<p><strong>ಕಲಬುರಗಿ</strong>: ಜಿಲ್ಲೆಯ ಚಿತ್ತಾಪುರದಲ್ಲಿ ಆರ್ಎಸ್ಎಸ್ ಪಥಸಂಚಲನ ಯಾವ ದಿನ–ಸಮಯಕ್ಕೆ ನಡೆಯಲಿದೆ ಎಂಬ ಕುತೂಹಲಕ್ಕೆ ಗುರುವಾರ ತೆರೆ ಬೀಳುವ ನಿರೀಕ್ಷೆಗಳಿದ್ದು, ಎಲ್ಲರ ಚಿತ್ತ ಹೈಕೋರ್ಟ್ನತ್ತ ನೆಟ್ಟಿದೆ.</p>.<p>ಅ.19ರಂದು ಪಥಸಂಚಲನ ನಡೆಸಲು ಆರ್ಎಸ್ಎಸ್ಗೆ ಅನುಮತಿ ನಿರಾಕರಿಸಿದ್ದ ಚಿತ್ತಾಪುರ ತಹಶೀಲ್ದಾರರ ಕ್ರಮ ಪ್ರಶ್ನಿಸಿ ಆರ್ಎಸ್ಎಸ್ ಜಿಲ್ಲಾ ಸಂಘಚಾಲಕ ಅಶೋಕ ಪಾಟೀಲ ಹೈಕೋರ್ಟ್ ಮೊರೆಹೋಗಿದ್ದರು. ನ್ಯಾಯಮೂರ್ತಿ ಎಂ.ಜಿ.ಎಸ್.ಕಮಲ್ ಅವರ ಏಕಸದಸ್ಯ ನ್ಯಾಯಪೀಠ ಈ ಅರ್ಜಿ ವಿಚಾರಣೆ ನಡೆಸುತ್ತಿದೆ.</p>.<p>‘ಆರ್ಎಸ್ಎಸ್ ಸೇರಿ ಮನವಿ ಸಲ್ಲಿಸಿರುವ ಎಲ್ಲ ಸಂಘಟನೆಗಳಿಗೂ ಒಂದು ವಾರದೊಳಗೆ ಪಥಸಂಚಲನ/ಮೆರವಣಿಗೆಗೆ ಅನುಮತಿ ನೀಡಲಾಗುವುದು. ಈ ಬಗ್ಗೆ ಸಂಘಟನೆಗಳಿಗೆ ಲಿಖಿತವಾಗಿ ತಿಳಿಸಲಾಗುವುದು’ ಎಂದು ನ.7ರಂದು ವಿಚಾರಣೆ ವೇಳೆ ಅಡ್ವೋಕೇಟ್ ಜನರಲ್ ಶಶಿಕಿರಣ ಶೆಟ್ಟಿ ನ್ಯಾಯಾಲಯಕ್ಕೆ ತಿಳಿಸಿದ್ದರು.</p>.<p>ಅದರಂತೆ ಗುರುವಾರದ ಸರ್ಕಾರ ತನ್ನ ನಿರ್ಧಾರವನ್ನು ಕೋರ್ಟ್ಗೆ ತಿಳಿಸುವ ಸಾಧ್ಯತೆ ಇದೆ. ಆರ್ಎಸ್ಎಸ್ ಸೇರಿ ಎಲ್ಲ 11 ಸಂಘಟನೆಗಳಿಗೆ ಯಾವ ದಿನ ಅವಕಾಶ ಕೊಡಲಿದೆ ಎಂಬ ಬಗ್ಗೆ ಕುತೂಹಲ ಮೂಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ</strong>: ಜಿಲ್ಲೆಯ ಚಿತ್ತಾಪುರದಲ್ಲಿ ಆರ್ಎಸ್ಎಸ್ ಪಥಸಂಚಲನ ಯಾವ ದಿನ–ಸಮಯಕ್ಕೆ ನಡೆಯಲಿದೆ ಎಂಬ ಕುತೂಹಲಕ್ಕೆ ಗುರುವಾರ ತೆರೆ ಬೀಳುವ ನಿರೀಕ್ಷೆಗಳಿದ್ದು, ಎಲ್ಲರ ಚಿತ್ತ ಹೈಕೋರ್ಟ್ನತ್ತ ನೆಟ್ಟಿದೆ.</p>.<p>ಅ.19ರಂದು ಪಥಸಂಚಲನ ನಡೆಸಲು ಆರ್ಎಸ್ಎಸ್ಗೆ ಅನುಮತಿ ನಿರಾಕರಿಸಿದ್ದ ಚಿತ್ತಾಪುರ ತಹಶೀಲ್ದಾರರ ಕ್ರಮ ಪ್ರಶ್ನಿಸಿ ಆರ್ಎಸ್ಎಸ್ ಜಿಲ್ಲಾ ಸಂಘಚಾಲಕ ಅಶೋಕ ಪಾಟೀಲ ಹೈಕೋರ್ಟ್ ಮೊರೆಹೋಗಿದ್ದರು. ನ್ಯಾಯಮೂರ್ತಿ ಎಂ.ಜಿ.ಎಸ್.ಕಮಲ್ ಅವರ ಏಕಸದಸ್ಯ ನ್ಯಾಯಪೀಠ ಈ ಅರ್ಜಿ ವಿಚಾರಣೆ ನಡೆಸುತ್ತಿದೆ.</p>.<p>‘ಆರ್ಎಸ್ಎಸ್ ಸೇರಿ ಮನವಿ ಸಲ್ಲಿಸಿರುವ ಎಲ್ಲ ಸಂಘಟನೆಗಳಿಗೂ ಒಂದು ವಾರದೊಳಗೆ ಪಥಸಂಚಲನ/ಮೆರವಣಿಗೆಗೆ ಅನುಮತಿ ನೀಡಲಾಗುವುದು. ಈ ಬಗ್ಗೆ ಸಂಘಟನೆಗಳಿಗೆ ಲಿಖಿತವಾಗಿ ತಿಳಿಸಲಾಗುವುದು’ ಎಂದು ನ.7ರಂದು ವಿಚಾರಣೆ ವೇಳೆ ಅಡ್ವೋಕೇಟ್ ಜನರಲ್ ಶಶಿಕಿರಣ ಶೆಟ್ಟಿ ನ್ಯಾಯಾಲಯಕ್ಕೆ ತಿಳಿಸಿದ್ದರು.</p>.<p>ಅದರಂತೆ ಗುರುವಾರದ ಸರ್ಕಾರ ತನ್ನ ನಿರ್ಧಾರವನ್ನು ಕೋರ್ಟ್ಗೆ ತಿಳಿಸುವ ಸಾಧ್ಯತೆ ಇದೆ. ಆರ್ಎಸ್ಎಸ್ ಸೇರಿ ಎಲ್ಲ 11 ಸಂಘಟನೆಗಳಿಗೆ ಯಾವ ದಿನ ಅವಕಾಶ ಕೊಡಲಿದೆ ಎಂಬ ಬಗ್ಗೆ ಕುತೂಹಲ ಮೂಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>