<p class="Briefhead">ಆಳಂದ: ’ಶುಕ್ರವಾರ ನಡೆದ ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಯು ಅಸಮರ್ಪಕವಾಗಿದೆ. ಜಿಲ್ಲಾಧಿಕಾರಿಗಳು ನ್ಯಾಯಸಮ್ಮತವಾಗಿ ಮತ್ತೆ ಮರು ಚುನಾವಣೆ ಕೈಗೊಳ್ಳಬೇಕು‘ ಎಂದು ಒತ್ತಾಯಿಸಿ ಪುರಸಭೆಯ ಕಾಂಗ್ರೆಸ್ ಸದಸ್ಯರು ಒತ್ತಾಯಿಸಿದರು.</p>.<p class="Briefhead">ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆಯ ಪ್ರಕ್ರಿಯೆಯು ನ್ಯಾಯಸಮ್ಮತವಾಗಿ ನಡೆಯುತ್ತಿಲ್ಲ ಎಂದು ಆಪಾದಿಸಿ ಕಾಂಗ್ರೆಸ್ನ 12 ಸದಸ್ಯರು ಸಭೆ ಬಹಿಷ್ಕರಿಸಿ ಹೊರಬಂದರು. ನಂತರ ಪುರಸಭೆ ಮುಖ್ಯಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿ ಚುನಾವಣಾಧಿಕಾರಿಗಳಿಗೆ, ಬಿಜೆಪಿ ಮುಖಂಡರಿಗೆ ಧಿಕ್ಕಾರ ಕೂಗಿದರು.</p>.<p class="Briefhead">ಸದಸ್ಯರಾದ ಫಿರ್ದೋಶ್ ಅನ್ಸಾರಿ, ಲಕ್ಷ್ಮಣ, ಶಿವಪುತ್ರ ನಡಗೇರಿ ಮಾತನಾಡಿ, ’ಮತ ಹಾಕಲು ಸಭೆಯಲ್ಲಿದ್ದ ಸದಸ್ಯರಿಗೆ ಬೆದರಿಕೆ ಹಾಕಿ ಕೈ ಎತ್ತಲು ಸೂಚನೆ ನೀಡಲಾಗುತ್ತಿದೆ. ಕೆಲ ಸದಸ್ಯರು ಕೈ ಎತ್ತದ ಕಾರಣ ಒತ್ತಾಯ ಪೂರ್ವಕ ಕೈ ಎತ್ತಿಸಲಾಗಿದೆ‘ ಎಂದು ಆರೋಪಿಸಿದರು.</p>.<p class="Briefhead">ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ ಕವಿತಾ ನಾಯಕ ಮಾತನಾಡಿ, ’ಚುನಾವಣೆ ಕಾಲಕ್ಕೆ ಕಾಂಗ್ರೆಸ್ ಸದಸ್ಯರ ಮೊಬೈಲ್ ಮಾತ್ರ ವಶಕ್ಕೆ ಪಡೆದಿದ್ದಾರೆ. ಎಲ್ಲ ಸದಸ್ಯರಿಗೂ ಚುನಾವಣೆ ನಿಯಮದ ಕುರಿತು ಸಮರ್ಪಕ ಮಾಹಿತಿ ನೀಡಿಲ್ಲ‘ ಎಂದು ಆಪಾದಿಸಿದರು.</p>.<p class="Briefhead">ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಆಳಂದ ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡುವದಲ್ಲದೇ, ಕಾನೂನು ಹೋರಾಟ ನಡೆಸುವುದಾಗಿ ತಿಳಿಸಿದರು.</p>.<p>ಜಿಲ್ಲಾ ಪಂಚಾಯಿತಿ ಸದಸ್ಯ ಸಿದ್ದರಾಮ ಪ್ಯಾಟಿ, ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಶರಣಬಸಪ್ಪ ವಾಗೆ, ಮುಖಂಡರಾದ ಹಮೀದ್ ಅನ್ಸಾರಿ, ಸಂಜಯ ನಾಯಕ, ಸುಭಾಷ ಪೌಜಿ, ಲಿಂಗರಾಜ ಜಾನೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="Briefhead">ಆಳಂದ: ’ಶುಕ್ರವಾರ ನಡೆದ ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಯು ಅಸಮರ್ಪಕವಾಗಿದೆ. ಜಿಲ್ಲಾಧಿಕಾರಿಗಳು ನ್ಯಾಯಸಮ್ಮತವಾಗಿ ಮತ್ತೆ ಮರು ಚುನಾವಣೆ ಕೈಗೊಳ್ಳಬೇಕು‘ ಎಂದು ಒತ್ತಾಯಿಸಿ ಪುರಸಭೆಯ ಕಾಂಗ್ರೆಸ್ ಸದಸ್ಯರು ಒತ್ತಾಯಿಸಿದರು.</p>.<p class="Briefhead">ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆಯ ಪ್ರಕ್ರಿಯೆಯು ನ್ಯಾಯಸಮ್ಮತವಾಗಿ ನಡೆಯುತ್ತಿಲ್ಲ ಎಂದು ಆಪಾದಿಸಿ ಕಾಂಗ್ರೆಸ್ನ 12 ಸದಸ್ಯರು ಸಭೆ ಬಹಿಷ್ಕರಿಸಿ ಹೊರಬಂದರು. ನಂತರ ಪುರಸಭೆ ಮುಖ್ಯಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿ ಚುನಾವಣಾಧಿಕಾರಿಗಳಿಗೆ, ಬಿಜೆಪಿ ಮುಖಂಡರಿಗೆ ಧಿಕ್ಕಾರ ಕೂಗಿದರು.</p>.<p class="Briefhead">ಸದಸ್ಯರಾದ ಫಿರ್ದೋಶ್ ಅನ್ಸಾರಿ, ಲಕ್ಷ್ಮಣ, ಶಿವಪುತ್ರ ನಡಗೇರಿ ಮಾತನಾಡಿ, ’ಮತ ಹಾಕಲು ಸಭೆಯಲ್ಲಿದ್ದ ಸದಸ್ಯರಿಗೆ ಬೆದರಿಕೆ ಹಾಕಿ ಕೈ ಎತ್ತಲು ಸೂಚನೆ ನೀಡಲಾಗುತ್ತಿದೆ. ಕೆಲ ಸದಸ್ಯರು ಕೈ ಎತ್ತದ ಕಾರಣ ಒತ್ತಾಯ ಪೂರ್ವಕ ಕೈ ಎತ್ತಿಸಲಾಗಿದೆ‘ ಎಂದು ಆರೋಪಿಸಿದರು.</p>.<p class="Briefhead">ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ ಕವಿತಾ ನಾಯಕ ಮಾತನಾಡಿ, ’ಚುನಾವಣೆ ಕಾಲಕ್ಕೆ ಕಾಂಗ್ರೆಸ್ ಸದಸ್ಯರ ಮೊಬೈಲ್ ಮಾತ್ರ ವಶಕ್ಕೆ ಪಡೆದಿದ್ದಾರೆ. ಎಲ್ಲ ಸದಸ್ಯರಿಗೂ ಚುನಾವಣೆ ನಿಯಮದ ಕುರಿತು ಸಮರ್ಪಕ ಮಾಹಿತಿ ನೀಡಿಲ್ಲ‘ ಎಂದು ಆಪಾದಿಸಿದರು.</p>.<p class="Briefhead">ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಆಳಂದ ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡುವದಲ್ಲದೇ, ಕಾನೂನು ಹೋರಾಟ ನಡೆಸುವುದಾಗಿ ತಿಳಿಸಿದರು.</p>.<p>ಜಿಲ್ಲಾ ಪಂಚಾಯಿತಿ ಸದಸ್ಯ ಸಿದ್ದರಾಮ ಪ್ಯಾಟಿ, ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಶರಣಬಸಪ್ಪ ವಾಗೆ, ಮುಖಂಡರಾದ ಹಮೀದ್ ಅನ್ಸಾರಿ, ಸಂಜಯ ನಾಯಕ, ಸುಭಾಷ ಪೌಜಿ, ಲಿಂಗರಾಜ ಜಾನೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>