<p><strong>ಚಿಂಚೋಳಿ:</strong> ತಾಲ್ಲೂಕಿನ ಕೊಟಗಾ ಗ್ರಾಮದ ಸರ್ಕಾರಿ ಗೋಮಾಳ ಜಮೀನು ಒತ್ತುವರಿಯಾಗುತ್ತಿದ್ದು, ಸಂರಕ್ಷಣೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ತಾಲ್ಲೂಕು ಆದಿವಾಸಿ ಅಲೆಮಾರಿ ಬುಡಕಟ್ಟು ಅಸಂಘಟಿತ ಕುರಿಗಾಹಿಗಳ ಹೋರಾಟ ಸಮಿತಿ ಮುಖಂಡರು ತಹಶೀಲ್ದಾರ್ ವೆಂಕಟೇಶ ದುಗ್ಗನ್ ಅವರಿಗೆ ಮಂಗಳವಾರ ಮನವಿ ಸಲ್ಲಿಸಿ ಒತ್ತಾಯಿಸಿದರು.</p>.<p>ಗ್ರಾಮದ ಸ.ನಂ.156ರಲ್ಲಿ 40 ಎಕರೆಗೂ ಅಧಿಕ ಜಮೀನು ಗೋಮಾಳ ಜಮೀನಾಗಿದ್ದು ಇದನ್ನು ನಿರಂತರ ಒತ್ತುವರಿ ಮಾಡಲಾಗುತ್ತಿದೆ. ಇದರಿಂದ ಕುರಿ, ಮೇಕೆ ಸಹಿತ ವಿವಿಧ ಜಾನುವಾರುಗಳು ಮೇಯಿಸಲು ತೊಂದರೆಯಾಗುತ್ತಿದೆ. ಪ್ರಯುಕ್ತ ಗೋಮಾಳ ಜಮೀನು ಸಂರಕ್ಷಿಸಲು ಕ್ರಮ ಕೈಗೊಳ್ಳಬೇಕು. ಈ ಜಮೀನು ಜಾನುವಾರುಗಳಿಗೆ ಮೇಯಿಸಲು ಮೀಸಲಿಡಬೇಕು. ರಾಜಕೀಯ ಪ್ರಭಾವ ಬಳಸಿ ಕೆಲವರು ಒತ್ತುವರಿ ಮಾಡುತ್ತಿರುವುದು ಕಂಡುಬಂದಿದ್ದು, ತಕ್ಷಣ ಇದಕ್ಕೆ ಕಡಿವಾಣ ಹಾಕಬೇಕು ಎಂದು ಒತ್ತಾಯಿಸಿದರು.</p>.<p>ಈ ವೇಳೆ ಹೋರಾಟ ಸಮಿತಿಯ ಗೋಪಾಲ ಗಾರಂಪಳ್ಳಿ, ಅಶೋಕ ಕೊಟಗಾ, ಶಾಮರಾವ್ ಹಳಖೇಡ, ಮಲ್ಲಪ್ಪ ಗಾರಂಪಳ್ಳಿ, ಭೀಮರಾವ್, ರಾಜಪ್ಪ, ಮಾಣಿಕ್, ವಜೀರ್ ಪಟೇಲ್ ಸೇರಿದಂತೆ ಹಲವರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಂಚೋಳಿ:</strong> ತಾಲ್ಲೂಕಿನ ಕೊಟಗಾ ಗ್ರಾಮದ ಸರ್ಕಾರಿ ಗೋಮಾಳ ಜಮೀನು ಒತ್ತುವರಿಯಾಗುತ್ತಿದ್ದು, ಸಂರಕ್ಷಣೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ತಾಲ್ಲೂಕು ಆದಿವಾಸಿ ಅಲೆಮಾರಿ ಬುಡಕಟ್ಟು ಅಸಂಘಟಿತ ಕುರಿಗಾಹಿಗಳ ಹೋರಾಟ ಸಮಿತಿ ಮುಖಂಡರು ತಹಶೀಲ್ದಾರ್ ವೆಂಕಟೇಶ ದುಗ್ಗನ್ ಅವರಿಗೆ ಮಂಗಳವಾರ ಮನವಿ ಸಲ್ಲಿಸಿ ಒತ್ತಾಯಿಸಿದರು.</p>.<p>ಗ್ರಾಮದ ಸ.ನಂ.156ರಲ್ಲಿ 40 ಎಕರೆಗೂ ಅಧಿಕ ಜಮೀನು ಗೋಮಾಳ ಜಮೀನಾಗಿದ್ದು ಇದನ್ನು ನಿರಂತರ ಒತ್ತುವರಿ ಮಾಡಲಾಗುತ್ತಿದೆ. ಇದರಿಂದ ಕುರಿ, ಮೇಕೆ ಸಹಿತ ವಿವಿಧ ಜಾನುವಾರುಗಳು ಮೇಯಿಸಲು ತೊಂದರೆಯಾಗುತ್ತಿದೆ. ಪ್ರಯುಕ್ತ ಗೋಮಾಳ ಜಮೀನು ಸಂರಕ್ಷಿಸಲು ಕ್ರಮ ಕೈಗೊಳ್ಳಬೇಕು. ಈ ಜಮೀನು ಜಾನುವಾರುಗಳಿಗೆ ಮೇಯಿಸಲು ಮೀಸಲಿಡಬೇಕು. ರಾಜಕೀಯ ಪ್ರಭಾವ ಬಳಸಿ ಕೆಲವರು ಒತ್ತುವರಿ ಮಾಡುತ್ತಿರುವುದು ಕಂಡುಬಂದಿದ್ದು, ತಕ್ಷಣ ಇದಕ್ಕೆ ಕಡಿವಾಣ ಹಾಕಬೇಕು ಎಂದು ಒತ್ತಾಯಿಸಿದರು.</p>.<p>ಈ ವೇಳೆ ಹೋರಾಟ ಸಮಿತಿಯ ಗೋಪಾಲ ಗಾರಂಪಳ್ಳಿ, ಅಶೋಕ ಕೊಟಗಾ, ಶಾಮರಾವ್ ಹಳಖೇಡ, ಮಲ್ಲಪ್ಪ ಗಾರಂಪಳ್ಳಿ, ಭೀಮರಾವ್, ರಾಜಪ್ಪ, ಮಾಣಿಕ್, ವಜೀರ್ ಪಟೇಲ್ ಸೇರಿದಂತೆ ಹಲವರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>