ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಸಿಪಿಐ (ಎಂ) ಪಕ್ಷದ ಜಿಲ್ಲಾ ಕಾರ್ಯದರ್ಶಿ ಕೆ. ನೀಲಾ, ‘ಈಶಾನ್ಯ ಪದವೀಧರ ಕ್ಷೇತ್ರದಿಂದ ಸ್ಪರ್ಧೆಗೆ ಇಳಿದಿರುವ ಪಕ್ಷೇತರ ಅಭ್ಯರ್ಥಿ ಎನ್. ಪ್ರತಾಪ್ ರೆಡ್ಡಿ ಅವರಿಗೆ ಪಕ್ಷ ಬೆಂಬಲಿಸಿದೆ. ಪಕ್ಷದ ರಾಜ್ಯ ಸಮಿತಿಯ ನಿರ್ಣಯಕ್ಕೆ ವಿರುದ್ಧವಾಗಿ ಹಾಗೂ ಪಕ್ಷದ ಗಮನಕ್ಕೆ ತರದೇ ಜಾವೇದ್ ಹುಸೇನ್ ಅವರು ಸ್ಪರ್ಧಿಸುವ ಮೂಲಕ ಶಿಸ್ತನ್ನು ಉಲ್ಲಂಘಿಸಿದ್ದಾರೆ. ರಾಜ್ಯ ಸಮಿತಿಯ ನಿರ್ಣಯವನ್ನು ಬೆಂಬಲಿಸುವಂತೆ, ನಾಮಪತ್ರ ಸಲ್ಲಿಸಿದಂತೆ ಸೂಚನೆ ನೀಡಿದರೂ ತಮ್ಮ ನಿರ್ಧಾರವನ್ನು ಬದಲಿಸಿಲ್ಲ. ಆದ್ದರಿಂದ ಅವರಿಗೆ ಶೋಕಾಸ್ ನೋಟಿಸ್ ನೀಡಲಾಗಿದ್ದು, ಅಲ್ಲಿಯವರೆಗೆ ಸದಸ್ಯತ್ವವನ್ನು ಅಮಾನತಿನಲ್ಲಿ ಇರಿಸಲಾಗುವುದು’ ಎಂದರು.