ಗೀತಾ ನಾಗಭೂಷಣ ಅವರ ಮನೆಗೆ ತೆರಳಿ ಮಾಲಾರ್ಪಣೆ ಮಾಡಿ ಸಂಸದ ಡಾ.ಉಮೇಶ ಜಾಧವ ಅವರು, ಕುಟುಂಬದ ಸದಸ್ಯರಿಗೆ ದೈರ್ಯ ಹೇಳಿದರು. ಶಾಸಕ ಡಾ.ಅಜಯ ಸಿಂಗ್, ವಿಧಾನ ಪರಿಷತ್ ಸದಸ್ಯ ಬಿ.ಜಿ. ಪಾಟೀಲ, ಮಾಜಿ ಸದಸ್ಯ ತಿಪ್ಪಣ್ಣಪ್ಪ ಕಮಕನೂರ, ಮಾಜಿ ಸಚಿವ ಕೆ.ಬಿ.ಶಾಣಪ್ಪ, ಹೋರಾಟಗಾರರಾದ ಮೀನಾಕ್ಷಿ ಬಾಳಿ, ಹಿರಿಯ ಕಲಾವಿದ ವಿ.ಜಿ. ಅಂದಾಣಿ, ಕೆ.ನೀಲಾ, ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ವೀರಭದ್ರ ಸಿಂಪಿ, ವಿಶ್ವಜ್ಯೋತಿ ಪ್ರತಿಷ್ಠಾನದ ಅಧ್ಯಕ್ಷ ವಿಜಯಕುಮಾರ ತೇಗಲತಿಪ್ಪಿ, ಸುರೇಶ ಬಡಿಗೇರ್ ಮುಂತಾದವರು ಕುಟುಂಬಕ್ಕೆ ಸಾಂತ್ವನ ಹೇಳಿದರು.