<p><strong>ಚಿಂಚೋಳಿ</strong>: ಪಟ್ಟಣದ ಬಸ್ ನಿಲ್ದಾಣದಲ್ಲಿ ಅಧಿಕಾರಿಗಳು ಪ್ರಯಾಣಿಕರಿಗೆ ಶುದ್ಧ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಿದ್ದಾರೆ.</p>.<p>ಬಸ್ನಿಲ್ದಾಣದಲ್ಲಿ ಕುಡಿಯುವ ನೀರಿನ ಸೌಲಭ್ಯ ಇಲ್ಲದಿರುವುದರಿಂದ ಪ್ರಯಾಣಿಕರಿಗೆ ಹೆಚ್ಚಿನ ತೊಂದರೆಯಾಗಿತ್ತು. ನೀರು ಖರೀದಿಸಿ ಕುಡಿಯುವಂತಾಗಿತ್ತು. ಚಾಲಕರು, ನಿರ್ವಾಹಕರು, ಪ್ರಯಾಣಿಕರು ಮುಖ ತೊಳೆದುಕೊಳ್ಳುವುದಕ್ಕೂ ನೀರಿರಲಿಲ್ಲ.</p>.<p>ಈ ಕುರಿತು ‘ಪ್ರಜಾವಾಣಿ’ಯಲ್ಲಿ ‘ಬಸ್ ನಿಲ್ದಾಣದಲ್ಲಿ ಕುಡಿಯುವ ನೀರಿನ ಸಮಸ್ಯೆ’ ಎಂದು ಡಿಸೆಂಬರ್ 3ರಂದು ವರದಿ ಪ್ರಕಟಿಸಲಾಗಿತ್ತು. ಎಚ್ಚೆತ್ತುಕೊಂಡ ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಅಧಿಕಾರಿಗಳು ಹೊಸದಾಗಿ ಕೊಳವೆ ಬಾವಿ ಕೊರೆಯಿಸಿ, ಮೋಟಾರ್ ಅಳವಡಿಸಿ ನೀರಿನ ಸೌಲಭ್ಯ ಕಲ್ಪಿಸಿದ್ದಾರೆ.</p>.<p>ನಿಯಂತ್ರಕರ ಕೊಠಡಿಯಲ್ಲಿ ನೀರು ಶುದ್ಧೀಕರಣ ಘಟಕ ಸ್ಥಾಪಿಸಿ ಶುದ್ಧಿಕರಿಸಿದ ನೀರು ಪ್ರಯಾಣಿಕರಿಗೆ ಕುಡಿಯಲು ನೀರಿನ ತೊಟ್ಟಿಯ ಪಕ್ಕದಲ್ಲಿಯೇ ಟೇಬಲ್ ಹಾಕಿ ಎರಡು ಡ್ರಮ್ ಇಡಲಾಗಿದೆ. ನಿತ್ಯ 10 ಡ್ರಮ್ ನೀರು ಖಾಲಿಯಾಗುತ್ತಿದೆ ಎಂದು ಬಸ್ ಘಟಕದ ವ್ಯವಸ್ಥಾಪಕ ಸುರೇಶ ತೆಗಲತಿಪ್ಪಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಂಚೋಳಿ</strong>: ಪಟ್ಟಣದ ಬಸ್ ನಿಲ್ದಾಣದಲ್ಲಿ ಅಧಿಕಾರಿಗಳು ಪ್ರಯಾಣಿಕರಿಗೆ ಶುದ್ಧ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಿದ್ದಾರೆ.</p>.<p>ಬಸ್ನಿಲ್ದಾಣದಲ್ಲಿ ಕುಡಿಯುವ ನೀರಿನ ಸೌಲಭ್ಯ ಇಲ್ಲದಿರುವುದರಿಂದ ಪ್ರಯಾಣಿಕರಿಗೆ ಹೆಚ್ಚಿನ ತೊಂದರೆಯಾಗಿತ್ತು. ನೀರು ಖರೀದಿಸಿ ಕುಡಿಯುವಂತಾಗಿತ್ತು. ಚಾಲಕರು, ನಿರ್ವಾಹಕರು, ಪ್ರಯಾಣಿಕರು ಮುಖ ತೊಳೆದುಕೊಳ್ಳುವುದಕ್ಕೂ ನೀರಿರಲಿಲ್ಲ.</p>.<p>ಈ ಕುರಿತು ‘ಪ್ರಜಾವಾಣಿ’ಯಲ್ಲಿ ‘ಬಸ್ ನಿಲ್ದಾಣದಲ್ಲಿ ಕುಡಿಯುವ ನೀರಿನ ಸಮಸ್ಯೆ’ ಎಂದು ಡಿಸೆಂಬರ್ 3ರಂದು ವರದಿ ಪ್ರಕಟಿಸಲಾಗಿತ್ತು. ಎಚ್ಚೆತ್ತುಕೊಂಡ ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಅಧಿಕಾರಿಗಳು ಹೊಸದಾಗಿ ಕೊಳವೆ ಬಾವಿ ಕೊರೆಯಿಸಿ, ಮೋಟಾರ್ ಅಳವಡಿಸಿ ನೀರಿನ ಸೌಲಭ್ಯ ಕಲ್ಪಿಸಿದ್ದಾರೆ.</p>.<p>ನಿಯಂತ್ರಕರ ಕೊಠಡಿಯಲ್ಲಿ ನೀರು ಶುದ್ಧೀಕರಣ ಘಟಕ ಸ್ಥಾಪಿಸಿ ಶುದ್ಧಿಕರಿಸಿದ ನೀರು ಪ್ರಯಾಣಿಕರಿಗೆ ಕುಡಿಯಲು ನೀರಿನ ತೊಟ್ಟಿಯ ಪಕ್ಕದಲ್ಲಿಯೇ ಟೇಬಲ್ ಹಾಕಿ ಎರಡು ಡ್ರಮ್ ಇಡಲಾಗಿದೆ. ನಿತ್ಯ 10 ಡ್ರಮ್ ನೀರು ಖಾಲಿಯಾಗುತ್ತಿದೆ ಎಂದು ಬಸ್ ಘಟಕದ ವ್ಯವಸ್ಥಾಪಕ ಸುರೇಶ ತೆಗಲತಿಪ್ಪಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>