<p><strong>ಕಲಬುರಗಿ:</strong> ‘ರಸಾಯನ ವಿಜ್ಞಾನ ಪರಮಾಣುಗಳ ಆಟದಿಂದ ಹಿಡಿದು ಪ್ರಪಂಚದ ಶಾಂತಿ ಮತ್ತು ಮಾನವ ಸಂಬಂಧಗಳವರೆಗೆ ಎಲ್ಲವನ್ನೂ ಅನ್ವೇಷಿಸುತ್ತದೆ. ಅದನ್ನು ಕಲಿಯುವುದರಿಂದ ಜಗತ್ತು ಸುಧಾರಿಸುತ್ತದೆ’ ಎಂದು ಕರ್ನಾಟಕ ರಾಜ್ಯ ಪದವಿಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘದ ರಾಜ್ಯಾಧ್ಯಕ್ಷ ಜಿ.ಬಿ.ಈರೇಗೌಡ ಹೇಳಿದರು.</p>.<p>ನಗರದ ಗುರು ನಾಗಲಿಂಗೇಶ್ವರ ಕಾಲೇಜಿನಲ್ಲಿ ನಡೆದ ಜಿಲ್ಲೆಯ ಪದವಿಪೂರ್ವ ಕಾಲೇಜುಗಳ ರಸಾಯನ ವಿಜ್ಞಾನ ಉಪನ್ಯಾಸಕರ ವೇದಿಕೆಯ ಬೆಳ್ಳಿ ಹಬ್ಬ ಕಾರ್ಯಕ್ರಮದಲ್ಲಿ ಮಾತನಾಡಿ, ‘ಇದು ವಿಜ್ಞಾನದ ಭಾಗ ಮಾತ್ರವಲ್ಲ. ಪ್ರೀತಿ, ಬದಲಾವಣೆ ಮತ್ತು ಜೀವನದ ಬಗ್ಗೆಯೂ ಮಾತನಾಡುತ್ತದೆ’ ಎಂದರು.</p>.<p>ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ ವಿಭಾಗ) ಉಪನಿರ್ದೇಶಕ ಸುರೇಶ್ ಅಕ್ಕಣ್ಣ ಮಾತನಾಡಿ, ‘ಈ ಸಂಘ 25 ವರ್ಷಗಳವರೆಗೆ ನಿರಂತರವಾಗಿ ಕಾರ್ಯ ಚಟುವಟಿಕೆ ನಡೆಸುತ್ತಿರುವುದು ಶ್ಲಾಘನೀಯ. ಈ ಬಾರಿ ದ್ವಿತೀಯ ಪಿಯುಸಿ ಫಲಿತಾಂಶ ಹೆಚ್ಚಿಸಲು ಎಲ್ಲರೂ ಶ್ರಮಿಸಬೇಕು’ ಎಂದು ಹೇಳಿದರು.</p>.<p>ತಿಪಟೂರು ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಶಿವಕುಮಾರ ಎಂ.ಡಿ., ಎಂ.ಎನ್.ಹೊಸೂರು ಮಾತನಾಡಿದರು. ರಾಜಕುಮಾರ ಬಾಸುತ್ಕರ ಅಧ್ಯಕ್ಷತೆ ವಹಿಸಿದ್ದರು.</p>.<p>ಪ್ರಾಚಾರ್ಯರ ಸಂಘದ ಜಿಲ್ಲಾಧ್ಯಕ್ಷ ಶಿವಾನಂದ ಖಜೂರಿ, ಪ್ರಹ್ಲಾದ ಭುರ್ಲಿ, ನಿತೀನ್ ನಾಯಕ, ವಿಭಾಗೀಯ ಅಧ್ಯಕ್ಷ ಎಂ.ವೀರನಗೌಡ, ಶಶಿಕಾಂತ ಗುಳೇದ ಹಾಜರಿದ್ದರು.</p>.<p>ಪ್ರಾಚಾರ್ಯ ಶಿವರಾಜ ಶೀಲವಂತ ಸ್ವಾಗತಿಸಿದರು. ಗುರುರಾಜ ಕುಲಕರ್ಣಿ ನಿರೂಪಿಸಿದರು. ಬಸವರಾಜ ಅಂಗಡಿ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ:</strong> ‘ರಸಾಯನ ವಿಜ್ಞಾನ ಪರಮಾಣುಗಳ ಆಟದಿಂದ ಹಿಡಿದು ಪ್ರಪಂಚದ ಶಾಂತಿ ಮತ್ತು ಮಾನವ ಸಂಬಂಧಗಳವರೆಗೆ ಎಲ್ಲವನ್ನೂ ಅನ್ವೇಷಿಸುತ್ತದೆ. ಅದನ್ನು ಕಲಿಯುವುದರಿಂದ ಜಗತ್ತು ಸುಧಾರಿಸುತ್ತದೆ’ ಎಂದು ಕರ್ನಾಟಕ ರಾಜ್ಯ ಪದವಿಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘದ ರಾಜ್ಯಾಧ್ಯಕ್ಷ ಜಿ.ಬಿ.ಈರೇಗೌಡ ಹೇಳಿದರು.</p>.<p>ನಗರದ ಗುರು ನಾಗಲಿಂಗೇಶ್ವರ ಕಾಲೇಜಿನಲ್ಲಿ ನಡೆದ ಜಿಲ್ಲೆಯ ಪದವಿಪೂರ್ವ ಕಾಲೇಜುಗಳ ರಸಾಯನ ವಿಜ್ಞಾನ ಉಪನ್ಯಾಸಕರ ವೇದಿಕೆಯ ಬೆಳ್ಳಿ ಹಬ್ಬ ಕಾರ್ಯಕ್ರಮದಲ್ಲಿ ಮಾತನಾಡಿ, ‘ಇದು ವಿಜ್ಞಾನದ ಭಾಗ ಮಾತ್ರವಲ್ಲ. ಪ್ರೀತಿ, ಬದಲಾವಣೆ ಮತ್ತು ಜೀವನದ ಬಗ್ಗೆಯೂ ಮಾತನಾಡುತ್ತದೆ’ ಎಂದರು.</p>.<p>ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ ವಿಭಾಗ) ಉಪನಿರ್ದೇಶಕ ಸುರೇಶ್ ಅಕ್ಕಣ್ಣ ಮಾತನಾಡಿ, ‘ಈ ಸಂಘ 25 ವರ್ಷಗಳವರೆಗೆ ನಿರಂತರವಾಗಿ ಕಾರ್ಯ ಚಟುವಟಿಕೆ ನಡೆಸುತ್ತಿರುವುದು ಶ್ಲಾಘನೀಯ. ಈ ಬಾರಿ ದ್ವಿತೀಯ ಪಿಯುಸಿ ಫಲಿತಾಂಶ ಹೆಚ್ಚಿಸಲು ಎಲ್ಲರೂ ಶ್ರಮಿಸಬೇಕು’ ಎಂದು ಹೇಳಿದರು.</p>.<p>ತಿಪಟೂರು ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಶಿವಕುಮಾರ ಎಂ.ಡಿ., ಎಂ.ಎನ್.ಹೊಸೂರು ಮಾತನಾಡಿದರು. ರಾಜಕುಮಾರ ಬಾಸುತ್ಕರ ಅಧ್ಯಕ್ಷತೆ ವಹಿಸಿದ್ದರು.</p>.<p>ಪ್ರಾಚಾರ್ಯರ ಸಂಘದ ಜಿಲ್ಲಾಧ್ಯಕ್ಷ ಶಿವಾನಂದ ಖಜೂರಿ, ಪ್ರಹ್ಲಾದ ಭುರ್ಲಿ, ನಿತೀನ್ ನಾಯಕ, ವಿಭಾಗೀಯ ಅಧ್ಯಕ್ಷ ಎಂ.ವೀರನಗೌಡ, ಶಶಿಕಾಂತ ಗುಳೇದ ಹಾಜರಿದ್ದರು.</p>.<p>ಪ್ರಾಚಾರ್ಯ ಶಿವರಾಜ ಶೀಲವಂತ ಸ್ವಾಗತಿಸಿದರು. ಗುರುರಾಜ ಕುಲಕರ್ಣಿ ನಿರೂಪಿಸಿದರು. ಬಸವರಾಜ ಅಂಗಡಿ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>