<p><strong>ಚಿಂಚೋಳಿ: ‘</strong>ಬಸವೇಶ್ವರರು ವಿಶ್ವದ ಶ್ರೇಷ್ಠ ತತ್ವಜ್ಞಾನಿಗಳಲ್ಲಿ ಒಬ್ಬರಾಗಿದ್ದಾರೆ. ಬಸವಣ್ಣನವರ ತತ್ವಕ್ಕೆ ಭಾರತದಲ್ಲಿ ಪ್ರಚಾರದ ಕೊರತೆಯಿದೆ. ಆದರೆ ಈಗ ವಿದೇಶಗಳಲ್ಲಿಬಸವ ತತ್ವಕ್ಕೆ ಹೆಚ್ಚು ಮಾನ್ಯತೆ ದೊರೆಯುತ್ತಿದೆ’ ಎಂದು ಜಿಲ್ಲಾ ಬಸವ ಜಯಂತ್ಯುತ್ಸವ ಸಮಿತಿ ಅಧ್ಯಕ್ಷ ಹಾಗೂ ಶಾಸಕ ಬಿ.ಆರ್ ಪಾಟೀಲ ತಿಳಿಸಿದರು.</p>.<p>ಪಟ್ಟಣದಲ್ಲಿ ಕಲಬುರಗಿಯಲ್ಲಿ ನಡೆಯಲಿರುವ ಬಸವ ಜಯಂತ್ಯುತ್ಸವದ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಸೋಮವಾರ ಅವರು ಮಾತನಾಡಿದರು.</p>.<p>‘ಕರ್ನಾಟಕ ಸರ್ಕಾರ ಬಸವೇಶ್ವರರಿಗೆ ಸಾಂಸ್ಕೃತಿಕ ನಾಯಕ ಎಂದು ಘೋಷಿಸಿದೆ. ಅವರ ತತ್ವ ಎಲ್ಲೆಡೆ ಪ್ರಸಾರವಾಗಬೇಕು. ಇದಕ್ಕಾಗಿ ಪ್ರತಿಯೊಬ್ಬರು ಕೈಜೋಡಿಸಬೇಕು. ಸಹಸ್ರಾರು ಸಂಖ್ಯೆಯಲ್ಲಿ ಚಿಂಚೋಳಿಯಿಂದ ಬಸವ ಜಯಂತಿಯಲ್ಲಿ ಪಾಲ್ಗೊಳ್ಳಬೇಕು’ ಎಂದು ಮನವಿ ಮಾಡಿದರು.</p>.<p>ವಿಧಾನ ಪರಿಷತ್ ಸದಸ್ಯ ಬಿ.ಜಿ.ಪಾಟೀಲ, ಕೆಪಿಸಿಸಿ ಉಪಾಧ್ಯಕ್ಷ ಸುಭಾಷ ರಾಠೋಡ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆ ಜಿಲ್ಲಾ ಅಧ್ಯಕ್ಷ ಶರಣು ಮೋದಿ, ರಾಷ್ಟ್ರೀಯ ಬಸವ ದಳದ ಆರ್. ಶೆಟಕಾರ, ರವೀಂದ್ರ ಶಾಬಾದಿ, ಹಿರಿಯ ಕಾಂಗ್ರೆಸ್ ಮುಖಂಡ ಬಾಬುರಾವ್ ಪಾಟೀಲ, ಮಹಾಸಭೆ ತಾಲ್ಲೂಕು ಅಧ್ಯಕ್ಷ ಶರಣು ಪಾಟೀಲ ಮಾತನಾಡಿದರು.</p>.<p>ವೇದಿಕೆಯಲ್ಲಿ ಜಗನ್ನಾಥ ಈದಲಾಯಿ, ಚಿತ್ರಶೇಖರ ಪಾಟೀಲ, ದೀಪಕನಾಗ ಪುಣ್ಯಶೆಟ್ಟಿ, ಬಸವಣ್ಣ ಪಾಟೀಲ, ನಂದಿಕುಮಾರ, ವೀರೇಶ ಯಂಪಳ್ಳಿ, ಶಂಬುಲಿಂಗ ಶಿವಪುರಿ, ಹಾಪಕಾಮ್ಸ ಅಧ್ಯಕ್ಷ ಮಲ್ಲಿಕಾರ್ಜುನ ಭೂಶೆಟ್ಟಿ, ರಾಜಶೇಖರ ಹಿತ್ತಲ್, ಕಸಾಪ ಅಧ್ಯಕ್ಷ ಸುರೇಶ ದೇಶಪಾಂಡೆ, ಮಲ್ಲಿನಾಥ ಪಾಟೀಲ ಕಾಳಗಿ ಮೊದಲಾದವರು ಇದ್ದರು. ಮಲ್ಲಿಕಾರ್ಜುನ ಪಾಲಾಮೂರ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಂಚೋಳಿ: ‘</strong>ಬಸವೇಶ್ವರರು ವಿಶ್ವದ ಶ್ರೇಷ್ಠ ತತ್ವಜ್ಞಾನಿಗಳಲ್ಲಿ ಒಬ್ಬರಾಗಿದ್ದಾರೆ. ಬಸವಣ್ಣನವರ ತತ್ವಕ್ಕೆ ಭಾರತದಲ್ಲಿ ಪ್ರಚಾರದ ಕೊರತೆಯಿದೆ. ಆದರೆ ಈಗ ವಿದೇಶಗಳಲ್ಲಿಬಸವ ತತ್ವಕ್ಕೆ ಹೆಚ್ಚು ಮಾನ್ಯತೆ ದೊರೆಯುತ್ತಿದೆ’ ಎಂದು ಜಿಲ್ಲಾ ಬಸವ ಜಯಂತ್ಯುತ್ಸವ ಸಮಿತಿ ಅಧ್ಯಕ್ಷ ಹಾಗೂ ಶಾಸಕ ಬಿ.ಆರ್ ಪಾಟೀಲ ತಿಳಿಸಿದರು.</p>.<p>ಪಟ್ಟಣದಲ್ಲಿ ಕಲಬುರಗಿಯಲ್ಲಿ ನಡೆಯಲಿರುವ ಬಸವ ಜಯಂತ್ಯುತ್ಸವದ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಸೋಮವಾರ ಅವರು ಮಾತನಾಡಿದರು.</p>.<p>‘ಕರ್ನಾಟಕ ಸರ್ಕಾರ ಬಸವೇಶ್ವರರಿಗೆ ಸಾಂಸ್ಕೃತಿಕ ನಾಯಕ ಎಂದು ಘೋಷಿಸಿದೆ. ಅವರ ತತ್ವ ಎಲ್ಲೆಡೆ ಪ್ರಸಾರವಾಗಬೇಕು. ಇದಕ್ಕಾಗಿ ಪ್ರತಿಯೊಬ್ಬರು ಕೈಜೋಡಿಸಬೇಕು. ಸಹಸ್ರಾರು ಸಂಖ್ಯೆಯಲ್ಲಿ ಚಿಂಚೋಳಿಯಿಂದ ಬಸವ ಜಯಂತಿಯಲ್ಲಿ ಪಾಲ್ಗೊಳ್ಳಬೇಕು’ ಎಂದು ಮನವಿ ಮಾಡಿದರು.</p>.<p>ವಿಧಾನ ಪರಿಷತ್ ಸದಸ್ಯ ಬಿ.ಜಿ.ಪಾಟೀಲ, ಕೆಪಿಸಿಸಿ ಉಪಾಧ್ಯಕ್ಷ ಸುಭಾಷ ರಾಠೋಡ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆ ಜಿಲ್ಲಾ ಅಧ್ಯಕ್ಷ ಶರಣು ಮೋದಿ, ರಾಷ್ಟ್ರೀಯ ಬಸವ ದಳದ ಆರ್. ಶೆಟಕಾರ, ರವೀಂದ್ರ ಶಾಬಾದಿ, ಹಿರಿಯ ಕಾಂಗ್ರೆಸ್ ಮುಖಂಡ ಬಾಬುರಾವ್ ಪಾಟೀಲ, ಮಹಾಸಭೆ ತಾಲ್ಲೂಕು ಅಧ್ಯಕ್ಷ ಶರಣು ಪಾಟೀಲ ಮಾತನಾಡಿದರು.</p>.<p>ವೇದಿಕೆಯಲ್ಲಿ ಜಗನ್ನಾಥ ಈದಲಾಯಿ, ಚಿತ್ರಶೇಖರ ಪಾಟೀಲ, ದೀಪಕನಾಗ ಪುಣ್ಯಶೆಟ್ಟಿ, ಬಸವಣ್ಣ ಪಾಟೀಲ, ನಂದಿಕುಮಾರ, ವೀರೇಶ ಯಂಪಳ್ಳಿ, ಶಂಬುಲಿಂಗ ಶಿವಪುರಿ, ಹಾಪಕಾಮ್ಸ ಅಧ್ಯಕ್ಷ ಮಲ್ಲಿಕಾರ್ಜುನ ಭೂಶೆಟ್ಟಿ, ರಾಜಶೇಖರ ಹಿತ್ತಲ್, ಕಸಾಪ ಅಧ್ಯಕ್ಷ ಸುರೇಶ ದೇಶಪಾಂಡೆ, ಮಲ್ಲಿನಾಥ ಪಾಟೀಲ ಕಾಳಗಿ ಮೊದಲಾದವರು ಇದ್ದರು. ಮಲ್ಲಿಕಾರ್ಜುನ ಪಾಲಾಮೂರ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>