<p><strong>ಕಲಬುರಗಿ:</strong> ಪಂಚಾಯತ್ರಾಜ್ ಎಂಜಿನಿಯರಿಂಗ್, ಸಮಾಜ ಕಲ್ಯಾಣ ಇಲಾಖೆ, ಪ್ರಧಾನಮಂತ್ರಿ ಗ್ರಾಮೀಣ ಆವಾಸ್ ಯೋಜನೆ, ಕೆಕೆಆರ್ಡಿಬಿ ಅನುದಾನದಲ್ಲಿ ನಡೆಯುತ್ತಿರುವ ಕಾಮಗಾರಿಗಳನ್ನು ವಿಳಂಬ ಮಾಡದೇ ತಕ್ಷಣ ಪೂರ್ಣಗೊಳಿಸಬೇಕು ಎಂದು ಅಫಜಲಪುರ ಶಾಸಕ ಎಂ.ವೈ. ಪಾಟೀಲ ಅಧಿಕಾರಿಗಳಿಗೆ ಸೂಚನೆ ನೀಡಿದರು.</p>.<p>ನಗರದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಕಲಬುರಗಿ ತಾಲ್ಲೂಕಿನ ತಮ್ಮ ಕ್ಷೇತ್ರ ವ್ಯಾಪ್ತಿಯ ಗ್ರಾಮಗಳ ಕುರಿತ ಕೆಡಿಪಿ ಸಭೆಯಲ್ಲಿ ಅವರು ಮಾತನಾಡಿದರು.</p>.<p>ಶಾಸಕರಿಗೆ ಮಾಹಿತಿ ನೀಡಿದ ಪಂಚಾಯತ್ರಾಜ್ ಎಂಜಿನಿಯರಿಂಗ್ ವಿಭಾಗದ ಅಧಿಕಾರಿ, ‘2021–22ನೇ ಸಾಲಿನಲ್ಲಿ ಹಾಗರಗುಂಡಗಿ ಗ್ರಾಮದಿಂದ ತಾಡತೆಗನೂರ ರಸ್ತೆ ಕಾಮಗಾರಿಯ ಅಂದಾಜು ಪತ್ರಿಕೆ ಮಾಡಲಾಗಿದ್ದು, ಹಿಟ್ಟನಹಳ್ಳಿ ಗ್ರಾಮದಿಂದ ₹ 60 ಲಕ್ಷ ವೆಚ್ಚದಲ್ಲಿ ರಸ್ತೆ ಕಾಮಗಾರಿ, ₹ 90 ಲಕ್ಷ ವೆಚ್ಚದ ನಡುವಿನಹಳ್ಳಿ ರಸ್ತೆ ಕಾಮಗಾರಿಗಳಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ರಸ್ತೆಗಳ ಸುಧಾರಣೆಗೆ ₹ 50 ಲಕ್ಷ ಇದೆ. ಪ್ಯಾಕೇಜ್ಗೆ ಅನುಗುಣವಾಗಿ ಕಾಮಗಾರಿಗಳನ್ನು ಮಾಡಿರುವುದಾಗಿ’ ತಿಳಿಸಿದರು.</p>.<p>ಸೋಮನಾಥಹಳ್ಳಿ ಕಾಮಗಾರಿ ಪ್ರಗತಿಯಲ್ಲಿದೆ. 2021–22ನೇ ಸಾಲಿನ ಕೆಕೆಆರ್ಡಿಬಿ ಅನುದಾನದಲ್ಲಿ ಹೈಟೆಕ್ ಶೌಚಾಲಯ ನಿರ್ಮಾಣ, ಅವರಾದ ಸಿ.ಸಿ. ರಸ್ತೆ ಕಾಮಗಾರಿ, ಸಾರ್ವಜನಿಕ ಶಿಕ್ಷಣ ಇಲಾಖೆಯ 4 ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಸಮಗ್ರ ಶಿಕ್ಷಣ ಯೋಜನೆಯಡಿ ಫರಹತಾಬಾದ್ನಲ್ಲಿ ಎರಡು ಶೌಚಾಲಯ ಕಾಮಗಾರಿಗಳು ಇವೆ. ಗ್ರಾಮದಲ್ಲಿ ಸರ್ಕಾರಿ ಶಾಲಾ ಕಟ್ಟಡ ನಿರ್ಮಿಸಲು ಎರಡು ಎಕರೆ, ಸಾಧ್ಯವಾಗದಿದ್ದರೆ ಒಂದು ಎಕರೆಯನ್ನಾದರೂ ಒದಗಿಸಬೇಕು ಎಂದು ಮನವಿ<br />ಮಾಡಿದರು.</p>.<p><strong>ಎಂಜಿನಿಯರ್ಗೆ ನೋಟಿಸ್: </strong>ಖಣದಾಳದಲ್ಲಿ 2015–16ನೇ ಸಾಲಿನಲ್ಲಿ ಅಂಬೇಡ್ಕರ್ ಭವನ ನಿರ್ಮಾಣ ಕಾಮಗಾರಿ ನಡೆಯುತ್ತಿರುವ ಬಗ್ಗೆ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಮಾಹಿತಿ ನೀಡಿದರು. ಐದು ವರ್ಷಗಳಾದರೂ ಮುಕ್ತಾಯವಾಗದ್ದನ್ನು ಗಮನಿಸಿದ ಶಾಸಕ ಎಂ.ವೈ. ಪಾಟೀಲ, ಇದಕ್ಕೆ ಕಾರಣರಾದ ಲೋಕೋಪಯೋಗಿ ಇಲಾಖೆ ಎಇಇಗೆ ನೋಟಿಸ್ ಜಾರಿಗೊಳಿಸಲು ಸೂಚಿಸಿದರು.</p>.<p>ಪ್ರಧಾನಮಂತ್ರಿ ಗ್ರಾಮೀಣ ಆವಾಸ್ ಯೋಜನೆಯಡಿ ಕ್ಷೇತ್ರದಲ್ಲಿ ಒಟ್ಟು ಐದು ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದ್ದು, ಕಡಣಿ–ಕವಲಗಾದಲ್ಲಿ ಎರಡು ತಿಂಗಳಲ್ಲಿ ಕೆಲಸ ಮುಕ್ತಾಯಗೊಳ್ಳಲಿದೆ. ₹ 25.80 ಲಕ್ಷ ವೆಚ್ಚದ ಹಸನಾಪುರ ಕಾಮಗಾರಿಯು ಈಗಾಗಲೇ ಪೂರ್ಣಗೊಂಡಿದೆ ಎಂದರು.</p>.<p>ಕೋವಿಡ್ನಿಂದ ಮೃತಪಟ್ಟ ಫರಹತಾಬಾದ್ ಹಾಗೂ ಖಣದಾಳದ ವ್ಯಕ್ತಿಗಳ ಕುಟುಂಬ ಸದಸ್ಯರಿಗೆ ಶಾಸಕ ಎಂ.ವೈ. ಪಾಟೀಲ ಅವರು ತಲಾ ₹ 1 ಲಕ್ಷ ಮೊತ್ತದ ಪರಿಹಾರದ ಚೆಕ್ಗಳನ್ನು ವಿತರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ:</strong> ಪಂಚಾಯತ್ರಾಜ್ ಎಂಜಿನಿಯರಿಂಗ್, ಸಮಾಜ ಕಲ್ಯಾಣ ಇಲಾಖೆ, ಪ್ರಧಾನಮಂತ್ರಿ ಗ್ರಾಮೀಣ ಆವಾಸ್ ಯೋಜನೆ, ಕೆಕೆಆರ್ಡಿಬಿ ಅನುದಾನದಲ್ಲಿ ನಡೆಯುತ್ತಿರುವ ಕಾಮಗಾರಿಗಳನ್ನು ವಿಳಂಬ ಮಾಡದೇ ತಕ್ಷಣ ಪೂರ್ಣಗೊಳಿಸಬೇಕು ಎಂದು ಅಫಜಲಪುರ ಶಾಸಕ ಎಂ.ವೈ. ಪಾಟೀಲ ಅಧಿಕಾರಿಗಳಿಗೆ ಸೂಚನೆ ನೀಡಿದರು.</p>.<p>ನಗರದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಕಲಬುರಗಿ ತಾಲ್ಲೂಕಿನ ತಮ್ಮ ಕ್ಷೇತ್ರ ವ್ಯಾಪ್ತಿಯ ಗ್ರಾಮಗಳ ಕುರಿತ ಕೆಡಿಪಿ ಸಭೆಯಲ್ಲಿ ಅವರು ಮಾತನಾಡಿದರು.</p>.<p>ಶಾಸಕರಿಗೆ ಮಾಹಿತಿ ನೀಡಿದ ಪಂಚಾಯತ್ರಾಜ್ ಎಂಜಿನಿಯರಿಂಗ್ ವಿಭಾಗದ ಅಧಿಕಾರಿ, ‘2021–22ನೇ ಸಾಲಿನಲ್ಲಿ ಹಾಗರಗುಂಡಗಿ ಗ್ರಾಮದಿಂದ ತಾಡತೆಗನೂರ ರಸ್ತೆ ಕಾಮಗಾರಿಯ ಅಂದಾಜು ಪತ್ರಿಕೆ ಮಾಡಲಾಗಿದ್ದು, ಹಿಟ್ಟನಹಳ್ಳಿ ಗ್ರಾಮದಿಂದ ₹ 60 ಲಕ್ಷ ವೆಚ್ಚದಲ್ಲಿ ರಸ್ತೆ ಕಾಮಗಾರಿ, ₹ 90 ಲಕ್ಷ ವೆಚ್ಚದ ನಡುವಿನಹಳ್ಳಿ ರಸ್ತೆ ಕಾಮಗಾರಿಗಳಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ರಸ್ತೆಗಳ ಸುಧಾರಣೆಗೆ ₹ 50 ಲಕ್ಷ ಇದೆ. ಪ್ಯಾಕೇಜ್ಗೆ ಅನುಗುಣವಾಗಿ ಕಾಮಗಾರಿಗಳನ್ನು ಮಾಡಿರುವುದಾಗಿ’ ತಿಳಿಸಿದರು.</p>.<p>ಸೋಮನಾಥಹಳ್ಳಿ ಕಾಮಗಾರಿ ಪ್ರಗತಿಯಲ್ಲಿದೆ. 2021–22ನೇ ಸಾಲಿನ ಕೆಕೆಆರ್ಡಿಬಿ ಅನುದಾನದಲ್ಲಿ ಹೈಟೆಕ್ ಶೌಚಾಲಯ ನಿರ್ಮಾಣ, ಅವರಾದ ಸಿ.ಸಿ. ರಸ್ತೆ ಕಾಮಗಾರಿ, ಸಾರ್ವಜನಿಕ ಶಿಕ್ಷಣ ಇಲಾಖೆಯ 4 ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಸಮಗ್ರ ಶಿಕ್ಷಣ ಯೋಜನೆಯಡಿ ಫರಹತಾಬಾದ್ನಲ್ಲಿ ಎರಡು ಶೌಚಾಲಯ ಕಾಮಗಾರಿಗಳು ಇವೆ. ಗ್ರಾಮದಲ್ಲಿ ಸರ್ಕಾರಿ ಶಾಲಾ ಕಟ್ಟಡ ನಿರ್ಮಿಸಲು ಎರಡು ಎಕರೆ, ಸಾಧ್ಯವಾಗದಿದ್ದರೆ ಒಂದು ಎಕರೆಯನ್ನಾದರೂ ಒದಗಿಸಬೇಕು ಎಂದು ಮನವಿ<br />ಮಾಡಿದರು.</p>.<p><strong>ಎಂಜಿನಿಯರ್ಗೆ ನೋಟಿಸ್: </strong>ಖಣದಾಳದಲ್ಲಿ 2015–16ನೇ ಸಾಲಿನಲ್ಲಿ ಅಂಬೇಡ್ಕರ್ ಭವನ ನಿರ್ಮಾಣ ಕಾಮಗಾರಿ ನಡೆಯುತ್ತಿರುವ ಬಗ್ಗೆ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಮಾಹಿತಿ ನೀಡಿದರು. ಐದು ವರ್ಷಗಳಾದರೂ ಮುಕ್ತಾಯವಾಗದ್ದನ್ನು ಗಮನಿಸಿದ ಶಾಸಕ ಎಂ.ವೈ. ಪಾಟೀಲ, ಇದಕ್ಕೆ ಕಾರಣರಾದ ಲೋಕೋಪಯೋಗಿ ಇಲಾಖೆ ಎಇಇಗೆ ನೋಟಿಸ್ ಜಾರಿಗೊಳಿಸಲು ಸೂಚಿಸಿದರು.</p>.<p>ಪ್ರಧಾನಮಂತ್ರಿ ಗ್ರಾಮೀಣ ಆವಾಸ್ ಯೋಜನೆಯಡಿ ಕ್ಷೇತ್ರದಲ್ಲಿ ಒಟ್ಟು ಐದು ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದ್ದು, ಕಡಣಿ–ಕವಲಗಾದಲ್ಲಿ ಎರಡು ತಿಂಗಳಲ್ಲಿ ಕೆಲಸ ಮುಕ್ತಾಯಗೊಳ್ಳಲಿದೆ. ₹ 25.80 ಲಕ್ಷ ವೆಚ್ಚದ ಹಸನಾಪುರ ಕಾಮಗಾರಿಯು ಈಗಾಗಲೇ ಪೂರ್ಣಗೊಂಡಿದೆ ಎಂದರು.</p>.<p>ಕೋವಿಡ್ನಿಂದ ಮೃತಪಟ್ಟ ಫರಹತಾಬಾದ್ ಹಾಗೂ ಖಣದಾಳದ ವ್ಯಕ್ತಿಗಳ ಕುಟುಂಬ ಸದಸ್ಯರಿಗೆ ಶಾಸಕ ಎಂ.ವೈ. ಪಾಟೀಲ ಅವರು ತಲಾ ₹ 1 ಲಕ್ಷ ಮೊತ್ತದ ಪರಿಹಾರದ ಚೆಕ್ಗಳನ್ನು ವಿತರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>