<p>ಚಿತ್ತಾಪುರ (ಕಲಬುರ್ಗಿ): ತಾಲ್ಲೂಕಿನ ಗುಂಡಗುರ್ತಿ ಗ್ರಾಮದ ಹತ್ತಿರ ವಾಗ್ದರಿ- ರಿಬ್ಬನಪಲ್ಲಿ ರಾಜ್ಯ ಹೆದ್ದಾರಿಯ ಸೇತುವೆ ಬಳಿಯ ರಸ್ತೆ ಹಳ್ಳದ ಪ್ರವಾಹಕ್ಕೆ ಕೊಚ್ಚಿ ಹೋಗಿದ್ದು ಸಾರಿಗೆ ಸಂಚಾರ ಬಂದ್ ಆಗಿದೆ.</p>.<p>ಗುಂಡಗುರ್ತಿ ಹಳ್ಳಕ್ಕೆ ಬುಧವಾರ ಭಾರಿ ಪ್ರಮಾಣದಲ್ಲಿ ಪ್ರವಾಹ ಉಕ್ಕಿ ಬಂದು ಹಳ್ಳವು ಭೋರ್ಗೆರೆಯುತ್ತಾ ಹರಿಯುತ್ತಿತ್ತು. ಪ್ರವಾಹದ ರಭಸಕ್ಕೆ ರಸ್ತೆ ಕೊಚ್ಚಿ ಹೋಗಿ ಬೃಹತ್ ಗುಂಡಿ ಉಂಟಾಗಿ ಸಂಚಾರಕ್ಕೆ ಸಂಕಟ ಒದಗಿದೆ.</p>.<p>ಹೆಚ್ಚಿನ ಅಪಾಯ ಉಂಟಾಗದಿರಲಿ ಎಂದು ಈ ಮಾರ್ಗದ ವಾಹನ ಸಂಚಾರ ಬಂದ್ ಮಾಡಲಾಗಿದೆ. ವಾಗ್ಧರಿ-ರಿಬ್ಬನಪಲ್ಲಿ ರಾಜ್ಯ ಹೆದ್ದಾರಿಯ ನಿರ್ವಣೆ ಹೊಂದಿರುವ ಸಂಸ್ಥೆಯು ಸೇತುವೆಯ ಕೊಚ್ಚಿ ಹೋದ ರಸ್ತೆಯನ್ನು ಗುರುವಾರ ಬೆಳಿಗ್ಗೆ ದುರಸ್ತಿ ಕೆಲಸ ಕೈಗೊಂಡಿದೆ.<br />ಹೆದ್ದಾರಿ ರಸ್ತೆ ಕೊಚ್ಚಿ ಹೋಗಿರುವ ಕುರಿತು ಪರಿಶೀಲಿಸಲು ಲೋಕೋಪಯೋಗಿ ಇಲಾಖೆಯ ಯಾವ ಅಧಿಕಾರಿಗಳೂ ಘಟನಾ ಸ್ಥಳದಲ್ಲಿ ಇರಲಿಲ್ಲ. ಅಧಿಕಾರಿಗಳ ವರ್ತನೆಗೆ ಜನರು ಆಕ್ರೋಶ ವ್ಯಕ್ತ ಮಾಡುತ್ತಿದ್ದರು.</p>.<p>ಮಳೆ ಮತ್ತು ಪ್ರವಾಹಕ್ಕೆ ಅನೇಕ ರಸ್ತೆಗಳು ಕೊಚ್ಚಿ ಹೋಗಿವೆ. ಹದಗೆಟ್ಟಿವೆ. ಅಧಿಕಾರಿಗಳು ತುರ್ತಾಗಿ ದುರಸ್ತಿ ಕೆಲಸ ಮಾಡಿಸಬೇಕು ಎಂದು ಜಾತ್ಯತೀತ ಜನತಾ ದಳ ಪಕ್ಷದ ತಾಲ್ಲೂಕು ಅಧ್ಯಕ್ಷ ನಾಗಣ್ಣ ವಾರದ ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಿತ್ತಾಪುರ (ಕಲಬುರ್ಗಿ): ತಾಲ್ಲೂಕಿನ ಗುಂಡಗುರ್ತಿ ಗ್ರಾಮದ ಹತ್ತಿರ ವಾಗ್ದರಿ- ರಿಬ್ಬನಪಲ್ಲಿ ರಾಜ್ಯ ಹೆದ್ದಾರಿಯ ಸೇತುವೆ ಬಳಿಯ ರಸ್ತೆ ಹಳ್ಳದ ಪ್ರವಾಹಕ್ಕೆ ಕೊಚ್ಚಿ ಹೋಗಿದ್ದು ಸಾರಿಗೆ ಸಂಚಾರ ಬಂದ್ ಆಗಿದೆ.</p>.<p>ಗುಂಡಗುರ್ತಿ ಹಳ್ಳಕ್ಕೆ ಬುಧವಾರ ಭಾರಿ ಪ್ರಮಾಣದಲ್ಲಿ ಪ್ರವಾಹ ಉಕ್ಕಿ ಬಂದು ಹಳ್ಳವು ಭೋರ್ಗೆರೆಯುತ್ತಾ ಹರಿಯುತ್ತಿತ್ತು. ಪ್ರವಾಹದ ರಭಸಕ್ಕೆ ರಸ್ತೆ ಕೊಚ್ಚಿ ಹೋಗಿ ಬೃಹತ್ ಗುಂಡಿ ಉಂಟಾಗಿ ಸಂಚಾರಕ್ಕೆ ಸಂಕಟ ಒದಗಿದೆ.</p>.<p>ಹೆಚ್ಚಿನ ಅಪಾಯ ಉಂಟಾಗದಿರಲಿ ಎಂದು ಈ ಮಾರ್ಗದ ವಾಹನ ಸಂಚಾರ ಬಂದ್ ಮಾಡಲಾಗಿದೆ. ವಾಗ್ಧರಿ-ರಿಬ್ಬನಪಲ್ಲಿ ರಾಜ್ಯ ಹೆದ್ದಾರಿಯ ನಿರ್ವಣೆ ಹೊಂದಿರುವ ಸಂಸ್ಥೆಯು ಸೇತುವೆಯ ಕೊಚ್ಚಿ ಹೋದ ರಸ್ತೆಯನ್ನು ಗುರುವಾರ ಬೆಳಿಗ್ಗೆ ದುರಸ್ತಿ ಕೆಲಸ ಕೈಗೊಂಡಿದೆ.<br />ಹೆದ್ದಾರಿ ರಸ್ತೆ ಕೊಚ್ಚಿ ಹೋಗಿರುವ ಕುರಿತು ಪರಿಶೀಲಿಸಲು ಲೋಕೋಪಯೋಗಿ ಇಲಾಖೆಯ ಯಾವ ಅಧಿಕಾರಿಗಳೂ ಘಟನಾ ಸ್ಥಳದಲ್ಲಿ ಇರಲಿಲ್ಲ. ಅಧಿಕಾರಿಗಳ ವರ್ತನೆಗೆ ಜನರು ಆಕ್ರೋಶ ವ್ಯಕ್ತ ಮಾಡುತ್ತಿದ್ದರು.</p>.<p>ಮಳೆ ಮತ್ತು ಪ್ರವಾಹಕ್ಕೆ ಅನೇಕ ರಸ್ತೆಗಳು ಕೊಚ್ಚಿ ಹೋಗಿವೆ. ಹದಗೆಟ್ಟಿವೆ. ಅಧಿಕಾರಿಗಳು ತುರ್ತಾಗಿ ದುರಸ್ತಿ ಕೆಲಸ ಮಾಡಿಸಬೇಕು ಎಂದು ಜಾತ್ಯತೀತ ಜನತಾ ದಳ ಪಕ್ಷದ ತಾಲ್ಲೂಕು ಅಧ್ಯಕ್ಷ ನಾಗಣ್ಣ ವಾರದ ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>