<p><strong>ಚಿಂಚೋಳಿ</strong>: ‘ಐನೋಳ್ಳಿ ಚಂದ್ರಂಪಳ್ಳಿ ಮಾರ್ಗದಲ್ಲಿರುವ ನನ್ನ ತೋಟದಲ್ಲಿ 6 ಎಕರೆಯಲ್ಲಿ ಟೊಮೆಟೊ ಬೆಳೆಸಿದ್ದೇನೆ. ಕಳೆದ ಒಂದು ವಾರದಿಂದ ವಿದ್ಯುತ್ ಪೂರೈಕೆ ಇಲ್ಲದ ಕಾರಣ ಬೆಳೆ ಬಾಡಿ ಬಸವಳಿದಿದೆ’ ಎಂದು ಐನೋಳ್ಳಿಯ ರೈತ ಶಿವರಾಜ ತಳವಾರ ಅಳಲು ತೋಡಿಕೊಂಡಿದ್ದಾರೆ.</p>.<p>‘ಹೂವು ಹಾಗೂ ಕಾಯಿ ಹಂತದಲ್ಲಿರುವ ಬೆಳೆ ನೀರಿನ ಕೊರತೆಯಿಂದ ಒಣಗುತ್ತಿದೆ. ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಬೆಳೆಸಿದ ಟೊಮೆಟೊ ಅಧಿಕಾರಿಗಳ ನಿರ್ಲಕ್ಷ್ಯದಿಂದ ನಷ್ಟಕ್ಕೊಳಗಾಗಿದ್ದೇನೆ. ಕಳೆದ 15 ದಿನಗಳಿಂದ ವಿದ್ಯುತ್ ಪೂರೈಕೆಯೇ ಇಲ್ಲ. ಇದರಿಂದ ತೋಟದಲ್ಲಿನ ಬೆಳೆಗಳಿಗೆ ನೀರಿಲ್ಲದಂತಾಗಿದೆ’ ಎಂದು ದೂರಿದ್ದಾರೆ.</p>.<p>‘ಸದ್ಯ ಪ್ರಖರ ಬಿಸಿಲಿನ ಹೊಡೆತ ಹಾಗೂ ನೀರಿನ ಕೊರತೆ, ವಿದ್ಯುತ್ ಪೂರೈಕೆ ಸ್ಥಗಿತವಾಗಿದ್ದರಿಂದ 6 ಎಕರೆಯಲ್ಲಿ ಕನಿಷ್ಠ ₹4 ರಿಂದ 5ಲಕ್ಷ ಹಾನಿ ಉಂಟಾಗಿದೆ. ಬೇಗ ವಿದ್ಯುತ್ ಪೂರೈಸಿದರೆ ಭಾಗಶಃ ನಷ್ಟ ತಪ್ಪಿಸಬಹುದಾಗಿದೆ’ ಎಂದು ಒತ್ತಾಯಿಸಿದ್ದಾರೆ.</p>.<p>ಐಪಿ ಸೆಟ್ ಹಾಗೂ ಮನೆಗಳಿಗೆ ವಿದ್ಯುತ್ ಪೂರೈಕೆ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಎಲ್ಲಾ ಊರುಗಳಲ್ಲೂ ವಿದ್ಯುತ್ ಪೂರೈಕೆ ಅಸಮರ್ಪಕವಾದ ಬಗ್ಗೆ ರೈತರು ಬೇಸರ ವ್ಯಕ್ತಪಡಿಸಿದ್ದಾರೆ.</p>.<p>ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾದ ಬಗ್ಗೆ ಹಲವಾರು ರೈತರು ಹಾಗೂ ಸಾರ್ವಜನಿಕರು ದೂರಿದ್ದಾರೆ. ಶೀಘ್ರವೇ ಜೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಿಗೆ ಭೇಟಿ ಮಾಡಿ ಸಮಸ್ಯೆ ಪರಿಹರಿಸಲು ಕ್ರಮಕೈಗೊಳ್ಳುವುದಾಗಿ ಶಾಸಕ ಡಾ.ಅವಿನಾಶ ಜಾಧವ ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260525-31-532848893</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಂಚೋಳಿ</strong>: ‘ಐನೋಳ್ಳಿ ಚಂದ್ರಂಪಳ್ಳಿ ಮಾರ್ಗದಲ್ಲಿರುವ ನನ್ನ ತೋಟದಲ್ಲಿ 6 ಎಕರೆಯಲ್ಲಿ ಟೊಮೆಟೊ ಬೆಳೆಸಿದ್ದೇನೆ. ಕಳೆದ ಒಂದು ವಾರದಿಂದ ವಿದ್ಯುತ್ ಪೂರೈಕೆ ಇಲ್ಲದ ಕಾರಣ ಬೆಳೆ ಬಾಡಿ ಬಸವಳಿದಿದೆ’ ಎಂದು ಐನೋಳ್ಳಿಯ ರೈತ ಶಿವರಾಜ ತಳವಾರ ಅಳಲು ತೋಡಿಕೊಂಡಿದ್ದಾರೆ.</p>.<p>‘ಹೂವು ಹಾಗೂ ಕಾಯಿ ಹಂತದಲ್ಲಿರುವ ಬೆಳೆ ನೀರಿನ ಕೊರತೆಯಿಂದ ಒಣಗುತ್ತಿದೆ. ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಬೆಳೆಸಿದ ಟೊಮೆಟೊ ಅಧಿಕಾರಿಗಳ ನಿರ್ಲಕ್ಷ್ಯದಿಂದ ನಷ್ಟಕ್ಕೊಳಗಾಗಿದ್ದೇನೆ. ಕಳೆದ 15 ದಿನಗಳಿಂದ ವಿದ್ಯುತ್ ಪೂರೈಕೆಯೇ ಇಲ್ಲ. ಇದರಿಂದ ತೋಟದಲ್ಲಿನ ಬೆಳೆಗಳಿಗೆ ನೀರಿಲ್ಲದಂತಾಗಿದೆ’ ಎಂದು ದೂರಿದ್ದಾರೆ.</p>.<p>‘ಸದ್ಯ ಪ್ರಖರ ಬಿಸಿಲಿನ ಹೊಡೆತ ಹಾಗೂ ನೀರಿನ ಕೊರತೆ, ವಿದ್ಯುತ್ ಪೂರೈಕೆ ಸ್ಥಗಿತವಾಗಿದ್ದರಿಂದ 6 ಎಕರೆಯಲ್ಲಿ ಕನಿಷ್ಠ ₹4 ರಿಂದ 5ಲಕ್ಷ ಹಾನಿ ಉಂಟಾಗಿದೆ. ಬೇಗ ವಿದ್ಯುತ್ ಪೂರೈಸಿದರೆ ಭಾಗಶಃ ನಷ್ಟ ತಪ್ಪಿಸಬಹುದಾಗಿದೆ’ ಎಂದು ಒತ್ತಾಯಿಸಿದ್ದಾರೆ.</p>.<p>ಐಪಿ ಸೆಟ್ ಹಾಗೂ ಮನೆಗಳಿಗೆ ವಿದ್ಯುತ್ ಪೂರೈಕೆ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಎಲ್ಲಾ ಊರುಗಳಲ್ಲೂ ವಿದ್ಯುತ್ ಪೂರೈಕೆ ಅಸಮರ್ಪಕವಾದ ಬಗ್ಗೆ ರೈತರು ಬೇಸರ ವ್ಯಕ್ತಪಡಿಸಿದ್ದಾರೆ.</p>.<p>ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾದ ಬಗ್ಗೆ ಹಲವಾರು ರೈತರು ಹಾಗೂ ಸಾರ್ವಜನಿಕರು ದೂರಿದ್ದಾರೆ. ಶೀಘ್ರವೇ ಜೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಿಗೆ ಭೇಟಿ ಮಾಡಿ ಸಮಸ್ಯೆ ಪರಿಹರಿಸಲು ಕ್ರಮಕೈಗೊಳ್ಳುವುದಾಗಿ ಶಾಸಕ ಡಾ.ಅವಿನಾಶ ಜಾಧವ ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260525-31-532848893</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>