ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಅಧಿವೇಶನ ನಡೆಯುತ್ತಿರುವಾಗ ಖರ್ಗೆ ಅವರನ್ನು ಇಡಿ ವಿಚಾರಣೆಗೆ ಹಾಜರಾಗಬೇಕೆಂದು ಸಮನ್ಸ್ ನೀಡಿರುವದು ಅಕ್ಷಮ್ಯ. ಸಂವಿಧಾನಬದ್ಧ ಸಂಸ್ಥೆಗಳಾದ ಇಡಿ, ಸಿಬಿಐ, ಐಟಿ ಇವುಗಳನ್ನು ಬಿಜೆಪಿ ಸರ್ಕಾರ ಬಳಸಿಕೊಂಡು ಪ್ರತಿಪಕ್ಷಗಳ ನಿಯಂತ್ರಿಸಲು ಬಳಸುತ್ತಿರುವದು ಪ್ರಜಾಪ್ರಭುತ್ವದ ವಿರೋಧಿ ನೀತಿಗೆ ಕನ್ನಡಿಯಾಗಿದೆ. ಬಿಜೆಪಿ ಸರ್ಕಾರ ತನ್ನ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ವಿರೋಧ ಪಕ್ಷದ ಬಾಯಿ ಮುಚ್ಚಿಸಲು ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವುದು ಪ್ರಜಾಪ್ರಭುತ್ವದ ವಿರೋಧಿಯಾಗಿದೆ. ಭಾರತೀಯ ಪ್ರಜೆಗಳು ಪ್ರಜ್ಞಾವಂತರಾಗಿದ್ದು ಮುಂಬರುವ ಚುನಾವಣೆಯಲ್ಲಿ ಬಿಜೆಪಿಗೆ ತಕ್ಕ ಉತ್ತರ ನೀಡಲಿದ್ದಾರೆ’ ಎಂದಿದ್ದಾರೆ.