ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸುಲೇಪೇಟದಲ್ಲಿ 76 ಕ್ವಿಂಟಲ್ ಪಡಿತರ ಅಕ್ಕಿ ಜಪ್ತಿ: ಮೂವರ ವಿರುದ್ಧ ಎಫ್ಐಆರ್

Last Updated 3 ಫೆಬ್ರುವರಿ 2022, 6:03 IST
ಅಕ್ಷರ ಗಾತ್ರ

ಚಿಂಚೋಳಿ (ಕಲಬುರಗಿ ಜಿಲ್ಲೆ): ತಾಲ್ಲೂಕಿನ ಸುಲೇಪೇಟದಲ್ಲಿ 76 ಕ್ವಿಂಟಲ್ ಪಡಿತರ (153 ಬ್ಯಾಗ್)ಅಕ್ಕಿ ಜಪ್ತಿ ಮಾಡಲಾಗಿದೆ ಎಂದು ತಹಶೀಲ್ದಾರ್‌ ಅಂಜುಮ‌ ತಬಸ್ಸುಮ ತಿಳಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಇಸ್ಮಾಯಿಲ್ ಮಂಗಲಗಿ, ಮಹಿಬೂಬ್‌ ಟೆಂಗಳಿ ಹಾಗೂ ಶ್ರೀಧರ ರೆಡ್ಡಿ ಅವರ ವಿರುದ್ಧ ಸುಲೇಪೇಟ ಠಾಣೆಯಲ್ಲಿ ತಡರಾತ್ರಿ ಪ್ರಕರಣ ದಾಖಲಿಸಲಾಗಿದೆ.

ಜಪ್ತಿ ಮಾಡಿದ ₹ 1.96ಲಕ್ಷ ಮೊತ್ತದ ಅಕ್ಕಿಯನ್ನು ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಚಿಂಚೋಳಿಯ ಉಗ್ರಾಣದಲ್ಲಿ ಇರಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಸುಲೇಪೇಟದಲ್ಲಿ ಪಡಿತರ ಅಕ್ಕಿ ಮಾರಾಟ ಮಾಡುತ್ತಿರುವ ಮಾಹಿತಿ ಪಡೆದುಕೊಂಡು ತಹಶೀಲ್ದಾರ್‌ ಅಂಜುಮ ತಬಸ್ಸುಮ ಮತ್ತು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಶಿರಸ್ತೆದಾರ್ ಗೋಪಾಲಕೃಷ್ಣ, ಬಿ.ಎಸ್ ಪಂಚಾಳ, ಕಂದಾಯ ನಿರೀಕ್ಷಕ ಕೇಶವ ಕುಲಕರ್ಣಿ ಮತ್ತು ಸಬ್ ಇನ್‌ಸ್ಪೆಕ್ಟರ್‌ ಸುಖಾನಂದ ಅವರು ದಾಳಿ ನಡೆಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT