<p>ಚಿಂಚೋಳಿ: ತಾಲ್ಲೂಕಿನ ಸಾಲೇಬೀರನಹಳ್ಳಿಯಲ್ಲಿ ಶುಕ್ರವಾರ ಮಧ್ಯಾಹ್ನ ಅಗ್ನಿ ಅವಘಡ ಸಂಭವಿಸಿದೆ. ದುರಂತದಲ್ಲಿ ಸುಮಾರು ₹5 ಲಕ್ಷ ಮೊತ್ತದ ಜೋಳದ ಕಣಕಿ ಸುಟ್ಟು ಭಸ್ಮವಾಗಿದೆ.</p>.<p>ಗ್ರಾಮದ ಮಹಿಬೂಬಾಬೇಗಂ ಅವರಿಗೆ ಸೇರಿದ್ದ ಜೋಳದ ಕಣಕಿ ಇದಾಗಿತ್ತು. ಗ್ರಾಮದ ಬಳಿಯ ಖಾಲಿ ನಿವೇಶನದಲ್ಲಿ ಮೇವಿಗಾಗಿ ದಾಸ್ತಾನು ಮಾಡಿದ್ದರು. ಆದರೆ ಆಕಸ್ಮಿಕ ಹೊತ್ತಿದ್ದರಿಂದ ಸಂಪೂರ್ಣ ಸುಟ್ಟಿದೆ.</p>.<p>ಅಕ್ಕ ಪಕ್ಕದ ಮೇವು ದಾಸ್ತಾನು ಮಾಡಿದ್ದ ರೈತರು ಕೂಡಲೇ ಎಚ್ಚೆತ್ತುಕೊಂಡು ತಮ್ಮ ಬಣವಿಯತ್ತ ಬೆಂಕಿ ಹಬ್ಬದಂತೆ ತಡೆಯುವಲ್ಲಿ ಸಫಲರಾಗಿದ್ದಾರೆ.</p>.<p>ಚಿಂಚೋಳಿಯ ಅಗ್ನಿಶಾಮಕ ಠಾಣೆಯಿಂದ ಅಗ್ನಿಶಾಮಕ ಅಧಿಕಾರಿ ಎಸ್.ಕೆ.ಹಸನ್ ನೇತೃತ್ವದಲ್ಲಿ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸಿದರು.</p>.<p>ಘಟನಾ ಸ್ಥಳಕ್ಕೆ ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪಂಚನಾಮೆ ನಡೆಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260516-34-1583216488</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಿಂಚೋಳಿ: ತಾಲ್ಲೂಕಿನ ಸಾಲೇಬೀರನಹಳ್ಳಿಯಲ್ಲಿ ಶುಕ್ರವಾರ ಮಧ್ಯಾಹ್ನ ಅಗ್ನಿ ಅವಘಡ ಸಂಭವಿಸಿದೆ. ದುರಂತದಲ್ಲಿ ಸುಮಾರು ₹5 ಲಕ್ಷ ಮೊತ್ತದ ಜೋಳದ ಕಣಕಿ ಸುಟ್ಟು ಭಸ್ಮವಾಗಿದೆ.</p>.<p>ಗ್ರಾಮದ ಮಹಿಬೂಬಾಬೇಗಂ ಅವರಿಗೆ ಸೇರಿದ್ದ ಜೋಳದ ಕಣಕಿ ಇದಾಗಿತ್ತು. ಗ್ರಾಮದ ಬಳಿಯ ಖಾಲಿ ನಿವೇಶನದಲ್ಲಿ ಮೇವಿಗಾಗಿ ದಾಸ್ತಾನು ಮಾಡಿದ್ದರು. ಆದರೆ ಆಕಸ್ಮಿಕ ಹೊತ್ತಿದ್ದರಿಂದ ಸಂಪೂರ್ಣ ಸುಟ್ಟಿದೆ.</p>.<p>ಅಕ್ಕ ಪಕ್ಕದ ಮೇವು ದಾಸ್ತಾನು ಮಾಡಿದ್ದ ರೈತರು ಕೂಡಲೇ ಎಚ್ಚೆತ್ತುಕೊಂಡು ತಮ್ಮ ಬಣವಿಯತ್ತ ಬೆಂಕಿ ಹಬ್ಬದಂತೆ ತಡೆಯುವಲ್ಲಿ ಸಫಲರಾಗಿದ್ದಾರೆ.</p>.<p>ಚಿಂಚೋಳಿಯ ಅಗ್ನಿಶಾಮಕ ಠಾಣೆಯಿಂದ ಅಗ್ನಿಶಾಮಕ ಅಧಿಕಾರಿ ಎಸ್.ಕೆ.ಹಸನ್ ನೇತೃತ್ವದಲ್ಲಿ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸಿದರು.</p>.<p>ಘಟನಾ ಸ್ಥಳಕ್ಕೆ ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪಂಚನಾಮೆ ನಡೆಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260516-34-1583216488</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>