ಇಲ್ಲಿ ಮೂರು ಕಡೆಗಳಲ್ಲಿ ನೀರು ಮೇಲಿಂದ ಕೆಳಗೆ ಬೀಳುವ ದೃಶ್ಯ ಮನಸ್ಸಿಗೆ ಮುದ ನೀಡಲಿದೆ. ದಟ್ಟ ಕಾಡಿನ ಮಧ್ಯೆ ಇರುವ ಈ ಜಲಪಾತಕ್ಕೆ ಒಬ್ಬರೇ ಹೋಗುವುದು ಅಪಾಯಕಾರಿ ಜತೆಗೆ ಇದೇ ಕಾಡಿನಲ್ಲಿ ಚಿರತೆ ಗೋಚರಿಸಿದ್ದರಿಂದ ಪ್ರವಾಸಿಗರು ಎಚ್ಚರಿಕೆ ವಹಿಸಬೇಕೆಂದು ವಲಯ ಅರಣ್ಯಾಧಿಕಾರಿ ಸಂಜೀವಕುಮಾರ ಚವ್ಹಾಣ ಪರಿಸರ ಪ್ರವಾಸಿಗರಲ್ಲಿ ಮನವಿ ಮಾಡಿದ್ದಾರೆ.