<p><strong>ಕಲಬುರ್ಗಿ:</strong> ಬುಧವಾರ ತಡರಾತ್ರಿ ನಗರದ ಹಫ್ತ್ ಗುಂಬಜ್ ಬಳಿ ಪೊಲೀಸ್ ಕಮಿಷನರ್ ಡಾ.ವೈ.ಎಸ್. ರವಿಕುಮಾರ್ ತಮಗೆ ಮನಬಂದಂತೆ ಥಳಿಸಿದ್ದಾರೆ ಎಂದು ಕಾಂಗ್ರೆಸ್ ಶಾಸಕಿ ಖನೀಜ್ ಫಾತಿಮಾ ಅವರ ಅಳಿಯ ಆದಿಲ್ ಸುಲೇಮಾನ್ ಶೇಖ್ ಆರೋಪಿಸಿದರು.</p>.<p>ನಗರದ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾತ್ರಿ ನಮ್ಮ ಅತ್ತೆ ಖನೀಜ್ ಫಾತಿಮಾ ಅವರನ್ನು ಮನೆಗೆ ಬಿಟ್ಟು ವಾಪಸ್ ಬರುವಾಗ ಕಾರು ತಡೆದ ಕಮಿಷನರ್ ಅವರು ಮನಬಂದಂತೆ ಥಳಿಸಿದರು.</p>.<p>ಮೊದಲಿಗೆ ಪೊಲೀಸ್ ಸಿಬ್ಬಂದಿಗೆ ನನಗೆ ಹೊಡೆದು ಕಾಲು ಮುರಿಯುವಂತೆ ಹೇಳಿದರು. ಅವರು ಹೊಡೆಯಲು ಹಿಂದೆ ಮುಂದೆ ನೋಡಿದಾಗ ಅವರೇ ಪೊಲೀಸರಿಗೂ ಥಳಿಸಿದರು ಎಂದರು.</p>.<p>ಶಾಸಕಿ ಖನೀಜ್ ಫಾತಿಮಾ ಮಾತನಾಡಿ, ಬಿಜೆಪಿಯವರು ಚುನಾವಣೆಯಲ್ಲಿ ಸೋಲುವ ಭಯದಿಂದ ಹೀಗೆ ಪೊಲೀಸರ ಮೇಲೆ ಒತ್ತಡ ಹೇರಿದ್ದಾರೆ. ಯಾವುದೇ ತಪ್ಪು ಮಾಡದಿದ್ದರೂ ಹೀಗೆ ಥಳಿಸಿದ್ದು ಖಂಡನೀಯ ಎಂದು ಹೇಳಿದರು.</p>.<p>ಮಾಜಿ ಸಚಿವ ಡಾ.ಶರಣಪ್ರಕಾಶ ಪಾಟೀಲ ಮಾತನಾಡಿ, ಯಾವುದೇ ವ್ಯಕ್ತಿಗೆ ಹಲ್ಲೆ ಮಾಡುವ ಅಧಿಕಾರ ಪೊಲೀಸರಿಗೆ ಇಲ್ಲ. ಒಂದೊಮ್ಮೆ ನಿಯಮ ಉಲ್ಲಂಘಿಸಿದ್ದರೆ ಪ್ರಕರಣ ದಾಖಲಿಸಬೇಕಿತ್ತು. ಬಿಜೆಪಿ ಶಾಸಕರು ಪಾಲಿಕೆ ಚುನಾವಣೆಯಲ್ಲಿ ತಮ್ಮ ಪಕ್ಷ ಸೋಲುವ ಭಯದಿಂದ ಹೀಗೆ ಮಾಡಿಸಿದ್ದಾರೆ.</p>.<p>ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಕೈಗೊಂಬೆಯಾಗಿ ಕೆಲಸ ಮಾಡುತ್ತಿದೆ. ಇದಕ್ಕೆ ತಾರ್ಕಿಕ ಅಂತ್ಯ ಕಾಣಿಸುತ್ತೇವೆ. ಚುನಾವಣಾ ಆಯುಕ್ತರು, ಗೃಹಸಚಿವರಿಗೆ ಈ ಸಂಬಂಧ ಪಕ್ಷದಿಂದ ದೂರು ನೀಡುತ್ತೇವೆ. ಶುಕ್ರವಾರ ಚುನಾವಣೆ ಇದ್ದುದರಿಂದ ನಾವು ಪ್ರತಿಭಟನೆ ಮಾಡುತ್ತಿಲ್ಲ. ಸುಸೂತ್ರವಾಗಿ ಚುನಾವಣೆ ನಡೆಸುವುದಕ್ಕೆ ನಮ್ಮ ಸಹಕಾರ ಇರಲಿದೆ ಎಂದರು.</p>.<p><a href="https://www.prajavani.net/district/chikkamagaluru/hd-devegowda-should-try-to-convince-g-t-devegowda-says-ysv-datta-863056.html" itemprop="url">ಜಿ.ಟಿ.ದೇವೇಗೌಡ ಜೆಡಿಎಸ್ ತೊರೆಯಲು ಬಿಡಬಾರದು: ವೈಎಸ್ವಿ ದತ್ತ </a></p>.<p><strong>ಆರೋಪ ನಿರಾಕರಣೆ: </strong>ಹಲ್ಲೆ ನಡೆಸಿದ ಕುರಿತು ತಮ್ಮ ವಿರುದ್ಧ ಮಾಡಲಾದ ಆರೋಪವನ್ನು ಪೊಲೀಸ್ ಕಮಿಷನರ್ ರವಿಕುಮಾರ್ ತಳ್ಳಿ ಹಾಕಿದ್ದಾರೆ.</p>.<p>ನಾನು ರಾತ್ರಿ ಹೋಗಿಲ್ಲ. ರಾತ್ರಿ ಕರ್ಫ್ಯೂ ಇದ್ದುದರಿಂದ ಪೊಲೀಸರು ಅವರಿಗೆ ಎಚ್ಚರಿಕೆ ನೀಡಿ ಕಳಿಸಿರಬಹುದು. ಚುನಾವಣೆ ಬಹಿರಂಗ ಪ್ರಚಾರ ಮುಕ್ತಾಯವಾಗಿದ್ದರಿಂದ ಯಾರೂ ರಾತ್ರಿ ಸಂಚರಿಸಲು ಅವಕಾಶವಿಲ್ಲ ಎಂದು ಮಾಧ್ಯಮಗಳಿಗೆ ಸ್ಪಷ್ಟಪಡಿಸಿದರು.</p>.<p><a href="https://www.prajavani.net/district/bengaluru-city/kerala-man-covid-test-fake-report-and-fake-visa-card-generator-arrested-by-hulimavu-police-863162.html" itemprop="url">ಕೋವಿಡ್ ಪರೀಕ್ಷೆ ನಕಲಿ ವರದಿ, ನಕಲಿ ವೀಸಾ ಸೃಷ್ಟಿ: ಆರೋಪಿ ಬಂಧನ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರ್ಗಿ:</strong> ಬುಧವಾರ ತಡರಾತ್ರಿ ನಗರದ ಹಫ್ತ್ ಗುಂಬಜ್ ಬಳಿ ಪೊಲೀಸ್ ಕಮಿಷನರ್ ಡಾ.ವೈ.ಎಸ್. ರವಿಕುಮಾರ್ ತಮಗೆ ಮನಬಂದಂತೆ ಥಳಿಸಿದ್ದಾರೆ ಎಂದು ಕಾಂಗ್ರೆಸ್ ಶಾಸಕಿ ಖನೀಜ್ ಫಾತಿಮಾ ಅವರ ಅಳಿಯ ಆದಿಲ್ ಸುಲೇಮಾನ್ ಶೇಖ್ ಆರೋಪಿಸಿದರು.</p>.<p>ನಗರದ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾತ್ರಿ ನಮ್ಮ ಅತ್ತೆ ಖನೀಜ್ ಫಾತಿಮಾ ಅವರನ್ನು ಮನೆಗೆ ಬಿಟ್ಟು ವಾಪಸ್ ಬರುವಾಗ ಕಾರು ತಡೆದ ಕಮಿಷನರ್ ಅವರು ಮನಬಂದಂತೆ ಥಳಿಸಿದರು.</p>.<p>ಮೊದಲಿಗೆ ಪೊಲೀಸ್ ಸಿಬ್ಬಂದಿಗೆ ನನಗೆ ಹೊಡೆದು ಕಾಲು ಮುರಿಯುವಂತೆ ಹೇಳಿದರು. ಅವರು ಹೊಡೆಯಲು ಹಿಂದೆ ಮುಂದೆ ನೋಡಿದಾಗ ಅವರೇ ಪೊಲೀಸರಿಗೂ ಥಳಿಸಿದರು ಎಂದರು.</p>.<p>ಶಾಸಕಿ ಖನೀಜ್ ಫಾತಿಮಾ ಮಾತನಾಡಿ, ಬಿಜೆಪಿಯವರು ಚುನಾವಣೆಯಲ್ಲಿ ಸೋಲುವ ಭಯದಿಂದ ಹೀಗೆ ಪೊಲೀಸರ ಮೇಲೆ ಒತ್ತಡ ಹೇರಿದ್ದಾರೆ. ಯಾವುದೇ ತಪ್ಪು ಮಾಡದಿದ್ದರೂ ಹೀಗೆ ಥಳಿಸಿದ್ದು ಖಂಡನೀಯ ಎಂದು ಹೇಳಿದರು.</p>.<p>ಮಾಜಿ ಸಚಿವ ಡಾ.ಶರಣಪ್ರಕಾಶ ಪಾಟೀಲ ಮಾತನಾಡಿ, ಯಾವುದೇ ವ್ಯಕ್ತಿಗೆ ಹಲ್ಲೆ ಮಾಡುವ ಅಧಿಕಾರ ಪೊಲೀಸರಿಗೆ ಇಲ್ಲ. ಒಂದೊಮ್ಮೆ ನಿಯಮ ಉಲ್ಲಂಘಿಸಿದ್ದರೆ ಪ್ರಕರಣ ದಾಖಲಿಸಬೇಕಿತ್ತು. ಬಿಜೆಪಿ ಶಾಸಕರು ಪಾಲಿಕೆ ಚುನಾವಣೆಯಲ್ಲಿ ತಮ್ಮ ಪಕ್ಷ ಸೋಲುವ ಭಯದಿಂದ ಹೀಗೆ ಮಾಡಿಸಿದ್ದಾರೆ.</p>.<p>ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಕೈಗೊಂಬೆಯಾಗಿ ಕೆಲಸ ಮಾಡುತ್ತಿದೆ. ಇದಕ್ಕೆ ತಾರ್ಕಿಕ ಅಂತ್ಯ ಕಾಣಿಸುತ್ತೇವೆ. ಚುನಾವಣಾ ಆಯುಕ್ತರು, ಗೃಹಸಚಿವರಿಗೆ ಈ ಸಂಬಂಧ ಪಕ್ಷದಿಂದ ದೂರು ನೀಡುತ್ತೇವೆ. ಶುಕ್ರವಾರ ಚುನಾವಣೆ ಇದ್ದುದರಿಂದ ನಾವು ಪ್ರತಿಭಟನೆ ಮಾಡುತ್ತಿಲ್ಲ. ಸುಸೂತ್ರವಾಗಿ ಚುನಾವಣೆ ನಡೆಸುವುದಕ್ಕೆ ನಮ್ಮ ಸಹಕಾರ ಇರಲಿದೆ ಎಂದರು.</p>.<p><a href="https://www.prajavani.net/district/chikkamagaluru/hd-devegowda-should-try-to-convince-g-t-devegowda-says-ysv-datta-863056.html" itemprop="url">ಜಿ.ಟಿ.ದೇವೇಗೌಡ ಜೆಡಿಎಸ್ ತೊರೆಯಲು ಬಿಡಬಾರದು: ವೈಎಸ್ವಿ ದತ್ತ </a></p>.<p><strong>ಆರೋಪ ನಿರಾಕರಣೆ: </strong>ಹಲ್ಲೆ ನಡೆಸಿದ ಕುರಿತು ತಮ್ಮ ವಿರುದ್ಧ ಮಾಡಲಾದ ಆರೋಪವನ್ನು ಪೊಲೀಸ್ ಕಮಿಷನರ್ ರವಿಕುಮಾರ್ ತಳ್ಳಿ ಹಾಕಿದ್ದಾರೆ.</p>.<p>ನಾನು ರಾತ್ರಿ ಹೋಗಿಲ್ಲ. ರಾತ್ರಿ ಕರ್ಫ್ಯೂ ಇದ್ದುದರಿಂದ ಪೊಲೀಸರು ಅವರಿಗೆ ಎಚ್ಚರಿಕೆ ನೀಡಿ ಕಳಿಸಿರಬಹುದು. ಚುನಾವಣೆ ಬಹಿರಂಗ ಪ್ರಚಾರ ಮುಕ್ತಾಯವಾಗಿದ್ದರಿಂದ ಯಾರೂ ರಾತ್ರಿ ಸಂಚರಿಸಲು ಅವಕಾಶವಿಲ್ಲ ಎಂದು ಮಾಧ್ಯಮಗಳಿಗೆ ಸ್ಪಷ್ಟಪಡಿಸಿದರು.</p>.<p><a href="https://www.prajavani.net/district/bengaluru-city/kerala-man-covid-test-fake-report-and-fake-visa-card-generator-arrested-by-hulimavu-police-863162.html" itemprop="url">ಕೋವಿಡ್ ಪರೀಕ್ಷೆ ನಕಲಿ ವರದಿ, ನಕಲಿ ವೀಸಾ ಸೃಷ್ಟಿ: ಆರೋಪಿ ಬಂಧನ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>