<p><strong>ಕಲಬುರ್ಗಿ: </strong>ಹಿರಿಯ ಕಾಂಗ್ರೆಸ್ ಮುಖಂಡ, ಕೇಂದ್ರದ ಮಾಜಿ ಸಚಿವ ಎಂ. ಮಲ್ಲಿಕಾರ್ಜುನ ಖರ್ಗೆ ಅವರು ರಾಜ್ಯಸಭೆ ವಿರೋಧ ಪಕ್ಷದ ನಾಯಕರಾಗಿ ಆಯ್ಕೆಯಾದ ಪ್ರಯುಕ್ತ ತವರು ಜಿಲ್ಲೆ ಕಲಬುರ್ಗಿಯಲ್ಲಿ ಹರ್ಷ ಮನೆ ಮಾಡಿದೆ.</p>.<p>1972ರಲ್ಲಿ ಅಂದಿನ ಅವಿಭಜಿತ ಕಲಬುರ್ಗಿ ಜಿಲ್ಲೆಯ ಗುರುಮಠಕಲ್ (ಇಂದು ಯಾದಗಿರಿ ಜಿಲ್ಲೆ) ವಿಧಾನಸಭಾ ಕ್ಷೇತ್ರದಿಂದ ಚುನಾಯಿತರಾದ ಖರ್ಗೆ ಅವರು ಹಿಂತಿರುಗಿ ನೋಡಲೇ ಇಲ್ಲ. ಸತತ ಒಂಬತ್ತು ಬಾರಿ ವಿಧಾನಸಭಾ ಸದಸ್ಯರಾಗಿ ಆಯ್ಕೆಯಾದರು.</p>.<p>ದೇವರಾಜ ಅರಸು, ಎಂ. ವೀರಪ್ಪ ಮೊಯಿಲಿ, ಎಸ್.ಎಂ.ಕೃಷ್ಣ, ಎಸ್. ಬಂಗಾರಪ್ಪ, ಎನ್. ಧರ್ಮಸಿಂಗ್ ಸಂಪುಟದಲ್ಲಿ ಗೃಹ, ಕಂದಾಯ, ಸಮಾಜ ಕಲ್ಯಾಣ, ಸಾರಿಗೆ, ಶಿಕ್ಷಣ, ಸಣ್ಣ ನೀರಾವರಿ ಸೇರಿದಂತೆ ವಿವಿಧ ಖಾತೆಗಳನ್ನು ನಿರ್ವಹಿಸಿದ ಅನುಭವಿ.</p>.<p>ಕೆಪಿಸಿಸಿ ಅಧ್ಯಕ್ಷರಾಗಿ, ಎಐಸಿಸಿ ಪ್ರಧಾನ ಕಾರ್ಯದರ್ಶಿಯಾಗಿ, ಮಹಾರಾಷ್ಟ್ರ ಪಕ್ಷದ ಉಸ್ತುವಾರಿಯಾಗಿ ಕೆಲಸ ಮಾಡಿರುವ ಖರ್ಗೆ ಅವರು ಗುಲಬರ್ಗಾ ಕ್ಷೇತ್ರದಿಂದ ಎರಡು ಬಾರಿ ಸಂಸದರಾಗಿ ಆಯ್ಕೆಯಾಗಿದ್ದರು.</p>.<p>ಡಾ. ಮನಮೋಹನ್ ಸಿಂಗ್ ಸಂಪುಟದಲ್ಲಿ ಕಾರ್ಮಿಕ ಹಾಗೂ ನಂತರ ರೈಲ್ವೆ ಸಚಿವರಾಗಿ ಕಾರ್ಯನಿರ್ವಹಿಸಿದ್ದರು.</p>.<p>ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಎನ್ ಡಿಎ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಲೋಕಸಭೆಯಲ್ಲಿ ಕಾಂಗ್ರೆಸ್ ಪಕ್ಷದ ನಾಯಕರಾಗಿದ್ದರು.</p>.<p>ಕಳೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ಡಾ. ಉಮೇಶ ಜಾಧವ ಅವರ ಎದುರು ಪರಾಭವಗೊಂಡರು. ನಂತರ ಕಾಂಗ್ರೆಸ್ ಹೈಕಮಾಂಡ್ ಅವರ ಪಕ್ಷ ನಿಷ್ಠೆಯನ್ನು ಗುರುತಿಸಿ ರಾಜ್ಯಸಭೆಗೆ ಆಯ್ಕೆ ಮಾಡಿತ್ತು.</p>.<p>ಖರ್ಗೆ ಅವರು ಮೂಲತಃ ಬೀದರ್ ಜಿಲ್ಲೆ ವರವಟ್ಟಿ ಗ್ರಾಮದವರು. ಅವರ ತಂದೆ ಕಲಬುರ್ಗಿಯ ಎಂಎಸ್ ಕೆ ಮಿಲ್ ನಲ್ಲಿ ಕಾರ್ಮಿಕರಾಗಿದ್ದರಿಂದ ಕಲಬುರ್ಗಿಯಲ್ಲೇ ಉಳಿದರು.</p>.<p>ಇದನ್ನೂ ಓದಿ:<a href="https://www.prajavani.net/india-news/mallikarjun-kharge-to-replace-ghulam-nabi-azad-as-leader-of-opposition-congress-to-inform-rajya-804565.html" itemprop="url">ರಾಜ್ಯಸಭೆ ವಿರೋಧ ಪಕ್ಷದ ನಾಯಕರಾಗಿ ಮಲ್ಲಿಕಾರ್ಜುನ ಖರ್ಗೆ ನೇಮಕ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರ್ಗಿ: </strong>ಹಿರಿಯ ಕಾಂಗ್ರೆಸ್ ಮುಖಂಡ, ಕೇಂದ್ರದ ಮಾಜಿ ಸಚಿವ ಎಂ. ಮಲ್ಲಿಕಾರ್ಜುನ ಖರ್ಗೆ ಅವರು ರಾಜ್ಯಸಭೆ ವಿರೋಧ ಪಕ್ಷದ ನಾಯಕರಾಗಿ ಆಯ್ಕೆಯಾದ ಪ್ರಯುಕ್ತ ತವರು ಜಿಲ್ಲೆ ಕಲಬುರ್ಗಿಯಲ್ಲಿ ಹರ್ಷ ಮನೆ ಮಾಡಿದೆ.</p>.<p>1972ರಲ್ಲಿ ಅಂದಿನ ಅವಿಭಜಿತ ಕಲಬುರ್ಗಿ ಜಿಲ್ಲೆಯ ಗುರುಮಠಕಲ್ (ಇಂದು ಯಾದಗಿರಿ ಜಿಲ್ಲೆ) ವಿಧಾನಸಭಾ ಕ್ಷೇತ್ರದಿಂದ ಚುನಾಯಿತರಾದ ಖರ್ಗೆ ಅವರು ಹಿಂತಿರುಗಿ ನೋಡಲೇ ಇಲ್ಲ. ಸತತ ಒಂಬತ್ತು ಬಾರಿ ವಿಧಾನಸಭಾ ಸದಸ್ಯರಾಗಿ ಆಯ್ಕೆಯಾದರು.</p>.<p>ದೇವರಾಜ ಅರಸು, ಎಂ. ವೀರಪ್ಪ ಮೊಯಿಲಿ, ಎಸ್.ಎಂ.ಕೃಷ್ಣ, ಎಸ್. ಬಂಗಾರಪ್ಪ, ಎನ್. ಧರ್ಮಸಿಂಗ್ ಸಂಪುಟದಲ್ಲಿ ಗೃಹ, ಕಂದಾಯ, ಸಮಾಜ ಕಲ್ಯಾಣ, ಸಾರಿಗೆ, ಶಿಕ್ಷಣ, ಸಣ್ಣ ನೀರಾವರಿ ಸೇರಿದಂತೆ ವಿವಿಧ ಖಾತೆಗಳನ್ನು ನಿರ್ವಹಿಸಿದ ಅನುಭವಿ.</p>.<p>ಕೆಪಿಸಿಸಿ ಅಧ್ಯಕ್ಷರಾಗಿ, ಎಐಸಿಸಿ ಪ್ರಧಾನ ಕಾರ್ಯದರ್ಶಿಯಾಗಿ, ಮಹಾರಾಷ್ಟ್ರ ಪಕ್ಷದ ಉಸ್ತುವಾರಿಯಾಗಿ ಕೆಲಸ ಮಾಡಿರುವ ಖರ್ಗೆ ಅವರು ಗುಲಬರ್ಗಾ ಕ್ಷೇತ್ರದಿಂದ ಎರಡು ಬಾರಿ ಸಂಸದರಾಗಿ ಆಯ್ಕೆಯಾಗಿದ್ದರು.</p>.<p>ಡಾ. ಮನಮೋಹನ್ ಸಿಂಗ್ ಸಂಪುಟದಲ್ಲಿ ಕಾರ್ಮಿಕ ಹಾಗೂ ನಂತರ ರೈಲ್ವೆ ಸಚಿವರಾಗಿ ಕಾರ್ಯನಿರ್ವಹಿಸಿದ್ದರು.</p>.<p>ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಎನ್ ಡಿಎ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಲೋಕಸಭೆಯಲ್ಲಿ ಕಾಂಗ್ರೆಸ್ ಪಕ್ಷದ ನಾಯಕರಾಗಿದ್ದರು.</p>.<p>ಕಳೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ಡಾ. ಉಮೇಶ ಜಾಧವ ಅವರ ಎದುರು ಪರಾಭವಗೊಂಡರು. ನಂತರ ಕಾಂಗ್ರೆಸ್ ಹೈಕಮಾಂಡ್ ಅವರ ಪಕ್ಷ ನಿಷ್ಠೆಯನ್ನು ಗುರುತಿಸಿ ರಾಜ್ಯಸಭೆಗೆ ಆಯ್ಕೆ ಮಾಡಿತ್ತು.</p>.<p>ಖರ್ಗೆ ಅವರು ಮೂಲತಃ ಬೀದರ್ ಜಿಲ್ಲೆ ವರವಟ್ಟಿ ಗ್ರಾಮದವರು. ಅವರ ತಂದೆ ಕಲಬುರ್ಗಿಯ ಎಂಎಸ್ ಕೆ ಮಿಲ್ ನಲ್ಲಿ ಕಾರ್ಮಿಕರಾಗಿದ್ದರಿಂದ ಕಲಬುರ್ಗಿಯಲ್ಲೇ ಉಳಿದರು.</p>.<p>ಇದನ್ನೂ ಓದಿ:<a href="https://www.prajavani.net/india-news/mallikarjun-kharge-to-replace-ghulam-nabi-azad-as-leader-of-opposition-congress-to-inform-rajya-804565.html" itemprop="url">ರಾಜ್ಯಸಭೆ ವಿರೋಧ ಪಕ್ಷದ ನಾಯಕರಾಗಿ ಮಲ್ಲಿಕಾರ್ಜುನ ಖರ್ಗೆ ನೇಮಕ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>