ತಕ್ಷಣವೇ ಅಂಬುಲೆನ್ಸ್ ಒದಗಿಸುವಂತೆ ಹಲವು ಬಾರಿ ಕೋರಿದರೂ ಸಿಬ್ಬಂದಿ ಸ್ಪಂದಿಸಿಲ್ಲ. ಇದರಿಂದಾಗಿ ಜಿಲ್ಲಾಸ್ಪತ್ರೆಗೆ ಬಾಲಕಿಯನ್ನು ಕರೆದೊಯ್ಯಲು ವಿಳಂಬ ಆಗಿದೆ. ಬಾಲಕಿ ಭಾನುವಾರ ಕಲಬುರ್ಗಿ ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ. ಸೇಡಂನ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿದ್ದರೆ ಬಾಲಕಿ ಬದುಕುತ್ತಿದ್ದಳು. ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದಿರುವುದೇ ಬಾಲಕಿಯ ಸಾವಿಗೆ ಕಾರಣ ಎಂದು ಪ್ರತಿಭಟನೆ ನಡೆಸಿದರು.