‘ಭಾರತವು ವಿವಿಧ ಜನಾಂಗ, ಭಾಷೆ, ಸಂಸ್ಕೃತಿ ಹೋಂದಿರುವ ದೇಶ. ಭಾರತ ಸಂವಿಧಾನವು ಪ್ರಶ್ನಿಸುವ ಮತ್ತು ಪ್ರತಿಭಟಿಸುವ ಹಕ್ಕನ್ನು ನೀಡಿದೆ. ಆದರೆ ಭಾರತ ಸರ್ಕಾರವು ಪ್ರಶ್ನಿಸುವವರನ್ನು ಬಂಧಿಸುತ್ತ ಪ್ರಜಾಪ್ರಭುತ್ವದ ಕಗ್ಗೋಲೆ ಮಾಡುತ್ತಿದೆ. ಜನರಿಂದ ಆಯ್ಕೆಯಾದ ಪ್ರತಿನಿಧಿಗಳು ಸಂವಿಧಾನಕ್ಕೆ ದೇಶದ ಕಾನೂನಿಗೆ ತಲೆ ಬಾಗದೆ ಆರ್ಎಸ್ಎಸ್ನ ಒಂದು ಘಟಕವಾಗಿ ಕೆಲಸ ಮಾಡುತ್ತ ದೇಶದಲ್ಲಿ ಶಾಂತಿ ಸುವ್ಯವಸ್ಥೆಯನ್ನು ಕದಡುತ್ತಿದ್ದಾರೆ. ಇದು ಸಂವಿಧಾನ ವಿರೋಧಿ ನಡೆ. ತೀಸ್ತಾ ಸೆಟಲ್ವಾಡ್ ಅವರ ಅಕ್ರಮ ಬಂಧನ ವಿರೋಧಿಸುತ್ತ ಕೂಡಲೇ ಅವರನ್ನು ಬಿಡುಗಡೆ ಮಾಡಬೇಕು’ ಎಂದು ಒತ್ತಾಯಿಸಿದರು.