<p><strong>ಕಲಬುರ್ಗಿ: </strong>ಕೇಂದ್ರ ಸರ್ಕಾರವು ಎಪಿಎಂಸಿ, ಕೃಷಿ ಕಾಯ್ದೆಗಳಿಗೆ ತಿದ್ದುಪಡಿ ತರುವ ಮೂಲಕ ರೈತ ವಿರೋಧಿ ನೀತಿ ಅನುಸರಿಸುತ್ತಿದೆ. ಈ ಕ್ರಮದ ವಿರುದ್ಧ ಕಾಂಗ್ರೆಸ್ ದೇಶದಾದ್ಯಂತ ಸಹಿ ಅಭಿಯಾನ ಕೈಗೊಳ್ಳಲಿದೆ ಎಂದು ಶಾಸಕ ಪ್ರಿಯಾಂಕ್ ಖರ್ಗೆ ತಿಳಿಸಿದರು.</p>.<p>ಮಂಡ್ಯದಲ್ಲಿ ಅ.10ರಂದು ಅಭಿಯಾನಕ್ಕೆ ಚಾಲನೆ ನೀಡಲಾಗುವುದು. ಕಾಂಗ್ರೆಸ್ ನಾಯಕರಾದ ರಣದೀಪ್ ಸಿಂಗ್ ಸುರ್ಜೆವಾಲಾ, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಮುಂತಾದವರು ಭಾಗವಹಿಸುವರು ಎಂದು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.</p>.<p>ಅಭಿಯಾನದ ಭಾಗವಾಗಿ ದೇಶದಾದ್ಯಂತ ಸಂಚರಿಸಿ 10 ಕೋಟಿಗೂ ಹೆಚ್ಚು ಸಹಿ ಸಂಗ್ರಹಿಸಲಾಗುವುದು. ನವೆಂಬರ್ 14ರಂದು ರಾಷ್ಟ್ರಪತಿ ಅವರನ್ನು ಭೇಟಿ ಮಾಡಲಾಗುವುದು. ತಿದ್ದುಪಡಿಯನ್ನು ಹಿಂಪಡೆಯುವಂತೆ ಒತ್ತಾಯಿಸಲಾಗುವುದು ಎಂದು ಅವರು ವಿವರಿಸಿದರು.</p>.<p>ಕಾಯ್ದೆ ತಿದ್ದುಪಡಿಯಿಂದ ರೈತರಿಗೆ ಅಲ್ಲದೇ ಕೃಷಿ ಕ್ಷೇತ್ರದ ಮೇಲೆಯೂ ದುಷ್ಪರಿಣಾಮ ಬೀರಲಿದೆ. ಎಪಿಎಂಸಿ ವ್ಯವಸ್ಥೆಗೆ ಧಕ್ಕೆಯಾಗಲಿದೆ. ರೈತರ ಪರಿಸ್ಥಿತಿ ಗಂಭೀರವಾಗಲಿದೆ. ಈ ಎಲ್ಲಾ ಅಂಶಗಳನ್ನು ಅಭಿಯಾನದಲ್ಲಿ ಬಿಂಬಿಸಲಾಗುವುದು. ರೈತರು, ಸಾರ್ವಜನಿಕರಿಂದ ಸಹಿ ಸಂಗ್ರಹಿಸಲಾಗುವುದು ಎಂದು ಹೇಳಿದರು.</p>.<p>ಮುಖಂಡ, ಶರಣಪ್ರಕಾಶ್ ಪಾಟೀಲ, ಶಾಸಕ ಅಜಯ್ ಸಿಂಗ್, ಶಾಸಕರಾದ ಖನೀಜ್ ಫಾತಿಮಾ, ಎಂಎಲ್ಸಿ ಚಂದ್ರಶೇಖರ್, ಡಿಸಿಸಿ ಅಧ್ಯಕ್ಷರಾದ ಜಗದೇವ, ಎಂಎಲ್ಸಿ ಅಭ್ಯರ್ಥಿ ಶರಣಪ್ಪ ಮಟ್ಟೂರು, ಗುತ್ತೇದಾರ, ಕೆ.ಬಿ.ಶಾಣಪ್ಪ, ತಿಪ್ಪಣ್ಣಪ್ಪ ಕಮಕನೂರು, ಶರಣಪ್ಪ ಮಾನೇಗಾರ್, ಸುಭಾಷ್ ರಾಠೋಡ್, ವಿಜಯಕುಮಾರ ಜಿ ರಾಮಕೃಷ್ಣ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರ್ಗಿ: </strong>ಕೇಂದ್ರ ಸರ್ಕಾರವು ಎಪಿಎಂಸಿ, ಕೃಷಿ ಕಾಯ್ದೆಗಳಿಗೆ ತಿದ್ದುಪಡಿ ತರುವ ಮೂಲಕ ರೈತ ವಿರೋಧಿ ನೀತಿ ಅನುಸರಿಸುತ್ತಿದೆ. ಈ ಕ್ರಮದ ವಿರುದ್ಧ ಕಾಂಗ್ರೆಸ್ ದೇಶದಾದ್ಯಂತ ಸಹಿ ಅಭಿಯಾನ ಕೈಗೊಳ್ಳಲಿದೆ ಎಂದು ಶಾಸಕ ಪ್ರಿಯಾಂಕ್ ಖರ್ಗೆ ತಿಳಿಸಿದರು.</p>.<p>ಮಂಡ್ಯದಲ್ಲಿ ಅ.10ರಂದು ಅಭಿಯಾನಕ್ಕೆ ಚಾಲನೆ ನೀಡಲಾಗುವುದು. ಕಾಂಗ್ರೆಸ್ ನಾಯಕರಾದ ರಣದೀಪ್ ಸಿಂಗ್ ಸುರ್ಜೆವಾಲಾ, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಮುಂತಾದವರು ಭಾಗವಹಿಸುವರು ಎಂದು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.</p>.<p>ಅಭಿಯಾನದ ಭಾಗವಾಗಿ ದೇಶದಾದ್ಯಂತ ಸಂಚರಿಸಿ 10 ಕೋಟಿಗೂ ಹೆಚ್ಚು ಸಹಿ ಸಂಗ್ರಹಿಸಲಾಗುವುದು. ನವೆಂಬರ್ 14ರಂದು ರಾಷ್ಟ್ರಪತಿ ಅವರನ್ನು ಭೇಟಿ ಮಾಡಲಾಗುವುದು. ತಿದ್ದುಪಡಿಯನ್ನು ಹಿಂಪಡೆಯುವಂತೆ ಒತ್ತಾಯಿಸಲಾಗುವುದು ಎಂದು ಅವರು ವಿವರಿಸಿದರು.</p>.<p>ಕಾಯ್ದೆ ತಿದ್ದುಪಡಿಯಿಂದ ರೈತರಿಗೆ ಅಲ್ಲದೇ ಕೃಷಿ ಕ್ಷೇತ್ರದ ಮೇಲೆಯೂ ದುಷ್ಪರಿಣಾಮ ಬೀರಲಿದೆ. ಎಪಿಎಂಸಿ ವ್ಯವಸ್ಥೆಗೆ ಧಕ್ಕೆಯಾಗಲಿದೆ. ರೈತರ ಪರಿಸ್ಥಿತಿ ಗಂಭೀರವಾಗಲಿದೆ. ಈ ಎಲ್ಲಾ ಅಂಶಗಳನ್ನು ಅಭಿಯಾನದಲ್ಲಿ ಬಿಂಬಿಸಲಾಗುವುದು. ರೈತರು, ಸಾರ್ವಜನಿಕರಿಂದ ಸಹಿ ಸಂಗ್ರಹಿಸಲಾಗುವುದು ಎಂದು ಹೇಳಿದರು.</p>.<p>ಮುಖಂಡ, ಶರಣಪ್ರಕಾಶ್ ಪಾಟೀಲ, ಶಾಸಕ ಅಜಯ್ ಸಿಂಗ್, ಶಾಸಕರಾದ ಖನೀಜ್ ಫಾತಿಮಾ, ಎಂಎಲ್ಸಿ ಚಂದ್ರಶೇಖರ್, ಡಿಸಿಸಿ ಅಧ್ಯಕ್ಷರಾದ ಜಗದೇವ, ಎಂಎಲ್ಸಿ ಅಭ್ಯರ್ಥಿ ಶರಣಪ್ಪ ಮಟ್ಟೂರು, ಗುತ್ತೇದಾರ, ಕೆ.ಬಿ.ಶಾಣಪ್ಪ, ತಿಪ್ಪಣ್ಣಪ್ಪ ಕಮಕನೂರು, ಶರಣಪ್ಪ ಮಾನೇಗಾರ್, ಸುಭಾಷ್ ರಾಠೋಡ್, ವಿಜಯಕುಮಾರ ಜಿ ರಾಮಕೃಷ್ಣ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>