ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಮೊದಲು ಶಾಸಕ ಸ್ಥಾನದಿಂದ ಅನರ್ಹಗೊಳಿಸುವಂತೆ ವಿಧಾನಸಭೆ ಅಧ್ಯಕ್ಷರಿಗೆ ಪತ್ರ ಬರೆದರು. ರಾಜೀನಾಮೆ ಸಲ್ಲಿಸಿದ ಬಳಿಕ ಅಂಗೀಕಾರ ಮಾಡದಂತೆ ಒತ್ತಡ ಹೇರಿದರು. ಜಾಧವ ರಾಜೀನಾಮೆ ಅಂಗೀಕಾರವಾಗಲ್ಲ, ಅವರು ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಬರುವುದಿಲ್ಲ ಎಂದು ಹೇಳುವ ಮೂಲಕ ಕ್ಷೇತ್ರದ ಜನರಲ್ಲಿ ಗೊಂದಲ ಸೃಷ್ಟಿಸಿದರು. ಆದರೆ, ಕೆ.ಆರ್.ರಮೇಶಕುಮಾರ್ ಅವರು ರಾಜೀನಾಮೆ ಅಂಗೀಕರಿಸುವ ಮೂಲಕ ಸರಿಯಾದ ನ್ಯಾಯ ಒದಗಿಸಿದರು’ ಎಂದರು.