‘ನಾನು ಪದೇಪದೇ ಹೇಳುತ್ತಿದ್ದೇನೆ. ಅಧಿಕಾರಿಗಳ ವರ್ಗಾವಣೆ ಒಂದು ದಂಧೆಯಾಗಿ ಮಾರ್ಪಟ್ಟಿದ್ದು, ಇದರಿಂದಾಗಿ ಕಲಬುರ್ಗಿ ಭ್ರಷ್ಟಾಚಾರದ ಕೂಪದಂತಾಗಿದೆ. ಈ ಮುಂಚೆ ಜಿಲ್ಲಾಧಿಕಾರಿ ವರ್ಗಾವಣೆ ಮಾಡಿ, ಆ ನಂತರ ತಡೆಹಿಡಿಯಲಾಗಿತ್ತು. ಈಗ ಕಮೀಷನರ್ ವರ್ಗಾವಣೆಯಾಗಿದೆ. ಅಧಿಕಾರಿಗಳ ವರ್ಗಾವಣೆ ಮಾಡಿಸುವುದರ ಬದಲು ಬಿಜೆಪಿ ನಾಯಕರು ಕೊರೊನಾ ವಿರುದ್ಧ ಹೋರಾಟಕ್ಕೆ ಪ್ರಾಮುಖ್ಯತೆ ನೀಡಲಿ’ ಎಂದೂ ಟೀಕಿಸಿದ್ದಾರೆ.