ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಪಿಎಂಸಿ, ಕೃಷಿ ಕಾಯ್ದೆ ತಿದ್ದುಪಡಿ ವಿರುದ್ಧ ಅ.10ರಿಂದ ಕಾಂಗ್ರೆಸ್ ಅಭಿಯಾನ

Last Updated 7 ಅಕ್ಟೋಬರ್ 2020, 8:13 IST
ಅಕ್ಷರ ಗಾತ್ರ

ಕಲಬುರ್ಗಿ: ಕೇಂದ್ರ ಸರ್ಕಾರವು ಎಪಿಎಂಸಿ, ಕೃಷಿ ಕಾಯ್ದೆಗಳಿಗೆ ತಿದ್ದುಪಡಿ ತರುವ ಮೂಲಕ ರೈತ ವಿರೋಧಿ ನೀತಿ ಅನುಸರಿಸುತ್ತಿದೆ. ಈ ಕ್ರಮದ ವಿರುದ್ಧ ಕಾಂಗ್ರೆಸ್ ದೇಶದಾದ್ಯಂತ ಸಹಿ ಅಭಿಯಾನ ಕೈಗೊಳ್ಳಲಿದೆ ಎಂದು ಶಾಸಕ ಪ್ರಿಯಾಂಕ್ ಖರ್ಗೆ ತಿಳಿಸಿದರು.

ಮಂಡ್ಯದಲ್ಲಿ ಅ.10ರಂದು ಅಭಿಯಾನಕ್ಕೆ ಚಾಲನೆ ನೀಡಲಾಗುವುದು. ಕಾಂಗ್ರೆಸ್ ನಾಯಕರಾದ ರಣದೀಪ್ ಸಿಂಗ್ ಸುರ್ಜೆವಾಲಾ, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಮುಂತಾದವರು ಭಾಗವಹಿಸುವರು ಎಂದು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಅಭಿಯಾನದ ಭಾಗವಾಗಿ ದೇಶದಾದ್ಯಂತ ಸಂಚರಿಸಿ 10 ಕೋಟಿಗೂ ಹೆಚ್ಚು ಸಹಿ ಸಂಗ್ರಹಿಸಲಾಗುವುದು. ನವೆಂಬರ್ 14ರಂದು ರಾಷ್ಟ್ರಪತಿ ಅವರನ್ನು ಭೇಟಿ ಮಾಡಲಾಗುವುದು‌. ತಿದ್ದುಪಡಿಯನ್ನು ಹಿಂಪಡೆಯುವಂತೆ ಒತ್ತಾಯಿಸಲಾಗುವುದು ಎಂದು ಅವರು ವಿವರಿಸಿದರು.

ಕಾಯ್ದೆ ತಿದ್ದುಪಡಿಯಿಂದ ರೈತರಿಗೆ ಅಲ್ಲದೇ ಕೃಷಿ ಕ್ಷೇತ್ರದ ಮೇಲೆಯೂ ದುಷ್ಪರಿಣಾಮ ಬೀರಲಿದೆ. ಎಪಿಎಂಸಿ ವ್ಯವಸ್ಥೆಗೆ ಧಕ್ಕೆಯಾಗಲಿದೆ. ರೈತರ ಪರಿಸ್ಥಿತಿ ಗಂಭೀರವಾಗಲಿದೆ. ಈ ಎಲ್ಲಾ ಅಂಶಗಳನ್ನು ಅಭಿಯಾನದಲ್ಲಿ ಬಿಂಬಿಸಲಾಗುವುದು. ರೈತರು, ಸಾರ್ವಜನಿಕರಿಂದ ಸಹಿ ಸಂಗ್ರಹಿಸಲಾಗುವುದು ಎಂದು ಹೇಳಿದರು.

ಮುಖಂಡ, ಶರಣಪ್ರಕಾಶ್ ಪಾಟೀಲ, ಶಾಸಕ ಅಜಯ್ ಸಿಂಗ್, ಶಾಸಕರಾದ ಖನೀಜ್ ಫಾತಿಮಾ, ಎಂಎಲ್‌ಸಿ‌ ಚಂದ್ರಶೇಖರ್,‌ ಡಿಸಿಸಿ ಅಧ್ಯಕ್ಷರಾದ ಜಗದೇವ, ಎಂಎಲ್‌ಸಿ ಅಭ್ಯರ್ಥಿ ಶರಣಪ್ಪ ಮಟ್ಟೂರು, ಗುತ್ತೇದಾರ, ಕೆ.ಬಿ.ಶಾಣಪ್ಪ, ತಿಪ್ಪಣ್ಣಪ್ಪ‌ ಕಮಕನೂರು, ಶರಣಪ್ಪ ಮಾನೇಗಾರ್, ಸುಭಾಷ್ ರಾಠೋಡ್, ವಿಜಯಕುಮಾರ ಜಿ ರಾಮಕೃಷ್ಣ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT