ತಾಲ್ಲೂಕಿನಲ್ಲಿ 46 ಸಾವಿರ ರೈತರಿದ್ದು ಇದರಲ್ಲಿ 15300 ಜನ ಮಾತ್ರ ಬೆಳೆವಿಮೆ ನೋಂದಾಯಿಸಿದ್ದರು. ಇವರಿಗೆ 30 ಕೋಟಿ ವಿಮೆ ಪರಿಹಾರ ಮಂಜೂರಾಗಿದೆ. ಪ್ರಸಕ್ತ ವರ್ಷ ಹೆಚ್ಚು ರೈತರು ಬೆಳೆ ವಿಮೆಗೆ ಹೆಸರು ನೋಂದಾಯಿಸಬೇಕು
ವೀರಶೆಟ್ಟಿ ರಾಠೋಡ ಸಹಾಯಕ ಕೃಷಿ ನಿರ್ದೆಶಕರು ಚಿಂಚೋಳಿ
ತಾಲ್ಲೂಕಿನಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಲ್ಲಿ ರೈತರಿಗೆ ಉಚಿತವಾಗಿ ಬೆಳೆ ವಿಮೆ ನೋಂದಾಯಿಸಲಾಗುತ್ತಿದೆ. ರೈತರು ಇದರ ಪ್ರಯೋಜನ ಪಡೆದುಕೊಳ್ಳಬೇಕು.
ಅಜೀತ ಪಾಟೀಲ ಡಿಸಿಸಿ ಬ್ಯಾಂಕ್ ನಿರ್ದೇಶಕರು ಚಿಂಚೋಳಿ
ರೈತರಿಗೆ ಪೂರ್ಣ ಪ್ರಮಾಣದ ವಿಮಾ ಪರಿಹಾರ ಏಕ ಕಾಲಕ್ಕೆ ರೈತರ ಖಾತೆಗೆ ಜಮಾ ಮಾಡದಿರುವುದು ಬೇಸರದ ಸಂಗತಿ. ಕಳೆದ ವರ್ಷದ ವಿಮಾ ಪರಿಹಾರದ ಬಾಕಿ ಮೊತ್ತ ಶೀಘ್ರ ಬಿಡುಗಡೆ ಮಾಡಿ ರೈತರ ನೆರವಿಗೆ ಧಾವಿಸಬೇಕು
ಶರಣಬಸಪ್ಪ ಮಮಶೆಟ್ಟಿ ಜಿಲ್ಲಾ ಅಧ್ಯಕ್ಷರು ಕರ್ನಾಟಕ ಪ್ರಾಂತ ರೈತ ಸಂಘ ಕಲಬುರಗಿ