<p><strong>ವಾಡಿ</strong>: ಪ್ರಿಯಾಂಕ್ ಖರ್ಗೆ ಪ್ರತಿನಿಧಿಸುವ ಚಿತ್ತಾಪುರ ತಾಲ್ಲೂಕಿನಲ್ಲಿ ಕಸವಿಲೇವಾರಿ ಆಟಕ್ಕುಂಟು ಲೆಕ್ಕಕ್ಕಿಲ್ಲ ಎನ್ನುವಂತಿದೆ. ಹಲವು ಗ್ರಾಪಂಗಳು ಕಸ ವಿಲೇವಾರಿ ಸರಿಯಾಗಿ ನಿರ್ವಹಣೆ ಮಾಡದ ಕಾರಣ ಊರುಗಳು ಗಬ್ಬೆದ್ದು ನಾರುತ್ತಿವೆ.</p>.<p>ಗ್ರಾಮಗಳಲ್ಲಿ ಕಸವನ್ನು ಎಲ್ಲೆಂದರಲ್ಲಿ ಬಿಸಾಡುತ್ತಿದ್ದು ಮತ್ತು ಕಡ್ಡಿಗೀರಿ ಬೆಂಕಿ ಹಚ್ಚಿ ಸುಡಲಾಗುತ್ತಿದ್ದು, ಇದರಿಂದ ಇಡೀ ವಾತಾವರಣ ಹದಗೆಡಿಸಲಾಗುತ್ತಿದೆ. ದಿನವಿಡೀ ಪ್ಲಾಸ್ಟಿಕ್ ಕಸದ ಹೊಗೆ ಮತ್ತು ವಾಸನೆ ಕಿರಿಕಿರಿಯುಂಟು ಮಾಡುತ್ತಿದೆ. ವಿಷಗಾಳಿ ಸೇವಿಸಿ ಮಕ್ಕಳು, ವಯೋವೃದ್ದರು ಅಸ್ತಮಾ, ಶ್ವಾಸಕೋಶದ ಸೋಂಕು ಹಾಗೂ ಇನ್ನಿತರ ರೋಗಕ್ಕೆ ತುತ್ತಾಗುತ್ತಿದ್ದಾರೆ.</p>.<p>ಗ್ರಾ.ಪಂ.ಗಳು ಕಸ ವಿಲೇವಾರಿ ಮರೆತ ಕಾರಣ ರಾಷ್ಟ್ರೀಯ ಹೆದ್ದಾರಿ, ಗ್ರಾಮದ ಸಂಪರ್ಕ ರಸ್ತೆಬದಿ, ಕಲ್ಲುಗಣಿಯ ಕಂದರಗಲ್ಲಿ, ತಿಪ್ಪೆಗಳಲ್ಲಿ, ತಗ್ಗು ಗುಂಡಿಗಳಲ್ಲಿ ಕಸ ಸುರಿಯಲಾಗುತ್ತಿದೆ. ನಿತ್ಯ ಜಮೆಯಾಗುವ ಕಸವನ್ನು ಜನಸಂದಣಿ ಪ್ರದೇಶಗಳಲ್ಲಿ ಬೆಂಕಿ ಹಚ್ಚಿ ಸುಡಲಾಗುತ್ತಿದೆ. ಹಲವೆಡೆ ತ್ಯಾಜ್ಯ ವಿಲೇವಾರಿಯಾಗದೆ ರಸ್ತೆಯುದ್ದಕ್ಕೂ ಕಸದ ರಾಶಿ ರಾರಾಜಿಸುತ್ತಿದೆ.</p>.<p>‘ಅಧಿಕಾರಿಗಳ ಕರ್ತವ್ಯ ಲೋಪದಿಂದ ದಿನೇದಿನೆ ಕಸದ ಸಮಸ್ಯೆ ದ್ವಿಗುಣಗೊಳ್ಳುತ್ತಿದೆ. ಪ್ಲಾಸ್ಟಿಕ್ ಕವರ್, ಔಷಧ ತ್ಯಾಜ್ಯವನ್ನು ಹೆದ್ದಾರಿ ಹಾಗೂ ಇನ್ನಿತರ ಕಡೆ ಸುರಿಯುತ್ತಿದ್ದು, ಜನ–ಜಾನುವಾರುಗಳ ಸಂಕಷ್ಟ ಹೆಚ್ಚಿಸಿದೆ. ಜನರು ಮೂಗು ಮುಚ್ಚಿಕೊಂಡು ತಿರುಗುವಂತಾಗಿದೆ. ಪ್ಲಾಸ್ಟಿಕ್ ಹೊಗೆಯಿಂದ ನರಕ ಅನುಭವಿಸುತ್ತಿದ್ದೇವೆ’ ಎನ್ನುತ್ತಾರೆ ಶಿವಕುಮಾರ ಕೊಲ್ಲೂರು.</p>.<p>ಚರಂಡಿಗಳಲ್ಲೂ ತ್ಯಾಜ್ಯ: ಖಾಲಿ ಪ್ರದೇಶ, ರಸ್ತೆ ಬದಿಯಲ್ಲಿ ಮಾತ್ರ ಕಸ ತುಂಬಿಲ್ಲ. ಜತೆಗೆ ಹಲವು ಕಡೆಗಳಲ್ಲಿ ಚರಂಡಿಗಳಲ್ಲೂ ಕಸದ ರಾಶಿ ಹೆಚ್ಚಿದೆ. ಚರಂಡಿಗಳಲ್ಲಿ ಪ್ಲಾಸ್ಟಿಕ್ ಕವರ್, ತ್ಯಾಜ್ಯ ಸುರಿಯುವುದರಿಂದ ನೀರು ಸರಾಗವಾಗಿ ಹರಿಯುತ್ತಿಲ್ಲ. ಪರಿಣಾಮ ನೀರು ಅಲ್ಲೇ ಮಡುಗಟ್ಟಿ, ಸೊಳ್ಳೆಗಳ ಹಾವಳಿ ಹೆಚ್ಚಾಗುತ್ತಿದೆ. ಇದರಿಂದ ಅನೇಕ ರೋಗಗಳು ಹರಡುವ ಭೀತಿ ಜನತೆಯಲ್ಲಿ ಉಂಟಾಗಿದೆ.</p>.<p>ಜನರ ಆರೋಗ್ಯಕ್ಕಿಲ್ಲ ರಕ್ಷಣೆ: ಬೀದಿಬೀದಿಗಳಲ್ಲಿ ಸುರಿಯುವ ಕಸ ಅಲ್ಲೇ ಕೊಳೆತು ದುರ್ವಾಸನೆ ಉಂಟಾಗುತ್ತಿದ್ದು, ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ. ಗ್ರಾ.ಪಂ ಅಧಿಕಾರಿಗಳು ಶೀಘ್ರ ಎಚ್ಚೆತ್ತುಕೊಂಡು ಕಸ ವಿಲೇವಾರಿ ನಿರ್ವಹಣೆಯ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕಿದೆ ಎನ್ನುವುದು ಜನರ ಆಗ್ರಹವಾಗಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260530-31-1113646118</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಾಡಿ</strong>: ಪ್ರಿಯಾಂಕ್ ಖರ್ಗೆ ಪ್ರತಿನಿಧಿಸುವ ಚಿತ್ತಾಪುರ ತಾಲ್ಲೂಕಿನಲ್ಲಿ ಕಸವಿಲೇವಾರಿ ಆಟಕ್ಕುಂಟು ಲೆಕ್ಕಕ್ಕಿಲ್ಲ ಎನ್ನುವಂತಿದೆ. ಹಲವು ಗ್ರಾಪಂಗಳು ಕಸ ವಿಲೇವಾರಿ ಸರಿಯಾಗಿ ನಿರ್ವಹಣೆ ಮಾಡದ ಕಾರಣ ಊರುಗಳು ಗಬ್ಬೆದ್ದು ನಾರುತ್ತಿವೆ.</p>.<p>ಗ್ರಾಮಗಳಲ್ಲಿ ಕಸವನ್ನು ಎಲ್ಲೆಂದರಲ್ಲಿ ಬಿಸಾಡುತ್ತಿದ್ದು ಮತ್ತು ಕಡ್ಡಿಗೀರಿ ಬೆಂಕಿ ಹಚ್ಚಿ ಸುಡಲಾಗುತ್ತಿದ್ದು, ಇದರಿಂದ ಇಡೀ ವಾತಾವರಣ ಹದಗೆಡಿಸಲಾಗುತ್ತಿದೆ. ದಿನವಿಡೀ ಪ್ಲಾಸ್ಟಿಕ್ ಕಸದ ಹೊಗೆ ಮತ್ತು ವಾಸನೆ ಕಿರಿಕಿರಿಯುಂಟು ಮಾಡುತ್ತಿದೆ. ವಿಷಗಾಳಿ ಸೇವಿಸಿ ಮಕ್ಕಳು, ವಯೋವೃದ್ದರು ಅಸ್ತಮಾ, ಶ್ವಾಸಕೋಶದ ಸೋಂಕು ಹಾಗೂ ಇನ್ನಿತರ ರೋಗಕ್ಕೆ ತುತ್ತಾಗುತ್ತಿದ್ದಾರೆ.</p>.<p>ಗ್ರಾ.ಪಂ.ಗಳು ಕಸ ವಿಲೇವಾರಿ ಮರೆತ ಕಾರಣ ರಾಷ್ಟ್ರೀಯ ಹೆದ್ದಾರಿ, ಗ್ರಾಮದ ಸಂಪರ್ಕ ರಸ್ತೆಬದಿ, ಕಲ್ಲುಗಣಿಯ ಕಂದರಗಲ್ಲಿ, ತಿಪ್ಪೆಗಳಲ್ಲಿ, ತಗ್ಗು ಗುಂಡಿಗಳಲ್ಲಿ ಕಸ ಸುರಿಯಲಾಗುತ್ತಿದೆ. ನಿತ್ಯ ಜಮೆಯಾಗುವ ಕಸವನ್ನು ಜನಸಂದಣಿ ಪ್ರದೇಶಗಳಲ್ಲಿ ಬೆಂಕಿ ಹಚ್ಚಿ ಸುಡಲಾಗುತ್ತಿದೆ. ಹಲವೆಡೆ ತ್ಯಾಜ್ಯ ವಿಲೇವಾರಿಯಾಗದೆ ರಸ್ತೆಯುದ್ದಕ್ಕೂ ಕಸದ ರಾಶಿ ರಾರಾಜಿಸುತ್ತಿದೆ.</p>.<p>‘ಅಧಿಕಾರಿಗಳ ಕರ್ತವ್ಯ ಲೋಪದಿಂದ ದಿನೇದಿನೆ ಕಸದ ಸಮಸ್ಯೆ ದ್ವಿಗುಣಗೊಳ್ಳುತ್ತಿದೆ. ಪ್ಲಾಸ್ಟಿಕ್ ಕವರ್, ಔಷಧ ತ್ಯಾಜ್ಯವನ್ನು ಹೆದ್ದಾರಿ ಹಾಗೂ ಇನ್ನಿತರ ಕಡೆ ಸುರಿಯುತ್ತಿದ್ದು, ಜನ–ಜಾನುವಾರುಗಳ ಸಂಕಷ್ಟ ಹೆಚ್ಚಿಸಿದೆ. ಜನರು ಮೂಗು ಮುಚ್ಚಿಕೊಂಡು ತಿರುಗುವಂತಾಗಿದೆ. ಪ್ಲಾಸ್ಟಿಕ್ ಹೊಗೆಯಿಂದ ನರಕ ಅನುಭವಿಸುತ್ತಿದ್ದೇವೆ’ ಎನ್ನುತ್ತಾರೆ ಶಿವಕುಮಾರ ಕೊಲ್ಲೂರು.</p>.<p>ಚರಂಡಿಗಳಲ್ಲೂ ತ್ಯಾಜ್ಯ: ಖಾಲಿ ಪ್ರದೇಶ, ರಸ್ತೆ ಬದಿಯಲ್ಲಿ ಮಾತ್ರ ಕಸ ತುಂಬಿಲ್ಲ. ಜತೆಗೆ ಹಲವು ಕಡೆಗಳಲ್ಲಿ ಚರಂಡಿಗಳಲ್ಲೂ ಕಸದ ರಾಶಿ ಹೆಚ್ಚಿದೆ. ಚರಂಡಿಗಳಲ್ಲಿ ಪ್ಲಾಸ್ಟಿಕ್ ಕವರ್, ತ್ಯಾಜ್ಯ ಸುರಿಯುವುದರಿಂದ ನೀರು ಸರಾಗವಾಗಿ ಹರಿಯುತ್ತಿಲ್ಲ. ಪರಿಣಾಮ ನೀರು ಅಲ್ಲೇ ಮಡುಗಟ್ಟಿ, ಸೊಳ್ಳೆಗಳ ಹಾವಳಿ ಹೆಚ್ಚಾಗುತ್ತಿದೆ. ಇದರಿಂದ ಅನೇಕ ರೋಗಗಳು ಹರಡುವ ಭೀತಿ ಜನತೆಯಲ್ಲಿ ಉಂಟಾಗಿದೆ.</p>.<p>ಜನರ ಆರೋಗ್ಯಕ್ಕಿಲ್ಲ ರಕ್ಷಣೆ: ಬೀದಿಬೀದಿಗಳಲ್ಲಿ ಸುರಿಯುವ ಕಸ ಅಲ್ಲೇ ಕೊಳೆತು ದುರ್ವಾಸನೆ ಉಂಟಾಗುತ್ತಿದ್ದು, ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ. ಗ್ರಾ.ಪಂ ಅಧಿಕಾರಿಗಳು ಶೀಘ್ರ ಎಚ್ಚೆತ್ತುಕೊಂಡು ಕಸ ವಿಲೇವಾರಿ ನಿರ್ವಹಣೆಯ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕಿದೆ ಎನ್ನುವುದು ಜನರ ಆಗ್ರಹವಾಗಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260530-31-1113646118</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>