ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೈಕ್ ಡಿಕ್ಕಿ: ವ್ಯಕ್ತಿ ಸಾವು

Last Updated 15 ನವೆಂಬರ್ 2020, 2:55 IST
ಅಕ್ಷರ ಗಾತ್ರ

ಚಿಂಚೋಳಿ: ತಾಲ್ಲೂಕಿನ ಕಲಭಾವಿ ತಾಂಡಾ ಕ್ರಾಸ್‌ನಲ್ಲಿ ಶನಿವಾರ ಬೈಕ್‌ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ವೃದ್ಧ ಸ್ಥಳದಲ್ಲೇ
ಮೃತಪಟ್ಟಿದ್ದಾರೆ.

ಚಿಂಚೋಳಿಯ ನಿವಾಸಿ ರಾಮಚಂದ್ರ ಕಲಭಾವಿ (60) ಮೃತಪಟ್ವರು. ಶನಿವಾರ ಮಧ್ಯಾಹ್ನ ರಸ್ತೆ ಪಕ್ಕದಲ್ಲಿ ನಡೆದುಕೊಂಡ ಹೋಗಬೇಕಾದರೆ ಹಿಂದಿನಿಂದ ವೇಗವಾಗಿ ಬಂದ್‌ ಬೈಕ್‌ ಸವಾರ ಇವರಿಗೆ ನೇರವಾಗಿ ಬೈಕ್‌ ಗುದ್ದಿಸಿದ. ಬಿದ್ದ ರಭಸಕ್ಕೆ ರಾಮಚಂದ್ರ ಅವರು ಸ್ಥಳದಲ್ಲೇ ಜೀವ ಬಿಟ್ಟರು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಘಟನೆಯಲ್ಲಿ ಬೈಕ್ ಸವಾರ ಉಮೇಶ ಲಕ್ಷ್ಮಣ ರಾಠೋಡ ಗಾಯಗೊಂಡಿದ್ದಾರೆ. ಸಬ್ ಇನ್‌ಸ್ಪೆಕ್ಟರ್ ರಾಜಶೇಖರ ರಾಠೋಡ ಭೇಟಿ ಸ್ಥಳಕ್ಕೆ ಪರಿಶೀಲಿಸಿದರು.

ಮೃತನ ಪುತ್ರ ಲಕ್ಷ್ಮಿಕಾಂತ್ ಕಲಭಾವಿ ನೀಡಿದ ದೂರಿನ ಮೇರೆಗೆ ಚಿಂಚೋಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT