‘ಮಧುಕರ್ ಶೆಟ್ಟಿ ಅವರ ಕಾರ್ಯದಕ್ಷತೆ, ಪ್ರಾಮಾಣಿಕತೆ ಏನು ಎಂಬುದು ಮುಂದಿನ ಪೀಳಿಗೆಗೆ ಗೊತ್ತಾಗಬೇಕು. ಆದ್ದರಿಂದ ಸ್ಮಾರಕ ನಿರ್ಮಾಣ ಮಾಡಬೇಕು. ಇದಕ್ಕೆ ನಾನೂ ಕೂಡ ಆರ್ಥಿಕ ಸಹಾಯ ಮಾಡುತ್ತೇನೆ. ಶೆಟ್ಟಿ ಅವರಿಗೆ ತಮ್ಮ ವೃತ್ತಿ ಜೀವನದಲ್ಲಿ ಸಿಗಬೇಕಾದ ಮಾನ್ಯತೆ ಸಿಗಲಿಲ್ಲ. ಪ್ರಾಮಾಣಿಕ ಅಧಿಕಾರಿಗಳಿಗೆ ಆಡಳಿತ ಯಾವಾಗಲೂ ವಿರೋಧಿಯಾಗಿರುತ್ತದೆ. ಹಿಂದಿನ ಸರ್ಕಾರ, ಈಗಿನ ಸರ್ಕಾರ ಅಂತ ಅಲ್ಲ, ಎಲ್ಲರೂ ಒಂದೇ’ ಎಂದರು.