<p><strong>ಕಲಬುರಗಿ</strong>: ‘ಕಲಬುರಗಿ ತಾಲ್ಲೂಕಿನ ಕಾಳಗನೂರಿನಲ್ಲಿ ನಿಯಮಗಳನ್ನು ಉಲ್ಲಂಘಿಸಿ ಕಾನೂನು ಬಾಹಿರವಾಗಿ ಶಾಲೆಯ ಸಮೀಪವೇ ಕಲ್ಯಾಣ ಮಂಟಪ ನಿರ್ಮಿಸಲಾಗುತ್ತಿದೆ. ಇದರ ಹಿಂದೆ ಪ್ರಭು ರಾವೂರ ಎಂಬುವರು ಇದ್ದಾರೆ’ ಎಂದು ಸಾಮಾಜಿಕ ಹೋರಾಟಗಾರ ರಾಮ ರಾಠೋಡ ದೂರಿದರು.</p>.<p>ನಗರದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ‘ಕಾಳಲಿಂಗೇಶ್ವರ ದೇವಸ್ಥಾನದ ಬಳಿ ಕಲ್ಯಾಣ ಮಂಟಪ ನಿರ್ಮಿಸಲಾಗುತ್ತಿದೆ. ಅದಕ್ಕೆ ಸಣ್ಣೂರ ಪಿಡಿಒ, ಅಧ್ಯಕ್ಷರು ಹಾಗೂ ತಾಲ್ಲೂಕು ಪಂಚಾಯಿತಿ ಅಧಿಕಾರಿ ನೆರವು ನೀಡಿದ್ದಾರೆ. ಈ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರ ಗಮನ ಸೆಳೆದ ಬಳಿಕ ಲೋಕೋಪಯೋಗಿ ಇಲಾಖೆಯ ಎಇಇ ಸ್ಥಳ ಪರಿಶೀಲಿಸಿ, ದಾಖಲೆಗಳನ್ನು ಪರಿಶೀಲಿಸಿ, ಈ ಪ್ರದೇಶವು ಕಲ್ಯಾಣ ಮಂಟಪ ನಿರ್ಮಿಸಲು ಯೋಗ್ಯವಿಲ್ಲ ಎಂದು ಪತ್ರ ನೀಡಿದ್ದಾರೆ’ ಎಂದು ವಿವರಿಸಿದರು.</p>.<p>‘ಕಲ್ಯಾಣ ಮಂಟಪಕ್ಕೆ ಈಗಾಗಲೇ ₹50 ಲಕ್ಷ ಮಂಜೂರಾಗಿದೆ. ಸಾರ್ವಜನಿಕರ ತೆರಿಗೆ ದುಡ್ಡು ಪೋಲಾಗುವ ಅಪಾಯವಿದೆ. ಸಂಬಂಧಪಟ್ಟ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು’ ಎಂದು ಒತ್ತಾಯಿಸಿದರು.</p>.<p>ಪತ್ರಿಕಾಗೋಷ್ಠಿಯಲ್ಲಿ ನಾಗೇಂದ್ರಪ್ಪ ಮೀಸಿ, ಜಗಪ್ಪ ಕಂಟೀಕರ, ಗಿಡ್ಡೆಪ್ಪ ಲಕ್ಷ್ಮಣ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ</strong>: ‘ಕಲಬುರಗಿ ತಾಲ್ಲೂಕಿನ ಕಾಳಗನೂರಿನಲ್ಲಿ ನಿಯಮಗಳನ್ನು ಉಲ್ಲಂಘಿಸಿ ಕಾನೂನು ಬಾಹಿರವಾಗಿ ಶಾಲೆಯ ಸಮೀಪವೇ ಕಲ್ಯಾಣ ಮಂಟಪ ನಿರ್ಮಿಸಲಾಗುತ್ತಿದೆ. ಇದರ ಹಿಂದೆ ಪ್ರಭು ರಾವೂರ ಎಂಬುವರು ಇದ್ದಾರೆ’ ಎಂದು ಸಾಮಾಜಿಕ ಹೋರಾಟಗಾರ ರಾಮ ರಾಠೋಡ ದೂರಿದರು.</p>.<p>ನಗರದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ‘ಕಾಳಲಿಂಗೇಶ್ವರ ದೇವಸ್ಥಾನದ ಬಳಿ ಕಲ್ಯಾಣ ಮಂಟಪ ನಿರ್ಮಿಸಲಾಗುತ್ತಿದೆ. ಅದಕ್ಕೆ ಸಣ್ಣೂರ ಪಿಡಿಒ, ಅಧ್ಯಕ್ಷರು ಹಾಗೂ ತಾಲ್ಲೂಕು ಪಂಚಾಯಿತಿ ಅಧಿಕಾರಿ ನೆರವು ನೀಡಿದ್ದಾರೆ. ಈ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರ ಗಮನ ಸೆಳೆದ ಬಳಿಕ ಲೋಕೋಪಯೋಗಿ ಇಲಾಖೆಯ ಎಇಇ ಸ್ಥಳ ಪರಿಶೀಲಿಸಿ, ದಾಖಲೆಗಳನ್ನು ಪರಿಶೀಲಿಸಿ, ಈ ಪ್ರದೇಶವು ಕಲ್ಯಾಣ ಮಂಟಪ ನಿರ್ಮಿಸಲು ಯೋಗ್ಯವಿಲ್ಲ ಎಂದು ಪತ್ರ ನೀಡಿದ್ದಾರೆ’ ಎಂದು ವಿವರಿಸಿದರು.</p>.<p>‘ಕಲ್ಯಾಣ ಮಂಟಪಕ್ಕೆ ಈಗಾಗಲೇ ₹50 ಲಕ್ಷ ಮಂಜೂರಾಗಿದೆ. ಸಾರ್ವಜನಿಕರ ತೆರಿಗೆ ದುಡ್ಡು ಪೋಲಾಗುವ ಅಪಾಯವಿದೆ. ಸಂಬಂಧಪಟ್ಟ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು’ ಎಂದು ಒತ್ತಾಯಿಸಿದರು.</p>.<p>ಪತ್ರಿಕಾಗೋಷ್ಠಿಯಲ್ಲಿ ನಾಗೇಂದ್ರಪ್ಪ ಮೀಸಿ, ಜಗಪ್ಪ ಕಂಟೀಕರ, ಗಿಡ್ಡೆಪ್ಪ ಲಕ್ಷ್ಮಣ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>