<p><strong>ಚಿಂಚೋಳಿ:</strong> ಹೊಲಕ್ಕೆ ಹೋಗಿ ಕಾಣೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆಯಾದ ಘಟನೆ ತಾಲ್ಲೂಕಿನ ದೋಟಿಕೊಳ ಗ್ರಾಮದಲ್ಲಿ ಭಾನುವಾರ ನಡೆದಿದೆ.</p>.<p>ದೋಟಿಕೊಳ ಗ್ರಾಮದ ಶರಣು ಗುಂಡಪ್ಪ ಭೋಸಗಿ(25) ಮೃತ ವ್ಯಕ್ತಿ. ಕಡಲೆ ಬೆಳೆ ಕಾಯಲು ಹೊಲಕ್ಕೆ ಹೋಗಿದ್ದು, ಮನೆಗೆ ಮರಳಿರಲಿಲ್ಲ. ಇದರಿಂದ ಸಂಶಯಗೊಂಡು ಚಿಂಚೋಳಿ ಪೊಲೀಸ್ ಠಾಣೆಯಲ್ಲಿ ಯುವಕ ಕಣ್ಮರೆಯಾದ ಕುರಿತು ದೂರು ದಾಖಲಾಗಿತ್ತು ಎಂದು ಎಸ್ಐ ಗಂಗಮ್ಮ ಜಿನಿಕೇರಿ ತಿಳಿಸಿದರು.</p>.<p>ಬೆನ್ನಲ್ಲಿಯೇ ದೋಟಿಕೊಳ ಗ್ರಾಮದ ಸಣ್ಣ ನೀರಾವರಿ ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದು, ಮೃತನ ಕಾಲಿಗೆ ಹಗ್ಗ ಬಿಗಿಯಲಾಗಿದೆ ಎಂದು ಹೇಳಲಾಗಿದೆ. ಮರಣೋತ್ತರ ಪರೀಕ್ಷೆಗಾಗಿ ಕಲಬುರಗಿಗೆ ಕೊಂಡೊಯ್ಯಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.</p>.<p>ಮೃತನು, ಗ್ರಾಮದ ರೈತರೊಬ್ಬರ ಬಳಿ ಕೃಷಿಯ ಮೇಲ್ವಿಚಾರಕನಾಗಿದ್ದ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಡಿವೈಎಸ್ಪಿ ಸಂಗಮನಾಥ ಹಿರೇಮಠ, ಸಿಪಿಐ ಕಪಿಲದೇವ ಮತ್ತು ಚಿಂಚೋಳಿ ಎಸ್ಐ ಗಂಗಮ್ಮ ಜಿನಿಕೇರಿ ಶವ ಪತ್ತೆಯಾದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಂಚೋಳಿ:</strong> ಹೊಲಕ್ಕೆ ಹೋಗಿ ಕಾಣೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆಯಾದ ಘಟನೆ ತಾಲ್ಲೂಕಿನ ದೋಟಿಕೊಳ ಗ್ರಾಮದಲ್ಲಿ ಭಾನುವಾರ ನಡೆದಿದೆ.</p>.<p>ದೋಟಿಕೊಳ ಗ್ರಾಮದ ಶರಣು ಗುಂಡಪ್ಪ ಭೋಸಗಿ(25) ಮೃತ ವ್ಯಕ್ತಿ. ಕಡಲೆ ಬೆಳೆ ಕಾಯಲು ಹೊಲಕ್ಕೆ ಹೋಗಿದ್ದು, ಮನೆಗೆ ಮರಳಿರಲಿಲ್ಲ. ಇದರಿಂದ ಸಂಶಯಗೊಂಡು ಚಿಂಚೋಳಿ ಪೊಲೀಸ್ ಠಾಣೆಯಲ್ಲಿ ಯುವಕ ಕಣ್ಮರೆಯಾದ ಕುರಿತು ದೂರು ದಾಖಲಾಗಿತ್ತು ಎಂದು ಎಸ್ಐ ಗಂಗಮ್ಮ ಜಿನಿಕೇರಿ ತಿಳಿಸಿದರು.</p>.<p>ಬೆನ್ನಲ್ಲಿಯೇ ದೋಟಿಕೊಳ ಗ್ರಾಮದ ಸಣ್ಣ ನೀರಾವರಿ ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದು, ಮೃತನ ಕಾಲಿಗೆ ಹಗ್ಗ ಬಿಗಿಯಲಾಗಿದೆ ಎಂದು ಹೇಳಲಾಗಿದೆ. ಮರಣೋತ್ತರ ಪರೀಕ್ಷೆಗಾಗಿ ಕಲಬುರಗಿಗೆ ಕೊಂಡೊಯ್ಯಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.</p>.<p>ಮೃತನು, ಗ್ರಾಮದ ರೈತರೊಬ್ಬರ ಬಳಿ ಕೃಷಿಯ ಮೇಲ್ವಿಚಾರಕನಾಗಿದ್ದ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಡಿವೈಎಸ್ಪಿ ಸಂಗಮನಾಥ ಹಿರೇಮಠ, ಸಿಪಿಐ ಕಪಿಲದೇವ ಮತ್ತು ಚಿಂಚೋಳಿ ಎಸ್ಐ ಗಂಗಮ್ಮ ಜಿನಿಕೇರಿ ಶವ ಪತ್ತೆಯಾದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>