<p><strong>ಕಲಬುರ್ಗಿ: ‘</strong>ಪೌರತ್ವ ಕಾಯ್ದೆಯನ್ನು ಕೆಲವರು ರಾಜಕೀಯ ದಾಳವಾಗಿ ಬಳಸಿಕೊಳ್ಳುತ್ತಿದ್ದಾರೆ’ ಎಂದು ಬಿಜೆಪಿ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಬಿ.ವೈ.ವಿಜಯೇಂದ್ರ ಆರೋಪಿಸಿದರು.</p>.<p>ನಗರದಲ್ಲಿ ಶುಕ್ರವಾರ ತಮ್ಮನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೌರತ್ವ (ತಿದ್ದುಪಡಿ) ವಿರೋಧಿಸಿ ಹೋರಾಟಕ್ಕೆ ಅಸಮಾಧಾನ ವ್ಯಕ್ತಪಡಿಸಿದರು.</p>.<p>‘ಪೌರತ್ವ ಕಾಯ್ದೆ ನೆರೆ ರಾಷ್ಟ್ರಗಳಿಂದ ಬಂದವರ ರಕ್ಷಣೆ ಒದಗಿಸುವ ಉದ್ದೇಶ ಹೊಂದಿದೆ. ಸತ್ಯ ಸಂಗತಿ ಗೂತ್ತಿದ್ದರೂ ರಾಜಕೀಯ ದುರುದ್ದೇಶದಿಂದ ಜನತೆಯ ದಾರಿ ತಪ್ಪಿಸಲಾಗುತ್ತಿದೆ. ಜನತೆಯನ್ನು ತಪ್ಪು ದಾರಿಗೆಳೆಯುವುದೂ ದೇಶದ್ರೋಹದ ಕೆಲಸ’ ಎಂದು ಹೇಳಿದರು.</p>.<p>‘ಯಡಿಯೂರಪ್ಪ ಮೊದಲು ಅಧಿಕಾರಕ್ಕೆ ಬಂದಾಗ ಇಬ್ಬರು ರೈತರು ಬಲಿಪಡೆದರು, ಇದೀಗ ಇಬ್ಬರು ಯುವಕರನ್ನು ಬಲಿಪಡೆದಿದ್ದಾರೆ’ ಎಂಬ ಸಿದ್ಧರಾಮಯ್ಯ ಟ್ವೀಟ್ಗೆ ವಿಜಯೇಂದ್ರ ಆಕ್ಷೇಪ ವ್ಯಕ್ತಪಡಿಸಿದರು.</p>.<p>‘ಯಡಿಯೂರಪ್ಪ ರೈತ ಮತ್ತು ಯುವ ವಿರೋಧಿ ಎಂದು ಹೇಳಿಕೆ ನೀಡುತ್ತಿದ್ದಾರೆ. ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಯತ್ನಿಸುತ್ತಿದ್ದಾರೆ. ಯಡಿಯೂರಪ್ಪ ಅವರ ಆಡಳಿದ ಬಗ್ಗೆ ವಿರೋಧ ಪಕ್ಷಗಳಿಗೆ ಹೇಳಲು ಏನೂ ಇಲ್ಲ. ಅದಕ್ಕಾಗಿ ಸಿದ್ದರಾಮಯ್ಯ ಈ ರೀತಿ ಹೇಳಿರಬೇಕು’ ಎಂದರು.</p>.<p>ಎಚ್.ಡಿ.ಕುಮಾರಸ್ವಾಮಿ ಹೇಳಿಕೆಯನ್ನು ವಿಜಯೇಂದ್ರ ಖಂಡಿಸಿದರು. ‘ಪಾಪ ಉಪಚುನಾವಣೆ ನಂತರ ಎಚ್.ಡಿ.ಕೆ ಅಡ್ರೆಸ್ಗೂ ಇರಲಿಲ್ಲ. ಈಗ ಮಾತಾಡ್ತಿದ್ದಾರೆ. ಇದಕ್ಕೆ ನಮ್ಮ ನಾಯಕರು ಉತ್ತರ ಕೊಡುತ್ತಾರೆ’ ಎಂದು ವಿಜಯೇಂದ್ರ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರ್ಗಿ: ‘</strong>ಪೌರತ್ವ ಕಾಯ್ದೆಯನ್ನು ಕೆಲವರು ರಾಜಕೀಯ ದಾಳವಾಗಿ ಬಳಸಿಕೊಳ್ಳುತ್ತಿದ್ದಾರೆ’ ಎಂದು ಬಿಜೆಪಿ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಬಿ.ವೈ.ವಿಜಯೇಂದ್ರ ಆರೋಪಿಸಿದರು.</p>.<p>ನಗರದಲ್ಲಿ ಶುಕ್ರವಾರ ತಮ್ಮನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೌರತ್ವ (ತಿದ್ದುಪಡಿ) ವಿರೋಧಿಸಿ ಹೋರಾಟಕ್ಕೆ ಅಸಮಾಧಾನ ವ್ಯಕ್ತಪಡಿಸಿದರು.</p>.<p>‘ಪೌರತ್ವ ಕಾಯ್ದೆ ನೆರೆ ರಾಷ್ಟ್ರಗಳಿಂದ ಬಂದವರ ರಕ್ಷಣೆ ಒದಗಿಸುವ ಉದ್ದೇಶ ಹೊಂದಿದೆ. ಸತ್ಯ ಸಂಗತಿ ಗೂತ್ತಿದ್ದರೂ ರಾಜಕೀಯ ದುರುದ್ದೇಶದಿಂದ ಜನತೆಯ ದಾರಿ ತಪ್ಪಿಸಲಾಗುತ್ತಿದೆ. ಜನತೆಯನ್ನು ತಪ್ಪು ದಾರಿಗೆಳೆಯುವುದೂ ದೇಶದ್ರೋಹದ ಕೆಲಸ’ ಎಂದು ಹೇಳಿದರು.</p>.<p>‘ಯಡಿಯೂರಪ್ಪ ಮೊದಲು ಅಧಿಕಾರಕ್ಕೆ ಬಂದಾಗ ಇಬ್ಬರು ರೈತರು ಬಲಿಪಡೆದರು, ಇದೀಗ ಇಬ್ಬರು ಯುವಕರನ್ನು ಬಲಿಪಡೆದಿದ್ದಾರೆ’ ಎಂಬ ಸಿದ್ಧರಾಮಯ್ಯ ಟ್ವೀಟ್ಗೆ ವಿಜಯೇಂದ್ರ ಆಕ್ಷೇಪ ವ್ಯಕ್ತಪಡಿಸಿದರು.</p>.<p>‘ಯಡಿಯೂರಪ್ಪ ರೈತ ಮತ್ತು ಯುವ ವಿರೋಧಿ ಎಂದು ಹೇಳಿಕೆ ನೀಡುತ್ತಿದ್ದಾರೆ. ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಯತ್ನಿಸುತ್ತಿದ್ದಾರೆ. ಯಡಿಯೂರಪ್ಪ ಅವರ ಆಡಳಿದ ಬಗ್ಗೆ ವಿರೋಧ ಪಕ್ಷಗಳಿಗೆ ಹೇಳಲು ಏನೂ ಇಲ್ಲ. ಅದಕ್ಕಾಗಿ ಸಿದ್ದರಾಮಯ್ಯ ಈ ರೀತಿ ಹೇಳಿರಬೇಕು’ ಎಂದರು.</p>.<p>ಎಚ್.ಡಿ.ಕುಮಾರಸ್ವಾಮಿ ಹೇಳಿಕೆಯನ್ನು ವಿಜಯೇಂದ್ರ ಖಂಡಿಸಿದರು. ‘ಪಾಪ ಉಪಚುನಾವಣೆ ನಂತರ ಎಚ್.ಡಿ.ಕೆ ಅಡ್ರೆಸ್ಗೂ ಇರಲಿಲ್ಲ. ಈಗ ಮಾತಾಡ್ತಿದ್ದಾರೆ. ಇದಕ್ಕೆ ನಮ್ಮ ನಾಯಕರು ಉತ್ತರ ಕೊಡುತ್ತಾರೆ’ ಎಂದು ವಿಜಯೇಂದ್ರ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>