ಕಲಬುರ್ಗಿ: ನಗರದಲ್ಲಿ ಶುಕ್ರವಾರ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿದ ಪಾಲಿಕೆ ಆಯುಕ್ತ ರಾಹುಲ್ ಪಾಂಡ್ವೆ ಅವರು, ಸ್ವಚ್ಛತೆ ಪರಿಶೀಲಿಸಿದರು.
ಇಲ್ಲಿನ ಕೇಂದ್ರ ಬಸ್ ನಿಲ್ದಾಣ, ಗೋವಾ ಹೋಟೆಲ್, ಸೂಪರ್ ಮಾರ್ಕೆಟ್ ಪ್ರದೇಶಕ್ಕೆ ಭೇಟಿ ನೀಡಿ ಪುಟ್ಪಾತ್ ಮೇಲೆ ವ್ಯಾಪಾರ ಮಾಡುತ್ತಿರುವ ಸಣ್ಣ ಪುಟ್ಟ ವ್ಯಾಪಾರಿಗಳು ಮತ್ತು ದೊಡ್ಡ ಅಂಗಡಿಗಳ ಮಾಲೀಕರಿಗೆ ತಾಕೀತು ಮಾಡಿದರು.
ರಸ್ತೆಯ ಮೇಲೆ ಬೇಕಾಬಿಟ್ಟಿ ಕಸ ಎಸೆಯಬಾರದು. ಒಂದು ವೇಳೆ ಕಸ ರಸ್ತೆಯ ಮೇಲೆ ಎಸೆಯುತ್ತಿರುವುದು ಕಂಡುಬಂದಲ್ಲಿ ಅಂತಹ ಮಾಲೀಕರಿಗೆ ದಂಡ ವಿಧಿಸಲಾಗುವುದು ಮತ್ತು ಉದ್ದಿಮೆ ಪರವಾನಗಿ ರದ್ದುಪಡಿಸಲಾಗುವುದು ಎಂದು ಸೂಚಿಸಿದರು.
ಮಾಸ್ಕ್ ಧರಿಸದೆ ಓಡಾಡುತ್ತಿರುವ ಸಾರ್ವಜನಿಕರಿಗೆ ಒಟ್ಟು ₹ 800 ದಂಡ ವಿಧಿಸಿ, ಜಾಗೃತಿ ಮೂಡಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.