ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸುಬ್ರಮಣಿಯನ್ ಸ್ವಾಮಿ ಚಿಂತಕ, ಅವರ ಟ್ವೀಟ್‌ಗೆ ಪ್ರತಿಕ್ರಿಯಿಸುವುದಿಲ್ಲ: ಬೊಮ್ಮಾಯಿ

Last Updated 17 ಸೆಪ್ಟೆಂಬರ್ 2021, 7:52 IST
ಅಕ್ಷರ ಗಾತ್ರ

ಕಲಬುರ್ಗಿ: ‘ಸುಬ್ರಮಣಿಯನ್ ಸ್ವಾಮಿ ಅವರೊಬ್ಬ ಸ್ವತಂತ್ರ ಚಿಂತಕ ಎಂದು ಹೇಳಿದ್ದೇನೆ. ಅದು ಟೀಕೆಯಲ್ಲ. ನನ್ನ ಹೇಳಿಕೆ ‌ಖಂಡಿಸಿ ಟ್ವೀಟ್ ಮಾಡಿರುವ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ’ಎಂದು ‌ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ನಗರದ ಐವಾನ್ ಇ ಶಾಹಿ ಅತಿಥಿಗೃಹದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕಲಬುರ್ಗಿ ಮಹಾನಗರ ಪಾಲಿಕೆಯಲ್ಲಿ ಅಧಿಕಾರಕ್ಕೆ ಬರುವ ನಿಟ್ಟಿನಲ್ಲಿ ಜೆಡಿಎಸ್ ಬೆಂಬಲವನ್ನು ಕೋರಿದ್ದೇವೆ. ನಮ್ಮ ಪ್ರಯತ್ನ ‌ಫಲಪ್ರದವಾಗಲಿದೆ’ ಎಂದು ‌ಭರವಸೆ ವ್ಯಕ್ತಪಡಿಸಿದರು.

‘ಅಧಿಕಾರಕ್ಕೆ ಬರುವಷ್ಟು ಅಗತ್ಯ ಬಲ ಬಿಜೆಪಿಗೆ ಬಂದಿಲ್ಲ. ಹೀಗಾಗಿ ನಾವು ಜೆಡಿಎಸ್ ವರಿಷ್ಠರೊಂದಿಗೆ ಮಾತನಾಡಿದ್ದೇವೆ. ಮೇಯರ್, ಉಪಮೇಯರ್ ಆಯ್ಕೆಗೆ ಚುನಾವಣಾ ಆಯೋಗ ಶೀಘ್ರ ದಿನಾಂಕ ಗೊತ್ತುಪಡಿಸಬಹುದು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT