<p>ಚಿಂಚೋಳಿ: ‘ರೇವಗ್ಗಿಯ ರೇವಣಸಿದ್ದೇಶ್ವರ ದೇವಾಲಯ ಅಭಿವೃದ್ಧಿ ಹಾಗೂ ಯಾತ್ರಾರ್ಥಿಗಳಿಗೆ ಸೌಲಭ್ಯ ಕಲ್ಪಿಸಲು ರೇವಣಸಿದ್ದೇಶ್ವರ ಅಭಿವೃದ್ಧಿ ಪ್ರಾಧಿಕಾರ ರಚಿಸಬೇಕು’ ಶಾಸಕ ಡಾ.ಅವಿನಾಶ ಜಾಧವ ಅಧಿವೇಶನದಲ್ಲಿ ಒತ್ತಾಯಿಸಿದ್ದಾರೆ.</p>.<p>ಬಜೆಟ್ನಲ್ಲಿ ಚಿಂಚೋಳಿ ಕ್ಷೇತ್ರಕ್ಕೆ ಅನುದಾನದ ನಿರೀಕ್ಷೆ ಹುಸಿಯಾಗಿದೆ. ಸರ್ಕಾರ ಗ್ಯಾರಂಟಿ ಜತೆಗೆ ಅಭಿವೃದ್ಧಿಗೂ ಆದ್ಯತೆ ನೀಡಬೇಕು’ ಎಂದು ಒತ್ತಾಯಿಸಿದ್ದಾರೆ.</p>.<p>ರೈತರಿಗೆ 7 ಗಂಟೆ ತ್ರಿಫೇಸ್ ವಿದ್ಯುತ್ ಸಿಗುತ್ತಿಲ್ಲ. ಗ್ರಾಮ, ತಾಂಡಾ ಮತ್ತು ಹೊಸ ಬಡಾವಣೆಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ಅನುದಾನ ನೀಡಬೇಕು ಎಂದು ಆಗ್ರಹಿಸಿದ್ದಾರೆ.</p>.<p>ಚಿಂಚೋಳಿಯಲ್ಲಿ ಪರಿಸರ ಪ್ರವಾಸೋದ್ಯಮ ಅಭಿವೃದ್ಧಿಗೆ ವಿಪುಲ ಅವಕಾಶವಿದ್ದು, ಇದಕ್ಕೆ ಹೆಚ್ಚಿನ ಅನುದಾನ ನೀಡಬೇಕು ಎಂದು ಮನವಿ ಮಾಡಿದರು.</p>.<p>ಕರ್ನಾಟಕ ಪಬ್ಲಿಕ್ ಶಾಲೆ ತೆರೆದಿದ್ದಕ್ಕೆ ಸರ್ಕಾರಕ್ಕೆ ಅಭಿನಂದನೆ ಆದರೆ 18 ಸಾವಿರ ಶಿಕ್ಷಕರ ನೇಮಕ ಕಾಗದದಲ್ಲಿಯೇ ಇದೆ, ಅದು ಅನುಷ್ಠಾನಕ್ಕೆ ಬರಬೇಕು. ಕೆಕೆಆರ್ಡಿಬಿ ಪ್ರಾದೇಶಿಕ ಅಸಮತೋನ ನಿವಾರಣೆ ಅಸ್ತಿತ್ವಕ್ಕೆ ಬಂದಿದೆ. ಆದರೆ ಈ ಭಾಗಕ್ಕೆ ಬಜೆಟ್ನಲ್ಲಿ ಇಲಾಖಾ ಅನುದಾನದ ಜತೆಗೆ ಹೆಚ್ಚುವರಿಯಾಗಿ ಕೆಕೆಆರ್ಡಿಬಿ ಅನುದಾನ ನೀಡಿದರೆ ಅಭಿವೃದ್ಧಿ ಸಾಧ್ಯ ಎಂದಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260327-31-1285606226</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಿಂಚೋಳಿ: ‘ರೇವಗ್ಗಿಯ ರೇವಣಸಿದ್ದೇಶ್ವರ ದೇವಾಲಯ ಅಭಿವೃದ್ಧಿ ಹಾಗೂ ಯಾತ್ರಾರ್ಥಿಗಳಿಗೆ ಸೌಲಭ್ಯ ಕಲ್ಪಿಸಲು ರೇವಣಸಿದ್ದೇಶ್ವರ ಅಭಿವೃದ್ಧಿ ಪ್ರಾಧಿಕಾರ ರಚಿಸಬೇಕು’ ಶಾಸಕ ಡಾ.ಅವಿನಾಶ ಜಾಧವ ಅಧಿವೇಶನದಲ್ಲಿ ಒತ್ತಾಯಿಸಿದ್ದಾರೆ.</p>.<p>ಬಜೆಟ್ನಲ್ಲಿ ಚಿಂಚೋಳಿ ಕ್ಷೇತ್ರಕ್ಕೆ ಅನುದಾನದ ನಿರೀಕ್ಷೆ ಹುಸಿಯಾಗಿದೆ. ಸರ್ಕಾರ ಗ್ಯಾರಂಟಿ ಜತೆಗೆ ಅಭಿವೃದ್ಧಿಗೂ ಆದ್ಯತೆ ನೀಡಬೇಕು’ ಎಂದು ಒತ್ತಾಯಿಸಿದ್ದಾರೆ.</p>.<p>ರೈತರಿಗೆ 7 ಗಂಟೆ ತ್ರಿಫೇಸ್ ವಿದ್ಯುತ್ ಸಿಗುತ್ತಿಲ್ಲ. ಗ್ರಾಮ, ತಾಂಡಾ ಮತ್ತು ಹೊಸ ಬಡಾವಣೆಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ಅನುದಾನ ನೀಡಬೇಕು ಎಂದು ಆಗ್ರಹಿಸಿದ್ದಾರೆ.</p>.<p>ಚಿಂಚೋಳಿಯಲ್ಲಿ ಪರಿಸರ ಪ್ರವಾಸೋದ್ಯಮ ಅಭಿವೃದ್ಧಿಗೆ ವಿಪುಲ ಅವಕಾಶವಿದ್ದು, ಇದಕ್ಕೆ ಹೆಚ್ಚಿನ ಅನುದಾನ ನೀಡಬೇಕು ಎಂದು ಮನವಿ ಮಾಡಿದರು.</p>.<p>ಕರ್ನಾಟಕ ಪಬ್ಲಿಕ್ ಶಾಲೆ ತೆರೆದಿದ್ದಕ್ಕೆ ಸರ್ಕಾರಕ್ಕೆ ಅಭಿನಂದನೆ ಆದರೆ 18 ಸಾವಿರ ಶಿಕ್ಷಕರ ನೇಮಕ ಕಾಗದದಲ್ಲಿಯೇ ಇದೆ, ಅದು ಅನುಷ್ಠಾನಕ್ಕೆ ಬರಬೇಕು. ಕೆಕೆಆರ್ಡಿಬಿ ಪ್ರಾದೇಶಿಕ ಅಸಮತೋನ ನಿವಾರಣೆ ಅಸ್ತಿತ್ವಕ್ಕೆ ಬಂದಿದೆ. ಆದರೆ ಈ ಭಾಗಕ್ಕೆ ಬಜೆಟ್ನಲ್ಲಿ ಇಲಾಖಾ ಅನುದಾನದ ಜತೆಗೆ ಹೆಚ್ಚುವರಿಯಾಗಿ ಕೆಕೆಆರ್ಡಿಬಿ ಅನುದಾನ ನೀಡಿದರೆ ಅಭಿವೃದ್ಧಿ ಸಾಧ್ಯ ಎಂದಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260327-31-1285606226</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>