ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

ಜನಪ್ರತಿನಿಧಿಗಳು, ಸಂಘಟನೆಗಳ ಬೇಡಿಕೆ ಪರಿಗಣನೆ: ಸಚಿವ ಪ್ರಿಯಾಂಕ್ ಖರ್ಗೆ

Published : 10 ಸೆಪ್ಟೆಂಬರ್ 2024, 7:04 IST
Last Updated : 10 ಸೆಪ್ಟೆಂಬರ್ 2024, 7:04 IST
ಫಾಲೋ ಮಾಡಿ
Comments
10 ವರ್ಷಗಳಲ್ಲಿ 30 ಸಾವಿರ ಕಾಮಗಾರಿಗಳನ್ನು ಕೆಕೆಆರ್‌ಡಿಬಿ ಮೂಲಕ ಅನುಷ್ಠಾನಗೊಳಿಸಲಾಗಿದೆ. 371 ಜೆ ಕಲಂ ಇರದಿದ್ದರೆ ಇಷ್ಟು ಕಾಮಗಾರಿಗಳು ಆಗುತ್ತಿರಲಿಲ್ಲ
ಪ್ರಿಯಾಂಕ್ ಖರ್ಗೆ ಜಿಲ್ಲಾ ಉಸ್ತುವಾರಿ ಸಚಿವ
‘ಪ್ರತಿ ಕ್ಷೇತ್ರದಲ್ಲಿ 100 ಕಿ.ಮೀ ಹೊಸ ರಸ್ತೆ’
ಮುಂದಿನ ಎರಡು ವರ್ಷಗಳಲ್ಲಿ ಜಿಲ್ಲೆಯ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಕನಿಷ್ಠ 100 ಕಿ.ಮೀ. ರಸ್ತೆಗಳನ್ನು ನಿರ್ಮಾಣ ಮಾಡಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಸಚಿವ ಪ್ರಿಯಾಂಕ್ ಖರ್ಗೆ ‍ಪ್ರಕಟಿಸಿದರು. ‘ಕಲ್ಯಾಣ ಪಥ ಯೋಜನೆಗಾಗಿ ಬಜೆಟ್‌ನಲ್ಲಿ ₹ 1 ಸಾವಿರ ಕೋಟಿ ಒದಗಿಸಲಾಗುತ್ತಿದೆ. ಅತ್ಯಾಧುನಿಕ ತಾಂತ್ರಿಕತೆಯನ್ನು ಅಳವಡಿಸಿ ಈ ರಸ್ತೆ ನಿರ್ಮಿಸಲಾಗುವುದು. ರಾಜ್ಯದಾದ್ಯಂತ ಪ್ರಗತಿ ಪಥ ಯೋಜನೆಯಡಿ ₹ 7 ಸಾವಿರ ಕೋಟಿ ಮೊತ್ತದಲ್ಲಿ ರಸ್ತೆ ನಿರ್ಮಿಸಲಾಗುವುದು. ಜೊತೆಗೆ ಪ್ರಧಾನಮಂತ್ರಿ ಅವರು ಗ್ರಾಮ ಸಡಕ್ ಯೋಜನೆ–2ಗೆ ಅನುಮೋದನೆ ನೀಡಿದ್ದಾರೆ. ಹೀಗಾಗಿ ಯಾರು ಬೇಡ ಅಂದರೂ ಪ್ರತಿ ಕ್ಷೇತ್ರದಲ್ಲಿ 100 ಕಿ.ಮೀ. ಹೊಸ ರಸ್ತೆಗಳು ನಿರ್ಮಾಣಗೊಳ್ಳಲಿವೆ. ರಸ್ತೆ ಗುಂಡಿಗಳನ್ನು ಮುಚ್ಚಲು ಪ್ರತಿ ಕ್ಷೇತ್ರಕ್ಕೆ ₹ 2 ಕೋಟಿ ಒದಗಿಸಲಾಗಿದೆ’ ಎಂದರು. ‘ಕಲಬುರಗಿ ನಗರದ ರಸ್ತೆಗಳ ದುರಸ್ತಿ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಪೈಪ್‌ಲೈನ್ ಅಳವಡಿಸಲು ಅಗೆದ ರಸ್ತೆಗಳನ್ನು ದುರಸ್ತಿ ಮಾಡುವಂತೆ ಎಲ್ ಅಂಡ್ ಟಿ ಕಂಪನಿಗೆ ಒಂದು ತಿಂಗಳ ಗಡುವು ನೀಡಲಾಗಿದೆ’ ಎಂದು ತಿಳಿಸಿದರು.
‘ಬಹಮನಿ ಕೋಟೆ ಅತಿಕ್ರಮಣ ಶೀಘ್ರ ತೆರವು’
‘ಬಹಮನಿ ಕೋಟೆಯ ಒಳಭಾಗದಲ್ಲಿ ವಾಸಿಸುವವರನ್ನು ತೆರವುಗೊಳಿಸುವ ನಿಟ್ಟಿನಲ್ಲಿ ಪ್ರಯತ್ನ ನಡೆದಿದ್ದು ಅವರಿಗೆ ಬೇರೆ ಕಡೆ ವಸತಿ ಸೌಲಭ್ಯ ಕಲ್ಪಿಸಬೇಕಿದೆ. ಅವರಿಗೆ ವಿದ್ಯುತ್ ನೀರು ಕೊಟ್ಟು ನಾವೇ ತಪ್ಪು ಮಾಡಿದ್ದೇವೆ. ಕೋಟೆಯ ಹೊರಭಾಗದಲ್ಲಿ ಕೆಲವರು ಅನಧಿಕೃತವಾಗಿ ಶೆಡ್‌ಗಳನ್ನು ಹಾಕಿಕೊಂಡಿರುವುದು ಗಮನಕ್ಕೆ ಬಂದಿದ್ದು ಅವರನ್ನು ಅಲ್ಲಿಂದ ಶೀಘ್ರ ತೆರವುಗೊಳಿಸಲಾಗುವುದು’ ಎಂದು ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT