‘ಕೋಮು ಬಣ್ಣ ಬಳಿಯುವ ಹೇಳಿಕೆಗಳ ಮೂಲಕ ಕಾಂಗ್ರೆಸ್ ಪಕ್ಷವನ್ನು ಹಿಂದೂ ವಿರೋಧಿ ಎಂದು ಬಿಂಬಿಸಲು ಜಾಧವ ಸುಳ್ಳು ಆರೋಪ ಮಾಡಿದ್ದಾರೆ. ಇತ್ತೀಚಿನ ರ್ಯಾಲಿಯಲ್ಲಿ ಜಾಧವ ಸುಳ್ಳು ಆರೋಪ ಮಾಡಿದ್ದು, ಕಾಂಗ್ರೆಸ್ ಪಕ್ಷ ಸುಪ್ರಿಂಕೋರ್ಟ್ನಲ್ಲಿ ಅಫಿಡವಿಟ್ ಹಾಕುವ ಮೂಲಕ 20 ವರ್ಷಗಳಿಂದ ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣವನ್ನು ತಡೆದಿತ್ತು. ಕಾಂಗ್ರೆಸ್ ನಾಯಕರು ಕಪ್ಪು ಪಟ್ಟಿ ಧರಿಸುವ ಮೂಲಕ ಶ್ರೀರಾಮ ಮಂದಿರ ಉದ್ಘಾಟನೆ ಸಂದರ್ಭದಲ್ಲಿ ಪ್ರತಿಭಟಿಸಿದ್ದರು. ಕಾಂಗ್ರೆಸ್ ಪಕ್ಷ ಸನಾತನಧರ್ಮ ಹಾಗೂ ಹಿಂದೂ ಧರ್ಮದ ವಿರುದ್ಧ ತುಷ್ಟೀಕರಣದಲ್ಲಿ ತೊಡಗಿದ್ದು ಕೀಳು ರಾಜಕೀಯ ಮಾಡುತ್ತಿದೆ ಎಂದು ಸುಳ್ಳು ಆರೋಪ ಮಾಡಿದ್ದರು.
ಈ ರೀತಿ ಸುಳ್ಳು ಹೇಳಿಕೆಗಳ ಮೂಲಕ ಕೋಮುಭಾವನೆ ಮೂಡಿಸುವ ಮೂಲಕ ಉಮೇಶ ಜಾಧವ ಚುನಾವಣೆಗೆ ಸಂಬಂಧಿಸಿದಂತೆ ಅಪರಾಧ ಮಾಡಿದ್ದಾರೆ’ ಎಂದು ಕಾಂಗ್ರೆಸ್ ದೂರಿನಲ್ಲಿ ಉಲ್ಲೇಖಿಸಿದೆ.