ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಕೈಗೊಂಬೆಯಾಗಿ ಕೆಲಸ ಮಾಡುತ್ತಿದೆ. ಇದಕ್ಕೆ ತಾರ್ಕಿಕ ಅಂತ್ಯ ಕಾಣಿಸುತ್ತೇವೆ. ಚುನಾವಣಾ ಆಯುಕ್ತರು, ಗೃಹಸಚಿವರಿಗೆ ಈ ಸಂಬಂಧ ಪಕ್ಷದಿಂದ ದೂರು ನೀಡುತ್ತೇವೆ. ಶುಕ್ರವಾರ ಚುನಾವಣೆ ಇದ್ದುದರಿಂದ ನಾವು ಪ್ರತಿಭಟನೆ ಮಾಡುತ್ತಿಲ್ಲ. ಸುಸೂತ್ರವಾಗಿ ಚುನಾವಣೆ ನಡೆಸುವುದಕ್ಕೆ ನಮ್ಮ ಸಹಕಾರ ಇರಲಿದೆ ಎಂದರು.