ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,‘ಸದಾಶಿವ ಆಯೋಗದ ವರದಿಯಿಂದ ಬಂಜಾರ, ಭೋವಿ, ಕೊರಚ, ಕೊರಮ ಸೇರಿ ವಿವಿಧ ಸಮುದಾಯಗಳಿಗೆ ಮರಣ ಶಾಸನ ಬರೆದಂತೆ ಆಗಲಿದೆ. ಸಚಿವ ಮುನಿಯಪ್ಪ ಅವರೆ ಖುದ್ಧಾಗಿ ಸದಾಶಿವ ಆಯೋಗ ವರದಿಯನ್ನು ಅನುಷ್ಠಾನಗೊಳಿಸಲು ಸಚಿವರು ಪ್ರತಿಭಟನೆ ಮಾಡಲು ಕುಮ್ಮಕ್ಕು ನೀಡುವುದು, ಸಂವಿಧಾನ ವಿರೋಧಿ ಚಟುವಟಿಕೆ. ಸರ್ಕಾರದಲ್ಲಿ ಜವಾಬ್ದಾರಿಯುತ ಸ್ತಾನದಲ್ಲಿದ್ದು ಇಂತಹ ಹೇಳಿಕೆ ನೀಡುವುದು ಸರಿಯಲ್ಲ’ ಎಂದರು.