2009ರಲ್ಲಿ ಚಿತ್ತಾಪುರ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಇವರು ಬಿಜೆಪಿಯಿಂದ ಜಯಗಳಿಸಿದ್ದರು. ಇದಕ್ಕೂ ಮುನ್ನ 1999ರಲ್ಲಿ ಶಹಾಬಾದ್ ಮೀಸಲು ಕ್ಷೇತ್ರದಿಂದ ಸ್ಪರ್ಧಿಸಿ, ಬಾಬುರಾವ್ ಚವ್ಹಾಣ ವಿರುದ್ಧ ಪರಾಭವಗೊಂಡಿದ್ದರು. ಚಿತ್ತಾಪುರ ಕ್ಷೇತ್ರದಿಂದ 2008ರಲ್ಲಿ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಸ್ಪರ್ಧಿಸಿ ಸೋತಿದ್ದರು. ಖರ್ಗೆ ಅವರು ಲೋಕಸಭೆಗೆ ಹೋಗಿದ್ದರಿಂದ ಉಪ ಚುನಾವಣೆ ನಡೆದಿತ್ತು. ಆಗ, ನಡೆದ ಉಪ ಚುನಾವಣೆಯಲ್ಲಿ ಪ್ರಿಯಾಂಕ್ ಖರ್ಗೆ ಅವರನ್ನು ಸೋಲಿಸಿ ವಾಲ್ಮೀಕ್ ಆಯ್ಕೆಯಾಗಿದ್ದರು. ಆ ನಂತರದ ಎರಡು ಚುನಾವಣೆಯಲ್ಲಿ ಸೋತಿದ್ದರು.