡೆದಿದ್ದ. ಎರಡು ವರ್ಷಗಳಾದರೂ ನೌಕರಿ ಕೊಡಿಸದೆ, ಹಣವೂ ಮರಳಿಸದೆ ವಂಚಿಸಿದ್ದಾನೆ ಎಂದು ಆರೋಪಿಸಿ ಅಶೋಕ ದೂರು ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>