<p><strong>ಕಾಳಗಿ</strong>: ಇಲ್ಲಿನ ದೇವರಾಜ ಮಾಲಿಪಾಟೀಲ ಉಡಗಿ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ ಮಂಗಳವಾರ ರಾತ್ರಿ ಕಿಡಿಗೇಡಿಗಳು ದಾಂಧಲೆ ನಡೆಸಿ ಉಪಕರಣಗಳನ್ನು ಒಡೆದು ಹಾಕಿರುವ ಘಟನೆ ಬುಧವಾರ ಕಂಡುಬಂದಿದೆ.</p>.<p>ಎಂದಿನಂತೆ ಸಿಬ್ಬಂದಿ ಬೆಳಿಗ್ಗೆ ಕಾಲೇಜಿಗೆ ಬಂದಾಗ ‘ಯಾರೋ ಕಿಡಿಗೇಡಿಗಳು ಕಾಲೇಜಿನ ಕಚೇರಿ ಬಾಗಿಲು ಮುರಿದು, ಕಂಪ್ಯೂಟರ್, ಟೇಬಲ್ ಮೇಲಿನ ಗಾಜು ಒಡೆದು, ಪ್ರಿಂಟರ್ ಮತ್ತು ವಿದ್ಯುತ್ ಸ್ವಿಚ್ ಗಳನ್ನು ಹಾಳುಮಾಡಿದ್ದು ಕಂಡುಬಂದಿದೆ. ಶೌಚಾಲಯದ ಕೊಠಡಿ ಸಹ ಹಾಳು ಮಾಡಿದ್ದಾರೆ.</p>.<p>ವಿಷಯ ತಿಳಿಯುತ್ತಿದ್ದಂತೆ ಪಿಎಸ್ಐ ತಿಮ್ಮಯ್ಯ ಬಿ.ಕೆ, ಕಾನ್ಸ್ಟೇಬಲ್ ಮೌನೇಶ, ಸಂಗಮೇಶ, ಮಂಜುನಾಥ ಮತ್ತು ಬೆರಳಚ್ಚು ವಿಭಾಗದ ಹೆಡ್ ಕಾನ್ಸ್ಟೇಬಲ್ ಸಂತೋಷ, ಶ್ವಾನದಳದ ವಿನೋದ, ಸೈದಪ್ಪ ಭೇಟಿ ನೀಡಿ ಪರಿಶೀಲಿಸಿದರು.</p>.<p>ಈ ಕುರಿತು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>
<p><strong>ಕಾಳಗಿ</strong>: ಇಲ್ಲಿನ ದೇವರಾಜ ಮಾಲಿಪಾಟೀಲ ಉಡಗಿ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ ಮಂಗಳವಾರ ರಾತ್ರಿ ಕಿಡಿಗೇಡಿಗಳು ದಾಂಧಲೆ ನಡೆಸಿ ಉಪಕರಣಗಳನ್ನು ಒಡೆದು ಹಾಕಿರುವ ಘಟನೆ ಬುಧವಾರ ಕಂಡುಬಂದಿದೆ.</p>.<p>ಎಂದಿನಂತೆ ಸಿಬ್ಬಂದಿ ಬೆಳಿಗ್ಗೆ ಕಾಲೇಜಿಗೆ ಬಂದಾಗ ‘ಯಾರೋ ಕಿಡಿಗೇಡಿಗಳು ಕಾಲೇಜಿನ ಕಚೇರಿ ಬಾಗಿಲು ಮುರಿದು, ಕಂಪ್ಯೂಟರ್, ಟೇಬಲ್ ಮೇಲಿನ ಗಾಜು ಒಡೆದು, ಪ್ರಿಂಟರ್ ಮತ್ತು ವಿದ್ಯುತ್ ಸ್ವಿಚ್ ಗಳನ್ನು ಹಾಳುಮಾಡಿದ್ದು ಕಂಡುಬಂದಿದೆ. ಶೌಚಾಲಯದ ಕೊಠಡಿ ಸಹ ಹಾಳು ಮಾಡಿದ್ದಾರೆ.</p>.<p>ವಿಷಯ ತಿಳಿಯುತ್ತಿದ್ದಂತೆ ಪಿಎಸ್ಐ ತಿಮ್ಮಯ್ಯ ಬಿ.ಕೆ, ಕಾನ್ಸ್ಟೇಬಲ್ ಮೌನೇಶ, ಸಂಗಮೇಶ, ಮಂಜುನಾಥ ಮತ್ತು ಬೆರಳಚ್ಚು ವಿಭಾಗದ ಹೆಡ್ ಕಾನ್ಸ್ಟೇಬಲ್ ಸಂತೋಷ, ಶ್ವಾನದಳದ ವಿನೋದ, ಸೈದಪ್ಪ ಭೇಟಿ ನೀಡಿ ಪರಿಶೀಲಿಸಿದರು.</p>.<p>ಈ ಕುರಿತು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>