‘ಸಾಮಾನ್ಯ ಕಾರ್ಯಕರ್ತನನ್ನು ಗುರುತಿಸಿ ಕಾಂಗ್ರೆಸ್ ವರಿಷ್ಠರು ಟಿಕೆಟ್ ನೀಡಿದ್ದಾರೆ. ಗ್ರಾಮ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಹಾಗೂ ಸಹಕಾರಿ ಚಳವಳಿಯಲ್ಲಿ ಮೊದಲಿನಿಂದಲೂ ಗುರುತಿಸಿಕೊಂಡಿದ್ದೇನೆ. ಹೀಗಾಗಿ ಪರಿಷತ್ ಚುನಾವಣೆಯಲ್ಲಿ ಗೆಲ್ಲಲು ಪಕ್ಷದ ಮುಖಂಡರು, ಕಾರ್ಯಕರ್ತರ ಸಹಯೋಗದಲ್ಲಿ ಶ್ರಮಿಸುತ್ತೇನೆ’ ಎಂದು ಶಿವಾನಂದ ಪಾಟೀಲ ಪ್ರತಿಕ್ರಿಯಿಸಿದರು.