ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಇಂದು ನಾವು ಎದುರಿಸುತ್ತಿರುವ ಸಮಸ್ಯೆಗಳಿಗೆ, ಸವಾಲುಗಳಿಗೆ ಸಂವಿಧಾನ ಸರಿದಾರಿಯಾಗಿದೆ. ನಾವು ಸುರಕ್ಷಿತವಾಗಿ ಬದುಕಲು, ನಮಗೋಸ್ಕರ, ನಮ್ಮ ಮುಂದಿನ ಪೀಳಿಗೆಗಾಗಿ ಸಂವಿಧಾನವನ್ನು ಅದರ ಆಶಯಗಳನ್ನು ರಕ್ಷಿಸಿಕೊಳ್ಳಲು ನಾವೆಲ್ಲರೂ ಸಂವಿಧಾನವನ್ನು ಓದಬೇಕು. ಅರ್ಥೈಸಬೇಕು. ಮೂಲತತ್ವಗಳನ್ನು ಮೈಗೂಡಿಸಿಕೊಳ್ಳಬೇಕು ಮತ್ತು ಅದರಂತೆ ನಡೆದುಕೊಳ್ಳಬೇಕಿದೆ. ಹಾಗಾಗಿ, ಈ ವಿಜಯೋತ್ಸವ ಆಯೋಜಿಸಲಾಗಿದೆ’ ಎಂದರು.