‘ಕೋವಿಡ್–19 ನೆಪ ಹೇಳಿ ಕಲ್ಯಾಣ ಕರ್ನಾಟಕ ಭಾಗದ ನೇಮಕಾತಿ ತಡೆ ಹಿಡಿಯುವುದು ಯಾವ ನ್ಯಾಯ? ಒಂದು ವೇಳೆ ಇವರಿಗೆ ಕೋವಿಡ್ ಬಗ್ಗೆ ಕಾಳಜಿ ಇದ್ದರೆ, ಇವರಿಗೆ ಕಲ್ಯಾಣ ಕರ್ನಾಟಕ ಭಾಗವಷ್ಟೇ ಕಾಣಿಸುವುದೇ? ಕರ್ನಾಟಕದ ಎಲ್ಲ ಕಡೆ ನೇಮಕಾತಿ ಮಾಡಿಕೊಳ್ಳಲು ಅವಕಾಶ ಕಲ್ಪಿಸಿ, ಹಿಂದುಳಿದ ಕಲ್ಯಾಣ ಕರ್ನಾಟಕದಲ್ಲಿ ತಡೆ ಹಿಡಿದಿರುವುದು ಬಿಜೆಪಿ ಸರ್ಕಾರದ ಘೋರ ಅನ್ಯಾಯ’ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.