ಚಿಂಚೋಳಿ ತಾಲ್ಲೂಕಿನ ವಿವಿಧೆಡೆ ಭಾನುವಾರ ಕೂಡ ಭಾರಿ ಮಳೆಯಾಗಿದ್ದು, ಪ್ರವಾಹ ಪರಿಸ್ಥಿತಿ ತಲೆದೋರಿದೆ. ಸಾಲೇಬೀರನಹಳ್ಳಿ, ದೇಗಲಮಡಿ, ತುಮಕುಂಟಾ, ಶಿರೋಳ್ಳಿ, ಕೆರೋಳ್ಳಿ, ಬೆನಕನಳ್ಳಿ, ಮೊದಲಾದ ಗ್ರಾಮಗಳಲ್ಲಿ ಪ್ರವಾಹದ ನೀರು ಮನೆಗಳಿಗೆ ನುಗ್ಗಿದೆ.
ಕಾಗಿನಾ ನದಿ ಹಾಗೂ ಹಳ್ಳ–ಕೊಳ್ಳಗಳಲ್ಲಿ ಅಪಾರ ಪ್ರಮಾಣದ ನೀರು ಹರಿಯುತ್ತಿದೆ. ಇದರಿಂದ ಗ್ರಾಮದೊಳಗೆ ನೀರು ನುಗ್ಗಿ ಜನ ಪರದಾಡುವಂತಾಗಿದೆ. ಸುಮಾರು 200ಕ್ಕೂ ಹೆಚ್ಚು ಮನೆಗಳು ಜಲಾವೃತವಾಗಿವೆ.